ಜನವಸತಿ ಪ್ರದೇಶದಲ್ಲಿ ಮದ್ಯ ಮಾರಾಟದ ಅಂಗಡಿ ತೆರೆಯಲು ವಿರೋಧ

ದೊಡ್ಡಬಳ್ಳಾಪುರ: ನಗರದ ಕರೇನಹಳ್ಳಿ ವಾರ್ಡ್ 31ರ ರಾಜೇಶ್ವರಿ ಟೆಂಟ್ ಸಮೀಪ ಜನವಸತಿ ಪ್ರದೇಶದಲ್ಲಿ ಮದ್ಯ ಮಾರಾಟದ ಅಂಗಡಿ ತೆರೆಯಲು ಮುಂದಾಗಿರುವ ಮಾಲೀಕರ ವಿರುದ್ದ ಸ್ಥಳೀಯ ನಿವಾಸಿಗಳು ಹಾಗೂ ಚುನಾಯಿತ ಜನಪ್ರತಿನಿಧಿಗಳು ಪ್ರತಿಭಟನೆ ನಡೆಸಿದರು.

ಈ ಬಗ್ಗೆ ಮಾಹಿತಿ ನೀಡಿದ್ದ ಸ್ಥಳೀಯ ನಗರಸಭೆ ಸದಸ್ಯೆ ಆರ್.ಪ್ರಭಾನಾಗರಾಜ್, ಅರಳುಮಲ್ಲಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಿರ್ಮಲಾ ಸಿದ್ದೇಗೌಡ, ಉಪಾಧ್ಯಕ್ಷ ದ್ರುವಕುಮಾರ್, ಸದಸ್ಯರಾದ ನವೀನ್ಕುಮಾರ್, ಅಫ್ಸಾನ್ನಯಾಜ್, ಸೀನಪ್ಪ, ಜಿಲ್ಲಾಧಿಕಾರಿಗಳಿಂದ ಮೊದಲುಗೊಂಡು ಎಲ್ಲರಿಗೂ ಮನವಿ ಸಲ್ಲಿಸುವ ಮೂಲಕ ಜನವಸತಿ ಪ್ರದೇಶದಲ್ಲಿ ಮದ್ಯಮಾರಾಟಕ್ಕೆ ಅನುಮತಿ ನೀಡದಂತೆ ಕೋರಲಾಗಿದೆ. ಅಲ್ಲಿದೆ ಹಲವಾರು ಶಾಲಾ, ಕಾಲೇಜುಗಳಿಗೆ ವಿದ್ಯಾರ್ಥಿಗಳು ಹೋಗುವ ಮುಖ್ಯರಸ್ತೆಯು ಸಹ ಇದೇ ಆಗಿರುವುದರಿಂದ ಶಾಲಾ ಮಕ್ಕಳ ಮೇಲೆ ಕೆಟ್ಟಪರಿಣಾಮ ಬೀರಲಿದೆ. ಈಗ ಬಾರ್ ತೆರೆಯುತ್ತಿರುವ ಸಮೀಪದಲ್ಲೇ ದೇವಾಲಯ ಸಹ ಇರುವುದರಿಂದ ನಾಗರೀಕರಿಗು ತೊಂದರೆಯಾಗಲಿದೆ. ಹಾಗಾಗಿ ಈ ಪ್ರದೇಶದಲ್ಲಿ ಬಾರ್ ತೆರೆಯಬಾರದು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ನಗರಸಭೆ ಸದಸ್ಯ ಪ್ರಭಾನಾಗರಾಜ್, ಅರಳುಮಲ್ಲಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಿರ್ಮಲಾ ಸಿದ್ದೇಗೌಡ, ಉಪಾಧ್ಯಕ್ಷ ದ್ರುವಕುಮಾರ್, ಸದಸ್ಯರಾದ ನವೀನ್ ಕುಮಾರ್, ಅಫ್ಸಾನ್ ನಯಾಜ್, ಸೀನಪ್ ಭಾಗವಹಿಸಿದ್ದರು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

2 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

3 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

5 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

6 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

11 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

14 hours ago