ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಕೆ.ಜೆ ಜಾರ್ಜ್

ಬಾಣಸವಾಡಿ ರೈಲ್ವೆ ನಿಲ್ದಾಣದ ಸಮೀಪ ಒಳಚರಂಡಿ ಕಾಮಗಾರಿ ಕೈಗೊಳ್ಳಲು ಸಹಕರಿಸಿ, ರಾಜ್ಯ ಸರ್ಕಾರದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುವಂತೆ ಕೇಂದ್ರ ಸರ್ಕಾರದ ಅಧಿಕಾರಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸೂಚಿಸಿದ್ದಾರೆ.

ಸರ್ವಜ್ಞನಗರ ಶಾಸಕರೂ ಆಗಿರುವ ಸಚಿವರಾದ ಕೆ.ಜೆ.ಜಾರ್ಜ್ ಅವರು ಬುಧವಾರ ಕ್ಷೇತ್ರದ ಪ್ರಮುಖ ಜನವಸತಿ ಪ್ರದೇಶಗಳಲ್ಲಿ ನಡೆಯುತ್ತಿರುವ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಿದ ನಂತರ ಬಾಣಸವಾಡಿ ರೈಲ್ವೆ ನಿಲ್ದಾಣದ ಸಮೀಪದಲ್ಲೇ ಕೆ-ರೈಡ್ ವತಿಯಿಂದ ಕೈಗೊಂಡಿರುವ ಕಾಮಗಾರಿ ಸ್ಥಳಕ್ಕೆ ತೆರಳಿ, ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡರು.

ಬಾಣಸವಾಡಿ ರೈಲ್ವೆ ನಿಲ್ದಾಣದ ಸಮೀಪದಲ್ಲೇ ಕೆ-ರೈಡ್ ವತಿಯಿಂದ ಕೈಗೊಂಡಿರುವ ಕಾಮಗಾರಿ ಸೇರಿದಂತೆ ವಿವಿಧ ವಾರ್ಡ್‌ಗಳಲ್ಲಿ  ಚರಂಡಿ ಕಾಮಗಾರಿಗಳ ಬಗ್ಗೆ ಸಚಿವರು ಮಾಹಿತಿ ಪಡೆದುಕೊಂಡರು. ಇದೇ ವೇಳೆ  ರೈಲ್ವೆ ಅಧಿಕಾರಿಗಳು ನಮ್ಮ ಮನವಿಗೆ ಸ್ಪಂದಿಸುತ್ತಿಲ್ಲ, ಇದರಿಂದ ನಮ್ಮ ಕೆಲಸಗಳಿಗೆ ಅಡಚಣೆ ಆಗುತ್ತಿದೆ ಎಂದು ಜಿಬಿಎ ಅಧಿಕಾರಿಗಳು ದೂರಿದರು. ಇದಕ್ಕೆ  ಪ್ರತಿಕ್ರಿಯಿಸಿದ ಜಾರ್ಜ್, “ನೀವು ಅಧಿಕಾರಿಗಳು ಎಲ್ಲಿದ್ದರೂ ಸಂಬಳ ಬರುತ್ತದೆ. ಜನರ ಪರವಾಗಿ ಮಾನವೀಯತೆಯಿಂದ ಸ್ಪಂದಿಸಿ ಕೆಲಸ ಮಾಡಿ. ಜಿಬಿಎ ಅಧಿಕಾರಿಗಳ ಜೊತೆಗೂಡಿ ಕೆಲಸ ನಿರ್ವಹಿಸಿ,” ಎಂದು ರೈಲ್ವೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

“ಸದ್ಯದಲ್ಲೇ ಕೇಂದ್ರ ರಾಜ್ಯ ಖಾತೆ ರೈಲ್ವೆ ಸಚಿವರಾದ ವಿ.ಸೋಮಣ್ಣ ಅವರು ಸರ್ವಜ್ಞನಗರ ಕ್ಷೇತ್ರಕ್ಕೆ ಬರುತ್ತಾರೆ. ನಮ್ಮ ಅಧಿಕಾರಿಗಳು ಸಮಸ್ಯೆಯ ಕುರಿತು ವಿವರ ನೀಡುತ್ತಾರೆ. ರೈಲ್ವೆ ಉನ್ನತಾಧಿಕಾರಿಗಳು ಬಂದು ಉತ್ತರಿಸಿ, ಸಮಸ್ಯೆ ಬಗೆಹರಿಸಲಿ. ನಮ್ಮ ಜನರಿಗೆ ಯಾವುದೇ ಸಮಸ್ಯೆ ಆಗಬಾರದು, ನಾವು ಜನರಿಗಾಗಿ, ಜನರ ಘನತೆಯ ಬದುಕಿಗಾಗಿ ಕೆಲಸ ಮಾಡಬೇಕು ನಮ್ಮ ಧ್ಯೇಯವೂ ಅದೇ ನಮ್ಮ ಬದ್ಧತೆಯೂ ಅದೇ ಆಗಿದೆ,” ಎಂದರು.

*ಜಾಗತಿಕ ಗುಣಮಟ್ಟದ ಕ್ರೀಡಾ ಮೂಲಸೌಕರ್ಯಕ್ಕೆ ಮುನ್ನುಡಿ*:

ಬಾಣಸವಾಡಿಯಲ್ಲಿ ಕ್ರೀಡಾ, ಸಾಂಸ್ಕೃತಿಕ ಚಟುವಟಿಕೆಗಳ  ಆಡಿಟೋರಿಯಂ ನಿರ್ಮಾಣ ಹಾಗೂ ಕಾಚರಕನಹಳ್ಳಿಯ ಕೆರೆ ಆವರಣದಲ್ಲಿ ಕ್ರೀಡಾ ಮೂಲಸೌಕರ್ಯ ಅಭಿವೃದ್ದಿಗೆ ಸಚಿವ ಕೆ.ಜೆ.ಜಾರ್ಜ್ ಗುದ್ದಲಿ ಪೂಜೆ ನೆರವೇರಿಸಿದರು. ಹೆಣ್ಣೂರು 80 ಅಡಿ ರಸ್ತೆಯ ವೈಟ್‌ ಟಾಪಿಂಗ್ ಕಾಮಗಾರಿ ವೇಗವಾಗಿ ಕೈಗೊಳ್ಳುವಂತೆಯೂ ಸೂಚನೆ ನೀಡಿದರು ಹಾಗೂ ನಾಗವಾರ ನಂದ ಗೋಕುಲ ಬಡಾವಣೆ ಹಾಗೂ ಜೈಭಾರತ್ ನಗರದ ಮಾರುತಿ ಸೇವಾನಗರದಲ್ಲಿ ಮಳೆ ಚರಂಡಿಗಳ ಪರಿಶೀಲನೆ ನಡೆಸಿದರು.

ಮಂಗಳವಾರ ನಿಧನರಾದ ಮಾರುತಿ ಸೇವಾನಗರ ವಾರ್ಡ್‌ನ ಮಾಜಿ ಕಾರ್ಪೊರೇಟರ್ ದಿವಂಗತ ಕೆ.ಬಿ. ಮೋಹನ್ ಅವರ ನಿವಾಸಕ್ಕೆ ಭೇಟಿ ನೀಡಿದ ಸಚಿವ ಜಾರ್ಜ್, ಕುಟುಂಬ ಮತ್ತು ಸ್ನೇಹಿತರಿಗೆ ಸಾಂತ್ವನ ಹೇಳಿದರು. ಕೆ.ಬಿ. ಮೋಹನ್ ಅವರ ಸಾರ್ವಜನಿಕ ಸೇವೆ ಮತ್ತು ಕಾಂಗ್ರೆಸ್ ಮೌಲ್ಯಗಳಿಗೆ  ತೋರುತ್ತಿದ್ದ ಬದ್ಧತೆಗೆ ಮೆಚ್ಚಿದರು ಸದಾಕಾಲ ಮೋಹನ್ ಅವರ ಸೇವಾಕಾರ್ಯಗಳು ಜನಮಾನಸದಲ್ಲಿ ಶಾಶ್ವತವಾಗಿರಲಿದೆ ಎಂದು ತಿಳಿಸಿದರು.

ಸಚಿವರ ಕ್ಷೇತ್ರ ಪ್ರವಾಸದ ವೇಳೆ ಹೆಣ್ಣೂರು, ಬಾಣಸವಾಡಿ, ಹೆಚ್‌ಬಿಆರ್‌, ಮಾರುತಿಸೇವಾನಗರ ಕೆ.ಜಿ.ಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಹೆಚ್‌.ಎ.ಪುಲಿಕೇಶಿ, ಸಯ್ಯದ್ ಕಲೀಂ, ರಘುದೇವರಾಜ್, ಸುಮಿತ್ರಾ ಮುನಿರಾಜು, ಸಚಿವರ ವಿಶೇಷಾಧಿಕಾರಿಗಳಾದ ಸುರೇಶ್, ಆಪ್ತ ಕಾರ್ಯದರ್ಶಿ ಸತೀಶ್ ಕುಮಾರ್, ಮೋಹನ್ ಮೆನನ್ ಹಾಗು ವಿವಿಧ ಮುಖಂಡರು, ಜಿಬಿಎ, ಬೆಂಗಳೂರು ಒಳಚಂಡಿ ಮತ್ತು ಜಲಮಂಡಳಿ ಹಾಗೂ ಬೆಸ್ಕಾಂ ಅಧಿಕಾರಿಗಳು  ಉಪಸ್ಥಿತರಿದ್ದರು.

Ramesh Babu

Journalist

Recent Posts

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

6 hours ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

12 hours ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

13 hours ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

1 day ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

1 day ago

ಶ್ರಾವಣದ ಹಬ್ಬಗಳಿಗೆ ಮುನ್ನವೇ ಹೂವಿನ ದರದ ಬಿಸಿ! ಇಳುವರಿ ಶೇ.30–40ರಷ್ಟು ಕುಸಿತ: ಹವಾಮಾನ ವೈಪರೀತ್ಯದ ಪರಿಣಾಮ: ಸಾಲುಸಾಲು ಹಬ್ಬಗಳಿಂದ ಬೇಡಿಕೆ ಹೆಚ್ಚಳ

  ಬೆಂಗಳೂರು: ಹಬ್ಬಗಳ ಸೀಸನ್‌ ಆರಂಭಕ್ಕೂ ಮುನ್ನವೇ ಹೂವಿನ ದರ ಏರಿಕೆಯ ಬಿಸಿ ಗ್ರಾಹಕರಿಗೆ ತಟ್ಟಲಾರಂಭಿಸಿದೆ. ರಾಜ್ಯದಲ್ಲಿ ಅನಿರೀಕ್ಷಿತ ಬರ,…

1 day ago