ಜನರ ಬಗ್ಗೆ ಕಾಳಜಿ ವಹಿಸುವ ಕಾಂಗ್ರೆಸ್: ಸೇವಾ ಮನೋಭಾವ ಇಲ್ಲದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿ ಟಿ.ವೆಂಕಟರಮಣಯ್ಯ

ಕಾಂಗ್ರೆಸ್ ಪಕ್ಷಕ್ಕೆ ಈ ದೇಶದ ಜನರ ಬಗ್ಗೆ ಕಾಳಜಿ ಇದೆ. ಬೆಲೆ ಏರಿಕೆ ಮಾಡಿ ಜನರ ಜೀವನದ ಬರೆ ಎಳೆಯುವ, ಸೇವಾ ಮನೋಭಾವ ಇಲ್ಲದ‌ ಬಿಜೆಪಿ ಪಕ್ಷವನ್ನು ಮನೆಗೆ ಕಳುಹಿಸಿ ಎಂದು ಹಾಲಿ ಶಾಸಕ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಟಿ.ವೆಂಕಟರಮಣಯ್ಯ ತಿಳಿಸಿದರು.

ನಗರದ ಕರೇನಹಳ್ಳಿ ವಾರ್ಡ್ ನಲ್ಲಿ ಚುನಾವಣಾ ಪ್ರಚಾರದ ವೇಳೆ ಮತದಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ ಯೋಜನೆ, ಸವಲತ್ತುಗಳನ್ನು ವಜಾಗೊಳಿಸಿರುವ ಬಿಜೆಪಿ ಸರ್ಕಾರ ಎಂದು ಕಿಡಿಕಾರಿದರು.

ಕರೇನಹಳ್ಳಿ ವಾರ್ಡ್ ನ್ನು ಎಲ್ಲಾ ರೀತಿಯಲ್ಲಿ ಅಭಿವೃದ್ಧಿ ಮಾಡಿ ಸಿಂಗಪುರವನ್ನಾಗಿ ಮಾಡುತ್ತೇನೆ, ಆದ್ದರಿಂದ ನಿದ್ದೆಗಣ್ಣಿನಲ್ಲಿ ಕೂಡ ಕಾಂಗ್ರೆಸ್ ಗೆ ಮತ ನೀಡಿ, ಅಭಿವೃದ್ಧಿ ಕೆಲಸಗಳನ್ನು ಆಶಿಸಿ ಎಂದರು.

ಬಿಜೆಪಿ ಪ್ರಣಾಳಿಕೆಯಲ್ಲಿ ಇದ್ದಂತಹ ಯಾವೊಂದು ಭರವಸೆಯನ್ನು ಈಡೇರಿಸಿಲ್ಲ, ಇನ್ನೂ ಜಿಎಸ್ ಟಿ, ನೋಟು ಅಮಾನೀಕರಣ ಸೇರಿದಂತೆ ಜನ ವಿರೋಧಿ ನೀತಿಗಳನ್ನು ಜಾರಿಗೆ ತಂದು ಜನ ಸಾಮಾನ್ಯರಿಗೆ ತೊಂದರೆ ಕೊಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಲೋಕಸಭೆ ಚುನಾವಣೆಯಲ್ಲಿ ಅಚ್ಛೇದಿನ್ ಮಾಡುವ ಆಸ್ವಾಸನೆ ಕೊಟ್ಟ ಬಿಜೆಪಿ. ಅಧಿಕಾರಕ್ಕೆ ಬಂದ ಮೇಲೆ‌ ಒಂದೊಂದೇ ಯೋಜನೆ ಬಂದ್ ಮಾಡುತ್ತಿದ್ದಾರೆ. ಬಿಜೆಪಿ‌ ಸರ್ಕಾರದ ಸಾಧನೆ, ಯೋಜನೆ, ಕೊಡುಗೆ ಶುನ್ಯವಾಗಿದೆ ಎಂದರು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಆರೋಗ್ಯ, ಶಿಕ್ಷಣ, ಉದ್ಯೋಗ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡಿತ್ತೇವೆ, ರೈತ ಸ್ನೇಹಿ ಯೋಜನೆ ಜಾರಿಗೆ ತರಲಾಗುವುದು, ಪ್ರತಿ ಕುಟುಂಬದ ಯಜಮಾನಿಗೆ, ನಿರುದ್ಯೋಗ ಯುವಕ ಯುವತಿಯರಿಗೆ, ವೃದ್ಧರಿಗೆ ಪ್ರತಿ ತಿಂಗಳು ಇಂತಿಷ್ಟು ಎಂದು ಸಹಾಯ ಧನ ನೀಡಲಾಗುವುದು. ಹಸ್ತದ ಗುರುತು ಶಾಂತಿ ಹಾಗೂ ಅಭಿವೃದ್ಧಿ ಸಂಕೇತ ಆದ್ದರಿಂದ ಶಾಂತಿ ಹಾಗೂ ಅಭಿವೃದ್ಧಿ ಗೆ ಕಾಂಗ್ರೆಸ್ ಮತ ನೀಡಿ ಎಂದರು.

ಶಾಂತಿನಗರ ರಸ್ತೆಗಳಿಗೆ‌ಸಂಪೂರ್ಣ ಕಾಂಕ್ರಿಟ್ ರಸ್ತೆ ನಿರ್ಮಾಣ.. ಸ್ತ್ರೀ ಶಕ್ತಿಗಳ‌ ಜೊತೆ ಸಭೆ‌ ಮಾಡವ್ರೆ. ಕೊರೊನಾ ಅವಧಿಯಲ್ಲಿ ನಾನು ಕಳೆದು ಹೋಗಿದ್ದೆ‌ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಕೊರೊನಾದಲ್ಲಿ 40 ಪಾಯಿಂಟ್ ಗಳಲ್ಲಿ ಅನ್ನದಾನ, ಚಾಲಕರಿಲ್ಲದೇ ನಾನೇ ಡ್ರೈವಿಂಗ್ ಮಾಡುಕೊಂಡು ಅರಿವು‌ ಮೂಡಿಸಿದ್ದೇನೆ. ಎಚ್ಚರದಿಂದ ಇರಬೇಕು. ಕರೇನಹಳ್ಳಿಯನ್ನು ಸಿಂಗಾಪುರ ಮಾಡ್ತೀನಿ. ಮಧುರೆ ಹೋಬಳಿಯಲ್ಲಿ ಶೇ 90 ಕೆಲಸಗಳಾಗಿವೆ. ಮಾದರಿ ತಾಲೂಕು ಮಾಡಿಕೊಡುತ್ತೇನೆ ಎಂದರು.

ಕರೇನಹಳ್ಳಿ ಭಾಗಕ್ಕೆ‌ ಶಾಸಕರು‌ ಮಾಡಿರುವ ಅಭಿವೃದ್ದಿ ಹೇಳತೀರದು.‌ 2013ರಲ್ಲಿ ಶಾಸಕರು‌ಕೊಟ್ಟ ಮಾತಿನಂತೆ ಕರೇನಹಳ್ಳಿಯನ್ನ ಬಿಳೇನಹಳ್ಳಿ ಮಾಡುತ್ರೇವೆ ಎಂದು ಹೇಳಿದ್ದರು.‌ ಈ ಭಾಗದಲ್ಲಿ ರಸ್ತೆ, ಚರಂಡಿ ದುರಸ್ತಿ ಸೇರಿದಂತೆ ಇತರೆ ಮುಲಸೌಕರ್ಯ ಒದಗಿಸಲಾಗಿದೆ ಎಂದು ಕೆಪಿಸಿಸಿ ಸದಸ್ಯ ಹೇಮಂತರಾಜು ಹೇಳಿದರು.

ನೇಯ್ಗೆ ಉದ್ಯಮ ಊರಿನ ಹೊರಗೂ ವಿಸ್ತರಿಸಿದೆ.‌ ಹೆಚ್ಚು ನೇಕಾರರಿರುವ ಪ್ರದೇಶ ಕರೇನಹಳ್ಳಿಯಾಗಿದೆ. ನೇಯ್ಗೆ ಉದ್ಯಮ ಉಸಿರಾಡಲು ಕಾಂಗ್ರೆಸ್ ನೇತಾರ ಸಿದ್ದರಾಮಯ್ಯ ಕಾರಣ ಎಂದರು.

20 ಎಚ್.ಪಿ ವಿದ್ಯುತ್ ನ್ನು ಉಚಿತವಾಗಿ ಕೊಡುವ ಭರವಸೆ ಕಾಂಗ್ರೆಸ್ ನೀಡಿದೆ, ಇತಿಹಾಸಲ್ಲಿ ನೇಕಾರರಿಗೆ ಮನೆ ಕಟ್ಟಿಕೊಡಲು‌ ಸಹಾಯಧನ ನೀಡಿತು. 175 ಮನೆ ಕೊಟ್ಟಿದ್ದಾರೆ. ಕರೇನಹಳ್ಳಿ‌ ಹಾಗೂ ದರ್ಗಾ ಜೋಗಹಳ್ಳಿಯಲ್ಲಿ ಗುಂಪು ಮನೆ‌ ಕಟ್ಟಿಕೊಡುವ ಯೋಜನೆ‌ ಇದೆ. ಶಾಸಕರ ಋಣ ತೀರಿಸಬೇಕಿದೆ. ಮತ ಭಿಕ್ಷೆ ಹಾಕಬೇಕಾಗಿದೆ ಎಂದು ತಿಳಿಸಿದರು.

ನಂತರ ನಗರಸಭಾ ಸದಸ್ಯ ಮೋಹನ್ ಕುಮಾರ್ ಮಾತನಾಡಿ, ಯಾವ ವಾರ್ಡಿನಲ್ಲೂ ಆಗದ ಅಭಿವೃದ್ಧಿ ಇಲ್ಲಾಗಿದೆ. ಜನರ ಕಷ್ಟ ಸುಖ ಅರಿತು, ರಸ್ತೆಗಳಿಗೆ ಕಾಂಕ್ರಿಟ್ ಹಾಕಿದ್ದಾರೆ. ಓವರ್ ಟ್ಯಾಂಕ್‌ ನಿರ್ಮಾಣ ಆಗುತ್ತಿದೆ. ಸದ್ಯ ನೀರಿನ‌ ಸಮಸ್ಯೆ ಬಗೆಹರಿದಿದೆ ಎಂದರು.

ಈ ವೇಳೆ ಲಕ್ಷ್ಮಿಪತಿ, ರಾಜಘಟ್ಟ ರವಿ, ಕೆ.ಪಿ.ಜಗನ್ನಾಥ್, ರಾಜೇಂದ್ರ ಜೆ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

5 hours ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

13 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

14 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

2 days ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

2 days ago