ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಕೆ.ಜೆ ಜಾರ್ಜ್

ಬಾಣಸವಾಡಿ ರೈಲ್ವೆ ನಿಲ್ದಾಣದ ಸಮೀಪ ಒಳಚರಂಡಿ ಕಾಮಗಾರಿ ಕೈಗೊಳ್ಳಲು ಸಹಕರಿಸಿ, ರಾಜ್ಯ ಸರ್ಕಾರದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುವಂತೆ ಕೇಂದ್ರ ಸರ್ಕಾರದ ಅಧಿಕಾರಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸೂಚಿಸಿದ್ದಾರೆ.

ಸರ್ವಜ್ಞನಗರ ಶಾಸಕರೂ ಆಗಿರುವ ಸಚಿವರಾದ ಕೆ.ಜೆ.ಜಾರ್ಜ್ ಅವರು ಬುಧವಾರ ಕ್ಷೇತ್ರದ ಪ್ರಮುಖ ಜನವಸತಿ ಪ್ರದೇಶಗಳಲ್ಲಿ ನಡೆಯುತ್ತಿರುವ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಿದ ನಂತರ ಬಾಣಸವಾಡಿ ರೈಲ್ವೆ ನಿಲ್ದಾಣದ ಸಮೀಪದಲ್ಲೇ ಕೆ-ರೈಡ್ ವತಿಯಿಂದ ಕೈಗೊಂಡಿರುವ ಕಾಮಗಾರಿ ಸ್ಥಳಕ್ಕೆ ತೆರಳಿ, ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡರು.

ಬಾಣಸವಾಡಿ ರೈಲ್ವೆ ನಿಲ್ದಾಣದ ಸಮೀಪದಲ್ಲೇ ಕೆ-ರೈಡ್ ವತಿಯಿಂದ ಕೈಗೊಂಡಿರುವ ಕಾಮಗಾರಿ ಸೇರಿದಂತೆ ವಿವಿಧ ವಾರ್ಡ್‌ಗಳಲ್ಲಿ  ಚರಂಡಿ ಕಾಮಗಾರಿಗಳ ಬಗ್ಗೆ ಸಚಿವರು ಮಾಹಿತಿ ಪಡೆದುಕೊಂಡರು. ಇದೇ ವೇಳೆ  ರೈಲ್ವೆ ಅಧಿಕಾರಿಗಳು ನಮ್ಮ ಮನವಿಗೆ ಸ್ಪಂದಿಸುತ್ತಿಲ್ಲ, ಇದರಿಂದ ನಮ್ಮ ಕೆಲಸಗಳಿಗೆ ಅಡಚಣೆ ಆಗುತ್ತಿದೆ ಎಂದು ಜಿಬಿಎ ಅಧಿಕಾರಿಗಳು ದೂರಿದರು. ಇದಕ್ಕೆ  ಪ್ರತಿಕ್ರಿಯಿಸಿದ ಜಾರ್ಜ್, “ನೀವು ಅಧಿಕಾರಿಗಳು ಎಲ್ಲಿದ್ದರೂ ಸಂಬಳ ಬರುತ್ತದೆ. ಜನರ ಪರವಾಗಿ ಮಾನವೀಯತೆಯಿಂದ ಸ್ಪಂದಿಸಿ ಕೆಲಸ ಮಾಡಿ. ಜಿಬಿಎ ಅಧಿಕಾರಿಗಳ ಜೊತೆಗೂಡಿ ಕೆಲಸ ನಿರ್ವಹಿಸಿ,” ಎಂದು ರೈಲ್ವೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

“ಸದ್ಯದಲ್ಲೇ ಕೇಂದ್ರ ರಾಜ್ಯ ಖಾತೆ ರೈಲ್ವೆ ಸಚಿವರಾದ ವಿ.ಸೋಮಣ್ಣ ಅವರು ಸರ್ವಜ್ಞನಗರ ಕ್ಷೇತ್ರಕ್ಕೆ ಬರುತ್ತಾರೆ. ನಮ್ಮ ಅಧಿಕಾರಿಗಳು ಸಮಸ್ಯೆಯ ಕುರಿತು ವಿವರ ನೀಡುತ್ತಾರೆ. ರೈಲ್ವೆ ಉನ್ನತಾಧಿಕಾರಿಗಳು ಬಂದು ಉತ್ತರಿಸಿ, ಸಮಸ್ಯೆ ಬಗೆಹರಿಸಲಿ. ನಮ್ಮ ಜನರಿಗೆ ಯಾವುದೇ ಸಮಸ್ಯೆ ಆಗಬಾರದು, ನಾವು ಜನರಿಗಾಗಿ, ಜನರ ಘನತೆಯ ಬದುಕಿಗಾಗಿ ಕೆಲಸ ಮಾಡಬೇಕು ನಮ್ಮ ಧ್ಯೇಯವೂ ಅದೇ ನಮ್ಮ ಬದ್ಧತೆಯೂ ಅದೇ ಆಗಿದೆ,” ಎಂದರು.

*ಜಾಗತಿಕ ಗುಣಮಟ್ಟದ ಕ್ರೀಡಾ ಮೂಲಸೌಕರ್ಯಕ್ಕೆ ಮುನ್ನುಡಿ*:

ಬಾಣಸವಾಡಿಯಲ್ಲಿ ಕ್ರೀಡಾ, ಸಾಂಸ್ಕೃತಿಕ ಚಟುವಟಿಕೆಗಳ  ಆಡಿಟೋರಿಯಂ ನಿರ್ಮಾಣ ಹಾಗೂ ಕಾಚರಕನಹಳ್ಳಿಯ ಕೆರೆ ಆವರಣದಲ್ಲಿ ಕ್ರೀಡಾ ಮೂಲಸೌಕರ್ಯ ಅಭಿವೃದ್ದಿಗೆ ಸಚಿವ ಕೆ.ಜೆ.ಜಾರ್ಜ್ ಗುದ್ದಲಿ ಪೂಜೆ ನೆರವೇರಿಸಿದರು. ಹೆಣ್ಣೂರು 80 ಅಡಿ ರಸ್ತೆಯ ವೈಟ್‌ ಟಾಪಿಂಗ್ ಕಾಮಗಾರಿ ವೇಗವಾಗಿ ಕೈಗೊಳ್ಳುವಂತೆಯೂ ಸೂಚನೆ ನೀಡಿದರು ಹಾಗೂ ನಾಗವಾರ ನಂದ ಗೋಕುಲ ಬಡಾವಣೆ ಹಾಗೂ ಜೈಭಾರತ್ ನಗರದ ಮಾರುತಿ ಸೇವಾನಗರದಲ್ಲಿ ಮಳೆ ಚರಂಡಿಗಳ ಪರಿಶೀಲನೆ ನಡೆಸಿದರು.

ಮಂಗಳವಾರ ನಿಧನರಾದ ಮಾರುತಿ ಸೇವಾನಗರ ವಾರ್ಡ್‌ನ ಮಾಜಿ ಕಾರ್ಪೊರೇಟರ್ ದಿವಂಗತ ಕೆ.ಬಿ. ಮೋಹನ್ ಅವರ ನಿವಾಸಕ್ಕೆ ಭೇಟಿ ನೀಡಿದ ಸಚಿವ ಜಾರ್ಜ್, ಕುಟುಂಬ ಮತ್ತು ಸ್ನೇಹಿತರಿಗೆ ಸಾಂತ್ವನ ಹೇಳಿದರು. ಕೆ.ಬಿ. ಮೋಹನ್ ಅವರ ಸಾರ್ವಜನಿಕ ಸೇವೆ ಮತ್ತು ಕಾಂಗ್ರೆಸ್ ಮೌಲ್ಯಗಳಿಗೆ  ತೋರುತ್ತಿದ್ದ ಬದ್ಧತೆಗೆ ಮೆಚ್ಚಿದರು ಸದಾಕಾಲ ಮೋಹನ್ ಅವರ ಸೇವಾಕಾರ್ಯಗಳು ಜನಮಾನಸದಲ್ಲಿ ಶಾಶ್ವತವಾಗಿರಲಿದೆ ಎಂದು ತಿಳಿಸಿದರು.

ಸಚಿವರ ಕ್ಷೇತ್ರ ಪ್ರವಾಸದ ವೇಳೆ ಹೆಣ್ಣೂರು, ಬಾಣಸವಾಡಿ, ಹೆಚ್‌ಬಿಆರ್‌, ಮಾರುತಿಸೇವಾನಗರ ಕೆ.ಜಿ.ಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಹೆಚ್‌.ಎ.ಪುಲಿಕೇಶಿ, ಸಯ್ಯದ್ ಕಲೀಂ, ರಘುದೇವರಾಜ್, ಸುಮಿತ್ರಾ ಮುನಿರಾಜು, ಸಚಿವರ ವಿಶೇಷಾಧಿಕಾರಿಗಳಾದ ಸುರೇಶ್, ಆಪ್ತ ಕಾರ್ಯದರ್ಶಿ ಸತೀಶ್ ಕುಮಾರ್, ಮೋಹನ್ ಮೆನನ್ ಹಾಗು ವಿವಿಧ ಮುಖಂಡರು, ಜಿಬಿಎ, ಬೆಂಗಳೂರು ಒಳಚಂಡಿ ಮತ್ತು ಜಲಮಂಡಳಿ ಹಾಗೂ ಬೆಸ್ಕಾಂ ಅಧಿಕಾರಿಗಳು  ಉಪಸ್ಥಿತರಿದ್ದರು.

Ramesh Babu

Journalist

Recent Posts

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

8 hours ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

20 hours ago

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

1 day ago

ಜು.25ರಂದು ಹಲವೆಡೆ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ಬೆಸ್ಕಾಂ ವತಿಯಿಂದ ತುರ್ತು ನಿರ್ವಹಣೆ ಮತ್ತು ವಿದ್ಯುತ್ ಮಾರ್ಗಗಳ ಕಾಮಗಾರಿ ಹಿನ್ನೆಲೆಯಲ್ಲಿ ಜುಲೈ 25ರಂದು (ಶನಿವಾರ) ದೊಡ್ಡಬಳ್ಳಾಪುರ ನಗರದ…

1 day ago

ಆಕ್ರೋಶ, ಅರಾಜಕತೆ ಮತ್ತು ಮಾಧ್ಯಮಗಳು…..

ದೆಹಲಿ ಮತ್ತು ದೇಶದ ಇತರ ಭಾಗಗಳಲ್ಲಿ ಕಳೆದ ಕೆಲವು ದಿನಗಳ ಘಟನೆಗಳನ್ನು ನೋಡುತ್ತಿದ್ದರೆ ನಮ್ಮ ದೇಶದ ಸುತ್ತಮುತ್ತ ನಡೆದ ಬಾಂಗ್ಲಾ,…

1 day ago

ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೂಡಿಕೆಗೆ ಕರ್ನಾಟಕ ಮುಕ್ತ – ಖಾಸಗಿ ಹೂಡಿಕೆದಾರರಿಗೆ ಸರ್ಕಾರದಿಂದ ಸಂಪೂರ್ಣ ಬೆಂಬಲ- ಸಚಿವ ಕೆ.ಜೆ. ಜಾರ್ಜ್

ಕರ್ನಾಟಕವನ್ನು ದೇಶದ ಹೂಡಿಕೆ ಸ್ನೇಹಿ ಪ್ರವಾಸೋದ್ಯಮ ರಾಜ್ಯವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಸರ್ಕಾರ ಪ್ರವಾಸೋದ್ಯಮ ನೀತಿಗಳನ್ನು ಮತ್ತಷ್ಟು ಸರಳೀಕರಿಸುತ್ತಿದ್ದು, ಖಾಸಗಿ ಹೂಡಿಕೆದಾರರಿಗೆ…

1 day ago