ದೊಡ್ಡಬಳ್ಳಾಪುರ: ನಗರದ ಕರೇನಹಳ್ಳಿ ವಾರ್ಡ್ 31ರ ರಾಜೇಶ್ವರಿ ಟೆಂಟ್ ಸಮೀಪ ಜನವಸತಿ ಪ್ರದೇಶದಲ್ಲಿ ಮದ್ಯ ಮಾರಾಟದ ಅಂಗಡಿ ತೆರೆಯಲು ಮುಂದಾಗಿರುವ ಮಾಲೀಕರ ವಿರುದ್ದ ಸ್ಥಳೀಯ ನಿವಾಸಿಗಳು ಹಾಗೂ ಚುನಾಯಿತ ಜನಪ್ರತಿನಿಧಿಗಳು ಪ್ರತಿಭಟನೆ ನಡೆಸಿದರು.
ಈ ಬಗ್ಗೆ ಮಾಹಿತಿ ನೀಡಿದ್ದ ಸ್ಥಳೀಯ ನಗರಸಭೆ ಸದಸ್ಯೆ ಆರ್.ಪ್ರಭಾನಾಗರಾಜ್, ಅರಳುಮಲ್ಲಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಿರ್ಮಲಾ ಸಿದ್ದೇಗೌಡ, ಉಪಾಧ್ಯಕ್ಷ ದ್ರುವಕುಮಾರ್, ಸದಸ್ಯರಾದ ನವೀನ್ಕುಮಾರ್, ಅಫ್ಸಾನ್ನಯಾಜ್, ಸೀನಪ್ಪ, ಜಿಲ್ಲಾಧಿಕಾರಿಗಳಿಂದ ಮೊದಲುಗೊಂಡು ಎಲ್ಲರಿಗೂ ಮನವಿ ಸಲ್ಲಿಸುವ ಮೂಲಕ ಜನವಸತಿ ಪ್ರದೇಶದಲ್ಲಿ ಮದ್ಯಮಾರಾಟಕ್ಕೆ ಅನುಮತಿ ನೀಡದಂತೆ ಕೋರಲಾಗಿದೆ. ಅಲ್ಲಿದೆ ಹಲವಾರು ಶಾಲಾ, ಕಾಲೇಜುಗಳಿಗೆ ವಿದ್ಯಾರ್ಥಿಗಳು ಹೋಗುವ ಮುಖ್ಯರಸ್ತೆಯು ಸಹ ಇದೇ ಆಗಿರುವುದರಿಂದ ಶಾಲಾ ಮಕ್ಕಳ ಮೇಲೆ ಕೆಟ್ಟಪರಿಣಾಮ ಬೀರಲಿದೆ. ಈಗ ಬಾರ್ ತೆರೆಯುತ್ತಿರುವ ಸಮೀಪದಲ್ಲೇ ದೇವಾಲಯ ಸಹ ಇರುವುದರಿಂದ ನಾಗರೀಕರಿಗು ತೊಂದರೆಯಾಗಲಿದೆ. ಹಾಗಾಗಿ ಈ ಪ್ರದೇಶದಲ್ಲಿ ಬಾರ್ ತೆರೆಯಬಾರದು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ನಗರಸಭೆ ಸದಸ್ಯ ಪ್ರಭಾನಾಗರಾಜ್, ಅರಳುಮಲ್ಲಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಿರ್ಮಲಾ ಸಿದ್ದೇಗೌಡ, ಉಪಾಧ್ಯಕ್ಷ ದ್ರುವಕುಮಾರ್, ಸದಸ್ಯರಾದ ನವೀನ್ ಕುಮಾರ್, ಅಫ್ಸಾನ್ ನಯಾಜ್, ಸೀನಪ್ ಭಾಗವಹಿಸಿದ್ದರು.
ಉಡುಪಿ : ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ನಡೆದ ಲೋಕಾಯುಕ್ತ ದಾಳಿಯ ಭಾಗವಾಗಿ ಉಡುಪಿ ಜಿಲ್ಲಾ ಅಬಕಾರಿ ಡಿಸಿ ಶ್ರೀನಿವಾಸ್ ಟಿ.ಎಂ…
ಬೆಂಗಳೂರು: ಸಿಲಿಕಾನ್ ಸಿಟಿಯ ವರ್ತೂರಿನಲ್ಲಿ ಭಯಾನಕ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪ್ರೀತಿಯ ಹೆಸರಿನಲ್ಲಿ ಮದುವೆಯ ಸತ್ಯವನ್ನು ಮುಚ್ಚಿಟ್ಟು, ಲಿವ್-ಇನ್…
ಜವಳಿ ಅಭಿವೃದ್ಧಿ ಆಯುಕ್ತರು ಮತ್ತು ಕೈಮಗ್ಗ ಮತ್ತು ಜವಳಿ ನಿರ್ದೇಶಕರಾಗಿ ಎ.ಬಿ.ಬಸವರಾಜು ಅವರು ನೇಮಕಗೊಂಡಿದ್ದಾರೆ... ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿದ್ದ ಎ.ಬಿ…
ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ ಆರಂಭವಾಗಿದ್ದು, ನಗರಸಭೆಯಿಂದ ವಾರಕ್ಕೊಮ್ಮೆ ಕೇವಲ ಅರ್ಧ ಗಂಟೆ ನೀರು ಬಿಡುತ್ತಿರುವುದು ಸರಿಯಲ್ಲ.…
ಕೊಲ್ಲಿ ರಾಷ್ಟ್ರಗಳ ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಮುಂದಿಟ್ಟುಕೊಂಡು ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಅಂತಹ ಗ್ಯಾಸ್…
ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸಪ್ಲೆ, ಕಾಲೇಜುಗಳ ಬಳಿ ಸುಖಾ ಸುಮ್ಮನೆ ಓಡಾಟ, ಏರಿಯಾಗಳಲ್ಲಿ ಹವಾ ಮೇಂಟೈನ್ ಮಾಡೋದು, ಹಫ್ತಾ ವಸೂಲಿ…