ಜನರ ಬದುಕನ್ನ ಕಟ್ಟಿಕೊಡುವ ಕೆಲಸ ಮಾಡುವೆ- ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್

ದೇಶವನ್ನು ಆಳುವುದು ಎಂದರೆ ಅದು ಅಧಿಕಾರದ ವೈಭೋಗವಲ್ಲ. ದೇಶವನ್ನು ಆಳುವುದು ಅಂದರೆ ಜನರ ಬದುಕನ್ನ ಕಟ್ಟಿಕೊಡುವ ಜವಾಬ್ದಾರಿ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರು ಹೇಳಿದರು.

ನಗರದ ನೆಲದಾಂಜನೇಯಸ್ವಾಮಿ ದೇವಸ್ಥಾನದ ಬಳಿ ನಡೆದ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಸಮಾವೇಶ ಹಾಗು ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ಮೋದಿಗೆ ಮತ, ದೇಶಕ್ಕೆ ಹಿತ” ಎಂಬುದನ್ನು ಮನವರಿಕೆ ಮಾಡಬೇಕು. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ NDA ಗೆಲ್ಲಿಸಿ ಮೋದಿ ಅವರಿಗೆ ಶಕ್ತಿ ತುಂಬಬೇಕು ಎಂದರು.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ನಿನ್ನೆ ಮೈಸೂರಿನಲ್ಲಿ ಹೇಳಿದಂತೆ ಮೋದಿ ಅವರು ನಮ್ಮ ದೇಶಕ್ಕೆ ಗೌರವ ತರುವಂಥ ಕೆಲಸ ಮಾಡಿದ್ದಾರೆ. ಮುಂದಿನ ಐದು ವರ್ಷಗಳ ಕಾಲ ನಮ್ಮ ದೇಶ ಇನ್ನಷ್ಟು ವೇಗವಾಗಿ ಬೆಳೆಯಬೇಕು ಅಂದರೆ ಮೋದಿ ಅವರಿಗೆ 400 ಸೀಟು ಕೊಟ್ಟು ಅವರ ಕೈ ಬಲಪಡಿಸಬೇಕು ಎಂದರು.

ಶ್ರೀ ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಮೋದಿ ಅವರು ನಿರ್ಮಿಸಿರುವ ನೂತನ ರಾಮಮಂದಿರದ ಉದ್ಘಾಟನೆಗೆ ಕಾಂಗ್ರೆಸ್ ಪಕ್ಷದ ಯಾವ ನಾಯಕರೂ ಹೋಗಲಿಲ್ಲ.

ನಮ್ಮ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹೆಸರಿನಲ್ಲಿ ರಾಮ ಇದೆ, ಅವರಿಗೆ ಟಿಕೆಟ್ ಕೊಟ್ಟವರ ಹೆಸರಲ್ಲೂ ರಾಮ ಇದೆ. ಆದರೆ ಅವರ ಹೃದಯದಲ್ಲಿ ರಾಮನ ಮೇಲೆ ಭಕ್ತಿ ಇಲ್ಲ ಎಂದು ಕಿಡಿಕಾರಿದರು.

ನಮ್ಮ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಹಾಲು ಜೇನಿನಂತೆ ಬೆರೆತು ಮನೆ ಮನೆಗೂ ಭೇಟಿ ಕೊಟ್ಟು ಈ ಎಲ್ಲ ವಿಷಯಗಳ ಬಗ್ಗೆ ಮತದಾರರಲ್ಲಿ ಅರಿವು ಮೂಡಿಸಬೇಕು.

ನಂತರ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮಾತನಾಡಿ, ಕಾಂಗ್ರೆಸ್ ಪಕ್ಷ 60 ವರ್ಷಗಳ ಕಾಲ ಈ ದೇಶವನ್ನ ಹಾಳು ಮಾಡಿದೆಯೇ ಹೊರತು ಜನರ ಬದುಕಲ್ಲಿ ಯಾವುದೇ ಬದಲಾವಣೆ ತಂದಿಲ್ಲ ಎಂದರು.

ಲೋಕಸಭೆ ಚುನಾವಣೆಯಲ್ಲಿ ಹೇಗಿದ್ದರೂ 40 ಸೀಟು ದಾಟುವುದಿಲ್ಲ ಎಂದು ಗ್ಯಾರೆಂಟಿ ಮಾಡಿಕೊಂಡಿರುವ ಕಾಂಗ್ರೆಸ್ ಪಕ್ಷ ಮನಬಂದಂತೆ ಗ್ಯಾರೆಂಟಿಗಳನ್ನು ಘೋಷಣೆ ಮಾಡಿ ಮನೆ ಮನೆಗೂ ಬೋಗಸ್ ಗ್ಯಾರೆಂಟಿ ಕಾರ್ಡ್ ಹಂಚುವ ಮೂಲಕ ಮತದಾರರ ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದೆ ಎಂದು ಗುಡುಗಿದರು.

ಮುಂದಿನ ಐದು ವರ್ಷಗಳ ಕಾಲ ನಮ್ಮ ದೇಶ ಇನ್ನಷ್ಟು ವೇಗವಾಗಿ ಬೆಳೆಯಬೇಕು ಅಂದರೆ ಮೋದಿ ಅವರಿಗೆ 400 ಸೀಟು ಕೊಟ್ಟು ಅವರ ಕೈ ಬಲಪಡಿಸಬೇಕು ಎಂದು ತಿಳಿಸಿದರು.

ಈ ವೇಳೆ ಶಾಸಕ ಧೀರಜ್ ಮುನಿರಾಜ್, ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Ramesh Babu

Journalist

Recent Posts

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

4 hours ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

5 hours ago

ದೊಡ್ಡಬಳ್ಳಾಪುರ ರೈಲ್ವೆ ಸ್ಟೇಷನ್ ಬಳಿ ಅಂಡರ್ ಪಾಸ್ ಅವೈಜ್ಞಾನಿಕ- ಮೇಲ್ಸೇತುವೆ ಅಗತ್ಯ- ಸಂಸದ ಡಾ. ಕೆ. ಸುಧಾಕರ್

ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯಗಳು ತಲುಪುವಂತೆ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ…

5 hours ago

ಮುಂದಿನ ದಿನಗಳಲ್ಲಿ 1000 ಸಬ್ ಇನ್ಸ್ ಪೆಕ್ಟರ್, 8000 ಕಾನ್ಸ್ಟೇಬಲ್ ಗಳ ನೇಮಕ – ಗೃಹ ಸಚಿವ ಪರಮೇಶ್ವರ್

  ಪೊಲೀಸ್ ಇಲಾಖೆಯಲ್ಲಿ 1000 ಸಬ್ ಇನ್ಸ್ಪೆಕ್ಟರ್ ಹಾಗೂ 8000 ಕಾನ್ಸ್ಟೇಬಲ್ ಗಳನ್ನು ಆದಷ್ಟು ಶೀಘ್ರ ನೇಮಕ ಮಾಡಲಾಗುವುದು ಎಂದು…

5 hours ago

ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಇಂದು ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ…

8 hours ago

ಪಿಯುಸಿ ವಿದ್ಯಾರ್ಥಿಗಳಿಗೆ National Academic Depository (NAD) – DigiLocker ಮೂಲಕ ಫಲಿತಾಂಶದ ದಿನವೇ ಅಂಕಪಟ್ಟಿ

2025-26ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಫಲಿತಾಂಶ ಪ್ರಕಟವಾದ ದಿನವೇ National Academic Depository…

12 hours ago