ದೇಶವನ್ನು ಆಳುವುದು ಎಂದರೆ ಅದು ಅಧಿಕಾರದ ವೈಭೋಗವಲ್ಲ. ದೇಶವನ್ನು ಆಳುವುದು ಅಂದರೆ ಜನರ ಬದುಕನ್ನ ಕಟ್ಟಿಕೊಡುವ ಜವಾಬ್ದಾರಿ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರು ಹೇಳಿದರು.
ನಗರದ ನೆಲದಾಂಜನೇಯಸ್ವಾಮಿ ದೇವಸ್ಥಾನದ ಬಳಿ ನಡೆದ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಸಮಾವೇಶ ಹಾಗು ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ಮೋದಿಗೆ ಮತ, ದೇಶಕ್ಕೆ ಹಿತ” ಎಂಬುದನ್ನು ಮನವರಿಕೆ ಮಾಡಬೇಕು. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ NDA ಗೆಲ್ಲಿಸಿ ಮೋದಿ ಅವರಿಗೆ ಶಕ್ತಿ ತುಂಬಬೇಕು ಎಂದರು.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ನಿನ್ನೆ ಮೈಸೂರಿನಲ್ಲಿ ಹೇಳಿದಂತೆ ಮೋದಿ ಅವರು ನಮ್ಮ ದೇಶಕ್ಕೆ ಗೌರವ ತರುವಂಥ ಕೆಲಸ ಮಾಡಿದ್ದಾರೆ. ಮುಂದಿನ ಐದು ವರ್ಷಗಳ ಕಾಲ ನಮ್ಮ ದೇಶ ಇನ್ನಷ್ಟು ವೇಗವಾಗಿ ಬೆಳೆಯಬೇಕು ಅಂದರೆ ಮೋದಿ ಅವರಿಗೆ 400 ಸೀಟು ಕೊಟ್ಟು ಅವರ ಕೈ ಬಲಪಡಿಸಬೇಕು ಎಂದರು.
ನಮ್ಮ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹೆಸರಿನಲ್ಲಿ ರಾಮ ಇದೆ, ಅವರಿಗೆ ಟಿಕೆಟ್ ಕೊಟ್ಟವರ ಹೆಸರಲ್ಲೂ ರಾಮ ಇದೆ. ಆದರೆ ಅವರ ಹೃದಯದಲ್ಲಿ ರಾಮನ ಮೇಲೆ ಭಕ್ತಿ ಇಲ್ಲ ಎಂದು ಕಿಡಿಕಾರಿದರು.
ನಮ್ಮ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಹಾಲು ಜೇನಿನಂತೆ ಬೆರೆತು ಮನೆ ಮನೆಗೂ ಭೇಟಿ ಕೊಟ್ಟು ಈ ಎಲ್ಲ ವಿಷಯಗಳ ಬಗ್ಗೆ ಮತದಾರರಲ್ಲಿ ಅರಿವು ಮೂಡಿಸಬೇಕು.
ನಂತರ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮಾತನಾಡಿ, ಕಾಂಗ್ರೆಸ್ ಪಕ್ಷ 60 ವರ್ಷಗಳ ಕಾಲ ಈ ದೇಶವನ್ನ ಹಾಳು ಮಾಡಿದೆಯೇ ಹೊರತು ಜನರ ಬದುಕಲ್ಲಿ ಯಾವುದೇ ಬದಲಾವಣೆ ತಂದಿಲ್ಲ ಎಂದರು.
ಮುಂದಿನ ಐದು ವರ್ಷಗಳ ಕಾಲ ನಮ್ಮ ದೇಶ ಇನ್ನಷ್ಟು ವೇಗವಾಗಿ ಬೆಳೆಯಬೇಕು ಅಂದರೆ ಮೋದಿ ಅವರಿಗೆ 400 ಸೀಟು ಕೊಟ್ಟು ಅವರ ಕೈ ಬಲಪಡಿಸಬೇಕು ಎಂದು ತಿಳಿಸಿದರು.
ಈ ವೇಳೆ ಶಾಸಕ ಧೀರಜ್ ಮುನಿರಾಜ್, ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…