ದೊಡ್ಡಬಳ್ಳಾಪುರ: ನಗರದ ಕರೇನಹಳ್ಳಿ ವಾರ್ಡ್ 31ರ ರಾಜೇಶ್ವರಿ ಟೆಂಟ್ ಸಮೀಪ ಜನವಸತಿ ಪ್ರದೇಶದಲ್ಲಿ ಮದ್ಯ ಮಾರಾಟದ ಅಂಗಡಿ ತೆರೆಯಲು ಮುಂದಾಗಿರುವ ಮಾಲೀಕರ ವಿರುದ್ದ ಸ್ಥಳೀಯ ನಿವಾಸಿಗಳು ಹಾಗೂ ಚುನಾಯಿತ ಜನಪ್ರತಿನಿಧಿಗಳು ಪ್ರತಿಭಟನೆ ನಡೆಸಿದರು.
ಈ ಬಗ್ಗೆ ಮಾಹಿತಿ ನೀಡಿದ್ದ ಸ್ಥಳೀಯ ನಗರಸಭೆ ಸದಸ್ಯೆ ಆರ್.ಪ್ರಭಾನಾಗರಾಜ್, ಅರಳುಮಲ್ಲಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಿರ್ಮಲಾ ಸಿದ್ದೇಗೌಡ, ಉಪಾಧ್ಯಕ್ಷ ದ್ರುವಕುಮಾರ್, ಸದಸ್ಯರಾದ ನವೀನ್ಕುಮಾರ್, ಅಫ್ಸಾನ್ನಯಾಜ್, ಸೀನಪ್ಪ, ಜಿಲ್ಲಾಧಿಕಾರಿಗಳಿಂದ ಮೊದಲುಗೊಂಡು ಎಲ್ಲರಿಗೂ ಮನವಿ ಸಲ್ಲಿಸುವ ಮೂಲಕ ಜನವಸತಿ ಪ್ರದೇಶದಲ್ಲಿ ಮದ್ಯಮಾರಾಟಕ್ಕೆ ಅನುಮತಿ ನೀಡದಂತೆ ಕೋರಲಾಗಿದೆ. ಅಲ್ಲಿದೆ ಹಲವಾರು ಶಾಲಾ, ಕಾಲೇಜುಗಳಿಗೆ ವಿದ್ಯಾರ್ಥಿಗಳು ಹೋಗುವ ಮುಖ್ಯರಸ್ತೆಯು ಸಹ ಇದೇ ಆಗಿರುವುದರಿಂದ ಶಾಲಾ ಮಕ್ಕಳ ಮೇಲೆ ಕೆಟ್ಟಪರಿಣಾಮ ಬೀರಲಿದೆ. ಈಗ ಬಾರ್ ತೆರೆಯುತ್ತಿರುವ ಸಮೀಪದಲ್ಲೇ ದೇವಾಲಯ ಸಹ ಇರುವುದರಿಂದ ನಾಗರೀಕರಿಗು ತೊಂದರೆಯಾಗಲಿದೆ. ಹಾಗಾಗಿ ಈ ಪ್ರದೇಶದಲ್ಲಿ ಬಾರ್ ತೆರೆಯಬಾರದು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ನಗರಸಭೆ ಸದಸ್ಯ ಪ್ರಭಾನಾಗರಾಜ್, ಅರಳುಮಲ್ಲಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಿರ್ಮಲಾ ಸಿದ್ದೇಗೌಡ, ಉಪಾಧ್ಯಕ್ಷ ದ್ರುವಕುಮಾರ್, ಸದಸ್ಯರಾದ ನವೀನ್ ಕುಮಾರ್, ಅಫ್ಸಾನ್ ನಯಾಜ್, ಸೀನಪ್ ಭಾಗವಹಿಸಿದ್ದರು.
ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಚುನಾವಣಾ ಆಯೋಗ…
ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…
ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…
ಅಧ್ಯಾತ್ಮ ಮತ್ತು ಸದ್ಗುರು ಜಗ್ಗಿ ವಾಸುದೇವ್........ ಇತ್ತೀಚಿನ ವರ್ಷಗಳಲ್ಲಿ ಹೆಚ್ಚು ಜನಪ್ರಿಯರಾದ ಅಧ್ಯಾತ್ಮ ಗುರು. ಅಧ್ಯಾತ್ಮಿಕ ಚಿಂತಕರಲ್ಲಿ ವಿವಿಧ ರೀತಿಯ…
ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯ ಗ್ರೂಪ್ ಹಂತದ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಭಾರತ…