ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಕೆ.ಜೆ ಜಾರ್ಜ್

ಬಾಣಸವಾಡಿ ರೈಲ್ವೆ ನಿಲ್ದಾಣದ ಸಮೀಪ ಒಳಚರಂಡಿ ಕಾಮಗಾರಿ ಕೈಗೊಳ್ಳಲು ಸಹಕರಿಸಿ, ರಾಜ್ಯ ಸರ್ಕಾರದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುವಂತೆ ಕೇಂದ್ರ ಸರ್ಕಾರದ ಅಧಿಕಾರಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸೂಚಿಸಿದ್ದಾರೆ.

ಸರ್ವಜ್ಞನಗರ ಶಾಸಕರೂ ಆಗಿರುವ ಸಚಿವರಾದ ಕೆ.ಜೆ.ಜಾರ್ಜ್ ಅವರು ಬುಧವಾರ ಕ್ಷೇತ್ರದ ಪ್ರಮುಖ ಜನವಸತಿ ಪ್ರದೇಶಗಳಲ್ಲಿ ನಡೆಯುತ್ತಿರುವ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಿದ ನಂತರ ಬಾಣಸವಾಡಿ ರೈಲ್ವೆ ನಿಲ್ದಾಣದ ಸಮೀಪದಲ್ಲೇ ಕೆ-ರೈಡ್ ವತಿಯಿಂದ ಕೈಗೊಂಡಿರುವ ಕಾಮಗಾರಿ ಸ್ಥಳಕ್ಕೆ ತೆರಳಿ, ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡರು.

ಬಾಣಸವಾಡಿ ರೈಲ್ವೆ ನಿಲ್ದಾಣದ ಸಮೀಪದಲ್ಲೇ ಕೆ-ರೈಡ್ ವತಿಯಿಂದ ಕೈಗೊಂಡಿರುವ ಕಾಮಗಾರಿ ಸೇರಿದಂತೆ ವಿವಿಧ ವಾರ್ಡ್‌ಗಳಲ್ಲಿ  ಚರಂಡಿ ಕಾಮಗಾರಿಗಳ ಬಗ್ಗೆ ಸಚಿವರು ಮಾಹಿತಿ ಪಡೆದುಕೊಂಡರು. ಇದೇ ವೇಳೆ  ರೈಲ್ವೆ ಅಧಿಕಾರಿಗಳು ನಮ್ಮ ಮನವಿಗೆ ಸ್ಪಂದಿಸುತ್ತಿಲ್ಲ, ಇದರಿಂದ ನಮ್ಮ ಕೆಲಸಗಳಿಗೆ ಅಡಚಣೆ ಆಗುತ್ತಿದೆ ಎಂದು ಜಿಬಿಎ ಅಧಿಕಾರಿಗಳು ದೂರಿದರು. ಇದಕ್ಕೆ  ಪ್ರತಿಕ್ರಿಯಿಸಿದ ಜಾರ್ಜ್, “ನೀವು ಅಧಿಕಾರಿಗಳು ಎಲ್ಲಿದ್ದರೂ ಸಂಬಳ ಬರುತ್ತದೆ. ಜನರ ಪರವಾಗಿ ಮಾನವೀಯತೆಯಿಂದ ಸ್ಪಂದಿಸಿ ಕೆಲಸ ಮಾಡಿ. ಜಿಬಿಎ ಅಧಿಕಾರಿಗಳ ಜೊತೆಗೂಡಿ ಕೆಲಸ ನಿರ್ವಹಿಸಿ,” ಎಂದು ರೈಲ್ವೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

“ಸದ್ಯದಲ್ಲೇ ಕೇಂದ್ರ ರಾಜ್ಯ ಖಾತೆ ರೈಲ್ವೆ ಸಚಿವರಾದ ವಿ.ಸೋಮಣ್ಣ ಅವರು ಸರ್ವಜ್ಞನಗರ ಕ್ಷೇತ್ರಕ್ಕೆ ಬರುತ್ತಾರೆ. ನಮ್ಮ ಅಧಿಕಾರಿಗಳು ಸಮಸ್ಯೆಯ ಕುರಿತು ವಿವರ ನೀಡುತ್ತಾರೆ. ರೈಲ್ವೆ ಉನ್ನತಾಧಿಕಾರಿಗಳು ಬಂದು ಉತ್ತರಿಸಿ, ಸಮಸ್ಯೆ ಬಗೆಹರಿಸಲಿ. ನಮ್ಮ ಜನರಿಗೆ ಯಾವುದೇ ಸಮಸ್ಯೆ ಆಗಬಾರದು, ನಾವು ಜನರಿಗಾಗಿ, ಜನರ ಘನತೆಯ ಬದುಕಿಗಾಗಿ ಕೆಲಸ ಮಾಡಬೇಕು ನಮ್ಮ ಧ್ಯೇಯವೂ ಅದೇ ನಮ್ಮ ಬದ್ಧತೆಯೂ ಅದೇ ಆಗಿದೆ,” ಎಂದರು.

*ಜಾಗತಿಕ ಗುಣಮಟ್ಟದ ಕ್ರೀಡಾ ಮೂಲಸೌಕರ್ಯಕ್ಕೆ ಮುನ್ನುಡಿ*:

ಬಾಣಸವಾಡಿಯಲ್ಲಿ ಕ್ರೀಡಾ, ಸಾಂಸ್ಕೃತಿಕ ಚಟುವಟಿಕೆಗಳ  ಆಡಿಟೋರಿಯಂ ನಿರ್ಮಾಣ ಹಾಗೂ ಕಾಚರಕನಹಳ್ಳಿಯ ಕೆರೆ ಆವರಣದಲ್ಲಿ ಕ್ರೀಡಾ ಮೂಲಸೌಕರ್ಯ ಅಭಿವೃದ್ದಿಗೆ ಸಚಿವ ಕೆ.ಜೆ.ಜಾರ್ಜ್ ಗುದ್ದಲಿ ಪೂಜೆ ನೆರವೇರಿಸಿದರು. ಹೆಣ್ಣೂರು 80 ಅಡಿ ರಸ್ತೆಯ ವೈಟ್‌ ಟಾಪಿಂಗ್ ಕಾಮಗಾರಿ ವೇಗವಾಗಿ ಕೈಗೊಳ್ಳುವಂತೆಯೂ ಸೂಚನೆ ನೀಡಿದರು ಹಾಗೂ ನಾಗವಾರ ನಂದ ಗೋಕುಲ ಬಡಾವಣೆ ಹಾಗೂ ಜೈಭಾರತ್ ನಗರದ ಮಾರುತಿ ಸೇವಾನಗರದಲ್ಲಿ ಮಳೆ ಚರಂಡಿಗಳ ಪರಿಶೀಲನೆ ನಡೆಸಿದರು.

ಮಂಗಳವಾರ ನಿಧನರಾದ ಮಾರುತಿ ಸೇವಾನಗರ ವಾರ್ಡ್‌ನ ಮಾಜಿ ಕಾರ್ಪೊರೇಟರ್ ದಿವಂಗತ ಕೆ.ಬಿ. ಮೋಹನ್ ಅವರ ನಿವಾಸಕ್ಕೆ ಭೇಟಿ ನೀಡಿದ ಸಚಿವ ಜಾರ್ಜ್, ಕುಟುಂಬ ಮತ್ತು ಸ್ನೇಹಿತರಿಗೆ ಸಾಂತ್ವನ ಹೇಳಿದರು. ಕೆ.ಬಿ. ಮೋಹನ್ ಅವರ ಸಾರ್ವಜನಿಕ ಸೇವೆ ಮತ್ತು ಕಾಂಗ್ರೆಸ್ ಮೌಲ್ಯಗಳಿಗೆ  ತೋರುತ್ತಿದ್ದ ಬದ್ಧತೆಗೆ ಮೆಚ್ಚಿದರು ಸದಾಕಾಲ ಮೋಹನ್ ಅವರ ಸೇವಾಕಾರ್ಯಗಳು ಜನಮಾನಸದಲ್ಲಿ ಶಾಶ್ವತವಾಗಿರಲಿದೆ ಎಂದು ತಿಳಿಸಿದರು.

ಸಚಿವರ ಕ್ಷೇತ್ರ ಪ್ರವಾಸದ ವೇಳೆ ಹೆಣ್ಣೂರು, ಬಾಣಸವಾಡಿ, ಹೆಚ್‌ಬಿಆರ್‌, ಮಾರುತಿಸೇವಾನಗರ ಕೆ.ಜಿ.ಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಹೆಚ್‌.ಎ.ಪುಲಿಕೇಶಿ, ಸಯ್ಯದ್ ಕಲೀಂ, ರಘುದೇವರಾಜ್, ಸುಮಿತ್ರಾ ಮುನಿರಾಜು, ಸಚಿವರ ವಿಶೇಷಾಧಿಕಾರಿಗಳಾದ ಸುರೇಶ್, ಆಪ್ತ ಕಾರ್ಯದರ್ಶಿ ಸತೀಶ್ ಕುಮಾರ್, ಮೋಹನ್ ಮೆನನ್ ಹಾಗು ವಿವಿಧ ಮುಖಂಡರು, ಜಿಬಿಎ, ಬೆಂಗಳೂರು ಒಳಚಂಡಿ ಮತ್ತು ಜಲಮಂಡಳಿ ಹಾಗೂ ಬೆಸ್ಕಾಂ ಅಧಿಕಾರಿಗಳು  ಉಪಸ್ಥಿತರಿದ್ದರು.

Ramesh Babu

Journalist

Recent Posts

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

18 hours ago

“ವಿಬಿ-ಜಿ ರಾಮ್ ಜಿ” ಯೋಜನೆಗೆ ಚಾಲನೆ

"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…

19 hours ago

ಕಳುವಾಗಿದ್ದ ಚಿನ್ನಾಭರಣ, ನಗದು ದೂರುದಾರರಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…

1 day ago

ಫುಟ್ ಪಾತ್…… (ಗೂಡಂಗಡಿಯ ಜನರ ಕರುಳ ಬಳ್ಳಿಯ ಕರೆ….)

Footpath...... ಫುಟ್ ಪಾತ್...... ( ಗೂಡಂಗಡಿಯ ಜನರ ಕರುಳ ಬಳ್ಳಿಯ ಕರೆ....) ಫುಟ್ ಪಾತ್ ಎಂದು ಆಂಗ್ಲ ಭಾಷೆಯಲ್ಲಿ ಕರೆಯಲ್ಪಡುವ…

1 day ago

ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ: ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಅವಧಿ ವಿಸ್ತರಣೆ

ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಗೆ ಸಂಬಂಧಿಸಿದಂತೆ ಆನ್‌ಲೈನ್ ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿಯ ದಿನಾಂಕವನ್ನು ವಿಸ್ತರಿಸಲಾಗಿದೆ. ಜೊತೆಗೆ, ಈಗಾಗಲೇ…

2 days ago

ಪೂರ್ವ ವೈಷಮ್ಯದ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ

ದೊಡ್ಡಬಳ್ಳಾಪುರ: 2019ರ ಜನವರಿಯಲ್ಲಿ ದೊಡ್ಡಬಳ್ಳಾಪುರ ನಗರದ ಕೊರಚರಹಟ್ಟಿಯ ಪ್ರೀತಿ ವೈನ್ಸ್ ವೃತ್ತದ ಸಮೀಪ ನಡೆದಿದ್ದ ಗಂಗಾಧರ್ ಅಲಿಯಾಸ್ ದಾಸ್ ಕೊಲೆ…

2 days ago