ದೇಶವನ್ನು ಆಳುವುದು ಎಂದರೆ ಅದು ಅಧಿಕಾರದ ವೈಭೋಗವಲ್ಲ. ದೇಶವನ್ನು ಆಳುವುದು ಅಂದರೆ ಜನರ ಬದುಕನ್ನ ಕಟ್ಟಿಕೊಡುವ ಜವಾಬ್ದಾರಿ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರು ಹೇಳಿದರು.
ನಗರದ ನೆಲದಾಂಜನೇಯಸ್ವಾಮಿ ದೇವಸ್ಥಾನದ ಬಳಿ ನಡೆದ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಸಮಾವೇಶ ಹಾಗು ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ಮೋದಿಗೆ ಮತ, ದೇಶಕ್ಕೆ ಹಿತ” ಎಂಬುದನ್ನು ಮನವರಿಕೆ ಮಾಡಬೇಕು. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ NDA ಗೆಲ್ಲಿಸಿ ಮೋದಿ ಅವರಿಗೆ ಶಕ್ತಿ ತುಂಬಬೇಕು ಎಂದರು.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ನಿನ್ನೆ ಮೈಸೂರಿನಲ್ಲಿ ಹೇಳಿದಂತೆ ಮೋದಿ ಅವರು ನಮ್ಮ ದೇಶಕ್ಕೆ ಗೌರವ ತರುವಂಥ ಕೆಲಸ ಮಾಡಿದ್ದಾರೆ. ಮುಂದಿನ ಐದು ವರ್ಷಗಳ ಕಾಲ ನಮ್ಮ ದೇಶ ಇನ್ನಷ್ಟು ವೇಗವಾಗಿ ಬೆಳೆಯಬೇಕು ಅಂದರೆ ಮೋದಿ ಅವರಿಗೆ 400 ಸೀಟು ಕೊಟ್ಟು ಅವರ ಕೈ ಬಲಪಡಿಸಬೇಕು ಎಂದರು.
ನಮ್ಮ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹೆಸರಿನಲ್ಲಿ ರಾಮ ಇದೆ, ಅವರಿಗೆ ಟಿಕೆಟ್ ಕೊಟ್ಟವರ ಹೆಸರಲ್ಲೂ ರಾಮ ಇದೆ. ಆದರೆ ಅವರ ಹೃದಯದಲ್ಲಿ ರಾಮನ ಮೇಲೆ ಭಕ್ತಿ ಇಲ್ಲ ಎಂದು ಕಿಡಿಕಾರಿದರು.
ನಮ್ಮ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಹಾಲು ಜೇನಿನಂತೆ ಬೆರೆತು ಮನೆ ಮನೆಗೂ ಭೇಟಿ ಕೊಟ್ಟು ಈ ಎಲ್ಲ ವಿಷಯಗಳ ಬಗ್ಗೆ ಮತದಾರರಲ್ಲಿ ಅರಿವು ಮೂಡಿಸಬೇಕು.
ನಂತರ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮಾತನಾಡಿ, ಕಾಂಗ್ರೆಸ್ ಪಕ್ಷ 60 ವರ್ಷಗಳ ಕಾಲ ಈ ದೇಶವನ್ನ ಹಾಳು ಮಾಡಿದೆಯೇ ಹೊರತು ಜನರ ಬದುಕಲ್ಲಿ ಯಾವುದೇ ಬದಲಾವಣೆ ತಂದಿಲ್ಲ ಎಂದರು.
ಮುಂದಿನ ಐದು ವರ್ಷಗಳ ಕಾಲ ನಮ್ಮ ದೇಶ ಇನ್ನಷ್ಟು ವೇಗವಾಗಿ ಬೆಳೆಯಬೇಕು ಅಂದರೆ ಮೋದಿ ಅವರಿಗೆ 400 ಸೀಟು ಕೊಟ್ಟು ಅವರ ಕೈ ಬಲಪಡಿಸಬೇಕು ಎಂದು ತಿಳಿಸಿದರು.
ಈ ವೇಳೆ ಶಾಸಕ ಧೀರಜ್ ಮುನಿರಾಜ್, ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…
ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…
ಸ್ಪರ್ಶ್ ಆಸ್ಪತ್ರೆ, ಹೆಣ್ಣೂರು ತನ್ನ ಕಾರ್ಯಾಚರಣೆಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಪತ್ರೆಯ ಮೊದಲ ವರ್ಷದ ಕ್ಲಿನಿಕಲ್ ಅಂಕಿಅಂಶಗಳು ಉತ್ತರ…
ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ…
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ಚಿಕ್ಕಬಳ್ಳಾಪುರದ ನಂದಿಬೆಟ್ಟ ರಸ್ತೆಯ ಖಾಸಗಿ ಹೋಟೆಲ್ನಲ್ಲಿ ಆಯೋಜಿಸಿದ್ದ "ಕಾಂಗ್ರೆಸ್ ನಡೆ-ಮತ ರಕ್ಷಣೆಯ ಕಡೆ" ಜಾಗೃತ…
ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…