ಜನವರಿ ಮಾಹೆಯಿಂದ ಸೆಪ್ಟೆಂಬರ್ ಮಾಹೆಯವರೆಗೆ ಜಿಲ್ಲೆಯಲ್ಲಿ 45 ದೌರ್ಜನ್ಯ ಪ್ರಕರಣಗಳು ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರ ಮೇಲಿನ ದೌರ್ಜನ್ಯ ಪ್ರಕರಣಗಳು ಕಂಡುಬಂದಲ್ಲಿ ವಿಳಂಬ ತೋರದೆ ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ 2024ನೇ ಕ್ಯಾಲೆಂಡರ್ ವರ್ಷದ 3ನೇ ತ್ರೈಮಾಸಿಕ ಜಿಲ್ಲಾ ಮಟ್ಟದ ಜಾಗೃತಿ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಯಾವುದೇ ರೀತಿಯ ದೌರ್ಜನ್ಯ ಪ್ರಕರಣಗಳು ಕಂಡುಬಂದಲ್ಲಿ ಶೀಘ್ರವಾಗಿ ಪ್ರಕರಣ ದಾಖಲಿಸಿ ಅದರ ವಿರುದ್ಧ ಕ್ರಮ ಕೈಗೊಂಡು, ಮುನ್ನೆಚ್ಚರಿಕಾ ಕ್ರಮವಾಗಿ ಇಂತಹ ಘಟನೆಗಳು ಸಂಭವಿಸದಂತೆ ಅಧಿಕಾರಿಗಳು ಎಚ್ಚರ ವಹಿಸಲು ಸೂಚನೆ ನೀಡಿದರು.

ಎಲ್ಲಾ ತಾಲ್ಲೂಕುಗಳಲ್ಲಿ ತಾಲ್ಲೂಕು ಮಟ್ಟದ ಕುಂದು ಕೊರತೆ ಸಭೆಯನ್ನು ಪ್ರತಿ 3 ತಿಂಗಳಿಗೊಮ್ಮೆ ವರ್ಷದಲ್ಲಿ ಒಟ್ಟು 4 ಸಭೆಗಳನ್ನು ನಡೆಸಬೇಕಾಗಿದ್ದು, 2024ನೇ ಕ್ಯಾಲೆಂಡರ್ ವರ್ಷಕ್ಕೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಸಭೆಗಳನ್ನು ಶೀಘ್ರವಾಗಿ ನಡೆಸಿ ಎಂದು ಹೇಳಿದರು.

ಉಪವಿಭಾಗದ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಗಳನ್ನು ಕಡ್ಡಾಯವಾಗಿ ಮೂರು ತಿಂಗಳಿಗೊಮ್ಮೆ ವರ್ಷದಲ್ಲಿ ಒಟ್ಟು ನಾಲ್ಕು ಸಭೆಗಳನ್ನು ನಡೆಸಬೇಕಾಗಿರುತ್ತದೆ, ಈಗಾಗಲೇ ದೊಡ್ಡಬಳ್ಳಾಪುರ ವಿಭಾಗದಲ್ಲಿ ಒಂದು ಸಭೆ ನಡೆಸಲಾಗಿದ್ದು, ಇನ್ನು ಬಾಕಿ ಇರುವ 3 ಸಭೆಗಳು ನಡೆಸಲು ಸೂಚಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ಕಾಯ್ದೆಯಲ್ಲಿ ಪ್ರಕರಣಗಳು ದಾಖಲಾದ ಕೂಡಲೇ ಪ್ರಥಮ ವರ್ತಮಾನ ವರದಿ ಆಧಾರದ ಮೇಲೆ ಪರಿಹಾರ ಧರವನ್ನು ಮಂಜೂರು ಮಾಡಬೇಕಾಗಿರುವುದರಿಂದ ಪ್ರಥಮ ವರ್ತಮಾನ ವರದಿ ಹಾಗೂ ಇತರ ದಾಖಲಾತಿಗಳನ್ನು ಜಿಲ್ಲಾ ತಾಲೂಕು ಕಚೇರಿಗಳಿಗೆ ಇ-ಮೇಲ್ ಮೂಲಕ ಕಳುಹಿಸಲು‌ ತಿಳಿಸಿದರು.
ದೌರ್ಜನ್ಯ ಪ್ರಕರಣಗಳ ದಾಖಲು, ಪರಿಹಾರ ಧನದ ಮಂಜೂರಾತಿ ವಿವರಗಳ ಪರಿಶೀಲನೆ ನಡೆಸಿದ ಅವರು 2024ರ ಜುಲೈ. 1 ರಿಂದ 2024ರ ಸೆಪ್ಟೆಂಬರ್. 22 ವರೆಗೆ ಒಟ್ಟು 78 ಜನ ಸಂತ್ರಸ್ತರಿಗೆ ಒಟ್ಟು ರೂ. 51,02,500/- ಗಳ ಪರಿಹಾರ ಧನವನ್ನು ಮಂಜೂರು ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.

ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ದಾಖಲಾದ ಪ್ರಕರಣಗಳಲ್ಲಿ ತನಿಖೆಯನ್ನು ಪೂರ್ಣಗೊಳಿಸುವ ಚಾರ್ಜ್ ಶೀಟ್ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಒಳ್ಳೆಯ ಪ್ರಗತಿ ಇದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ದೌರ್ಜನ್ಯ ಪ್ರಕರಣಗಳು ಹಾಗೂ ಗಲಭೆ/ಗುಂಪು ಗಲಭೆಗಳು ಹೆಚ್ಚಾಗಿ ಕಂಡುಬಂದ ಹಳ್ಳಿಗಳನ್ನು ಗುರುತಿಸಿ ತಹಶೀಲ್ದಾರ್ ಅವರ ಅಧ್ಯಕ್ಷತೆಯಲ್ಲಿ ಶಾಂತಿಸಭೆ ನಡೆಸಲು ನಿರ್ದೇಶನ‌ ನೀಡಿದರು.

ಪೊಲೀಸ್ ಠಾಣೆಗಳಲ್ಲಿ ನಡೆಯುವ ಕುಂದು ಕೊರತೆ ಸಭೆಗಳಿಗೆ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರನ್ನು ಆಹ್ವಾನಿಸಿದ ಮಾಹಿತಿಯನ್ನು ಸಂಬಂಧಪಟ್ಟ ಅಧಿಕಾರಿಗಳ ಬಳಿ ಪಡೆದುಕೊಂಡರು. ಜನವರಿ ಮಾಹೆಯಿಂದ ಸೆಪ್ಟೆಂಬರ್ ಮಾಹೆಯ ವರೆಗೆ ಜಿಲ್ಲೆಯಲ್ಲಿ ದಾಖಲಾದ ದೌರ್ಜನ್ಯ ಪ್ರಕರಣಗಳ ಸಂಖ್ಯೆ 45 ಆಗಿದೆ‌ ಎಂದು ಅವರು ಹೇಳಿದರು.

ಸಭೆಯಲ್ಲಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸಿ.ಕೆ ಬಾಬಾ, ನೆಲಮಂಗಲ ತಾಲ್ಲೂಕು ತಹಶೀಲ್ದಾರ್ ಅಮೃತ್ ಆತ್ರೇಶ, ಡಿವೈಎಸ್ಪಿ ಅಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಪ್ರೇಮಾ ಟಿ.ಎಲ್‌.ಎಸ್, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

6 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

6 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

9 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

10 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

14 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

18 hours ago