ದೇಶವನ್ನು ಆಳುವುದು ಎಂದರೆ ಅದು ಅಧಿಕಾರದ ವೈಭೋಗವಲ್ಲ. ದೇಶವನ್ನು ಆಳುವುದು ಅಂದರೆ ಜನರ ಬದುಕನ್ನ ಕಟ್ಟಿಕೊಡುವ ಜವಾಬ್ದಾರಿ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರು ಹೇಳಿದರು.
ನಗರದ ನೆಲದಾಂಜನೇಯಸ್ವಾಮಿ ದೇವಸ್ಥಾನದ ಬಳಿ ನಡೆದ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಸಮಾವೇಶ ಹಾಗು ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ಮೋದಿಗೆ ಮತ, ದೇಶಕ್ಕೆ ಹಿತ” ಎಂಬುದನ್ನು ಮನವರಿಕೆ ಮಾಡಬೇಕು. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ NDA ಗೆಲ್ಲಿಸಿ ಮೋದಿ ಅವರಿಗೆ ಶಕ್ತಿ ತುಂಬಬೇಕು ಎಂದರು.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ನಿನ್ನೆ ಮೈಸೂರಿನಲ್ಲಿ ಹೇಳಿದಂತೆ ಮೋದಿ ಅವರು ನಮ್ಮ ದೇಶಕ್ಕೆ ಗೌರವ ತರುವಂಥ ಕೆಲಸ ಮಾಡಿದ್ದಾರೆ. ಮುಂದಿನ ಐದು ವರ್ಷಗಳ ಕಾಲ ನಮ್ಮ ದೇಶ ಇನ್ನಷ್ಟು ವೇಗವಾಗಿ ಬೆಳೆಯಬೇಕು ಅಂದರೆ ಮೋದಿ ಅವರಿಗೆ 400 ಸೀಟು ಕೊಟ್ಟು ಅವರ ಕೈ ಬಲಪಡಿಸಬೇಕು ಎಂದರು.
ನಮ್ಮ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹೆಸರಿನಲ್ಲಿ ರಾಮ ಇದೆ, ಅವರಿಗೆ ಟಿಕೆಟ್ ಕೊಟ್ಟವರ ಹೆಸರಲ್ಲೂ ರಾಮ ಇದೆ. ಆದರೆ ಅವರ ಹೃದಯದಲ್ಲಿ ರಾಮನ ಮೇಲೆ ಭಕ್ತಿ ಇಲ್ಲ ಎಂದು ಕಿಡಿಕಾರಿದರು.
ನಮ್ಮ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಹಾಲು ಜೇನಿನಂತೆ ಬೆರೆತು ಮನೆ ಮನೆಗೂ ಭೇಟಿ ಕೊಟ್ಟು ಈ ಎಲ್ಲ ವಿಷಯಗಳ ಬಗ್ಗೆ ಮತದಾರರಲ್ಲಿ ಅರಿವು ಮೂಡಿಸಬೇಕು.
ನಂತರ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮಾತನಾಡಿ, ಕಾಂಗ್ರೆಸ್ ಪಕ್ಷ 60 ವರ್ಷಗಳ ಕಾಲ ಈ ದೇಶವನ್ನ ಹಾಳು ಮಾಡಿದೆಯೇ ಹೊರತು ಜನರ ಬದುಕಲ್ಲಿ ಯಾವುದೇ ಬದಲಾವಣೆ ತಂದಿಲ್ಲ ಎಂದರು.
ಮುಂದಿನ ಐದು ವರ್ಷಗಳ ಕಾಲ ನಮ್ಮ ದೇಶ ಇನ್ನಷ್ಟು ವೇಗವಾಗಿ ಬೆಳೆಯಬೇಕು ಅಂದರೆ ಮೋದಿ ಅವರಿಗೆ 400 ಸೀಟು ಕೊಟ್ಟು ಅವರ ಕೈ ಬಲಪಡಿಸಬೇಕು ಎಂದು ತಿಳಿಸಿದರು.
ಈ ವೇಳೆ ಶಾಸಕ ಧೀರಜ್ ಮುನಿರಾಜ್, ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…