ದೇಶವನ್ನು ಆಳುವುದು ಎಂದರೆ ಅದು ಅಧಿಕಾರದ ವೈಭೋಗವಲ್ಲ. ದೇಶವನ್ನು ಆಳುವುದು ಅಂದರೆ ಜನರ ಬದುಕನ್ನ ಕಟ್ಟಿಕೊಡುವ ಜವಾಬ್ದಾರಿ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರು ಹೇಳಿದರು.
ನಗರದ ನೆಲದಾಂಜನೇಯಸ್ವಾಮಿ ದೇವಸ್ಥಾನದ ಬಳಿ ನಡೆದ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಸಮಾವೇಶ ಹಾಗು ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ಮೋದಿಗೆ ಮತ, ದೇಶಕ್ಕೆ ಹಿತ” ಎಂಬುದನ್ನು ಮನವರಿಕೆ ಮಾಡಬೇಕು. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ NDA ಗೆಲ್ಲಿಸಿ ಮೋದಿ ಅವರಿಗೆ ಶಕ್ತಿ ತುಂಬಬೇಕು ಎಂದರು.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ನಿನ್ನೆ ಮೈಸೂರಿನಲ್ಲಿ ಹೇಳಿದಂತೆ ಮೋದಿ ಅವರು ನಮ್ಮ ದೇಶಕ್ಕೆ ಗೌರವ ತರುವಂಥ ಕೆಲಸ ಮಾಡಿದ್ದಾರೆ. ಮುಂದಿನ ಐದು ವರ್ಷಗಳ ಕಾಲ ನಮ್ಮ ದೇಶ ಇನ್ನಷ್ಟು ವೇಗವಾಗಿ ಬೆಳೆಯಬೇಕು ಅಂದರೆ ಮೋದಿ ಅವರಿಗೆ 400 ಸೀಟು ಕೊಟ್ಟು ಅವರ ಕೈ ಬಲಪಡಿಸಬೇಕು ಎಂದರು.
ನಮ್ಮ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹೆಸರಿನಲ್ಲಿ ರಾಮ ಇದೆ, ಅವರಿಗೆ ಟಿಕೆಟ್ ಕೊಟ್ಟವರ ಹೆಸರಲ್ಲೂ ರಾಮ ಇದೆ. ಆದರೆ ಅವರ ಹೃದಯದಲ್ಲಿ ರಾಮನ ಮೇಲೆ ಭಕ್ತಿ ಇಲ್ಲ ಎಂದು ಕಿಡಿಕಾರಿದರು.
ನಮ್ಮ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಹಾಲು ಜೇನಿನಂತೆ ಬೆರೆತು ಮನೆ ಮನೆಗೂ ಭೇಟಿ ಕೊಟ್ಟು ಈ ಎಲ್ಲ ವಿಷಯಗಳ ಬಗ್ಗೆ ಮತದಾರರಲ್ಲಿ ಅರಿವು ಮೂಡಿಸಬೇಕು.
ನಂತರ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮಾತನಾಡಿ, ಕಾಂಗ್ರೆಸ್ ಪಕ್ಷ 60 ವರ್ಷಗಳ ಕಾಲ ಈ ದೇಶವನ್ನ ಹಾಳು ಮಾಡಿದೆಯೇ ಹೊರತು ಜನರ ಬದುಕಲ್ಲಿ ಯಾವುದೇ ಬದಲಾವಣೆ ತಂದಿಲ್ಲ ಎಂದರು.
ಮುಂದಿನ ಐದು ವರ್ಷಗಳ ಕಾಲ ನಮ್ಮ ದೇಶ ಇನ್ನಷ್ಟು ವೇಗವಾಗಿ ಬೆಳೆಯಬೇಕು ಅಂದರೆ ಮೋದಿ ಅವರಿಗೆ 400 ಸೀಟು ಕೊಟ್ಟು ಅವರ ಕೈ ಬಲಪಡಿಸಬೇಕು ಎಂದು ತಿಳಿಸಿದರು.
ಈ ವೇಳೆ ಶಾಸಕ ಧೀರಜ್ ಮುನಿರಾಜ್, ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…
ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…