ದೇಶವನ್ನು ಆಳುವುದು ಎಂದರೆ ಅದು ಅಧಿಕಾರದ ವೈಭೋಗವಲ್ಲ. ದೇಶವನ್ನು ಆಳುವುದು ಅಂದರೆ ಜನರ ಬದುಕನ್ನ ಕಟ್ಟಿಕೊಡುವ ಜವಾಬ್ದಾರಿ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರು ಹೇಳಿದರು.
ನಗರದ ನೆಲದಾಂಜನೇಯಸ್ವಾಮಿ ದೇವಸ್ಥಾನದ ಬಳಿ ನಡೆದ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಸಮಾವೇಶ ಹಾಗು ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ಮೋದಿಗೆ ಮತ, ದೇಶಕ್ಕೆ ಹಿತ” ಎಂಬುದನ್ನು ಮನವರಿಕೆ ಮಾಡಬೇಕು. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ NDA ಗೆಲ್ಲಿಸಿ ಮೋದಿ ಅವರಿಗೆ ಶಕ್ತಿ ತುಂಬಬೇಕು ಎಂದರು.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ನಿನ್ನೆ ಮೈಸೂರಿನಲ್ಲಿ ಹೇಳಿದಂತೆ ಮೋದಿ ಅವರು ನಮ್ಮ ದೇಶಕ್ಕೆ ಗೌರವ ತರುವಂಥ ಕೆಲಸ ಮಾಡಿದ್ದಾರೆ. ಮುಂದಿನ ಐದು ವರ್ಷಗಳ ಕಾಲ ನಮ್ಮ ದೇಶ ಇನ್ನಷ್ಟು ವೇಗವಾಗಿ ಬೆಳೆಯಬೇಕು ಅಂದರೆ ಮೋದಿ ಅವರಿಗೆ 400 ಸೀಟು ಕೊಟ್ಟು ಅವರ ಕೈ ಬಲಪಡಿಸಬೇಕು ಎಂದರು.
ನಮ್ಮ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹೆಸರಿನಲ್ಲಿ ರಾಮ ಇದೆ, ಅವರಿಗೆ ಟಿಕೆಟ್ ಕೊಟ್ಟವರ ಹೆಸರಲ್ಲೂ ರಾಮ ಇದೆ. ಆದರೆ ಅವರ ಹೃದಯದಲ್ಲಿ ರಾಮನ ಮೇಲೆ ಭಕ್ತಿ ಇಲ್ಲ ಎಂದು ಕಿಡಿಕಾರಿದರು.
ನಮ್ಮ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಹಾಲು ಜೇನಿನಂತೆ ಬೆರೆತು ಮನೆ ಮನೆಗೂ ಭೇಟಿ ಕೊಟ್ಟು ಈ ಎಲ್ಲ ವಿಷಯಗಳ ಬಗ್ಗೆ ಮತದಾರರಲ್ಲಿ ಅರಿವು ಮೂಡಿಸಬೇಕು.
ನಂತರ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮಾತನಾಡಿ, ಕಾಂಗ್ರೆಸ್ ಪಕ್ಷ 60 ವರ್ಷಗಳ ಕಾಲ ಈ ದೇಶವನ್ನ ಹಾಳು ಮಾಡಿದೆಯೇ ಹೊರತು ಜನರ ಬದುಕಲ್ಲಿ ಯಾವುದೇ ಬದಲಾವಣೆ ತಂದಿಲ್ಲ ಎಂದರು.
ಮುಂದಿನ ಐದು ವರ್ಷಗಳ ಕಾಲ ನಮ್ಮ ದೇಶ ಇನ್ನಷ್ಟು ವೇಗವಾಗಿ ಬೆಳೆಯಬೇಕು ಅಂದರೆ ಮೋದಿ ಅವರಿಗೆ 400 ಸೀಟು ಕೊಟ್ಟು ಅವರ ಕೈ ಬಲಪಡಿಸಬೇಕು ಎಂದು ತಿಳಿಸಿದರು.
ಈ ವೇಳೆ ಶಾಸಕ ಧೀರಜ್ ಮುನಿರಾಜ್, ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…
ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…
ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…
ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…
ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…
ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…