ದೊಡ್ಡಬಳ್ಳಾಪುರ: ನಗರದ ಕರೇನಹಳ್ಳಿ ವಾರ್ಡ್ 31ರ ರಾಜೇಶ್ವರಿ ಟೆಂಟ್ ಸಮೀಪ ಜನವಸತಿ ಪ್ರದೇಶದಲ್ಲಿ ಮದ್ಯ ಮಾರಾಟದ ಅಂಗಡಿ ತೆರೆಯಲು ಮುಂದಾಗಿರುವ ಮಾಲೀಕರ ವಿರುದ್ದ ಸ್ಥಳೀಯ ನಿವಾಸಿಗಳು ಹಾಗೂ ಚುನಾಯಿತ ಜನಪ್ರತಿನಿಧಿಗಳು ಪ್ರತಿಭಟನೆ ನಡೆಸಿದರು.
ಈ ಬಗ್ಗೆ ಮಾಹಿತಿ ನೀಡಿದ್ದ ಸ್ಥಳೀಯ ನಗರಸಭೆ ಸದಸ್ಯೆ ಆರ್.ಪ್ರಭಾನಾಗರಾಜ್, ಅರಳುಮಲ್ಲಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಿರ್ಮಲಾ ಸಿದ್ದೇಗೌಡ, ಉಪಾಧ್ಯಕ್ಷ ದ್ರುವಕುಮಾರ್, ಸದಸ್ಯರಾದ ನವೀನ್ಕುಮಾರ್, ಅಫ್ಸಾನ್ನಯಾಜ್, ಸೀನಪ್ಪ, ಜಿಲ್ಲಾಧಿಕಾರಿಗಳಿಂದ ಮೊದಲುಗೊಂಡು ಎಲ್ಲರಿಗೂ ಮನವಿ ಸಲ್ಲಿಸುವ ಮೂಲಕ ಜನವಸತಿ ಪ್ರದೇಶದಲ್ಲಿ ಮದ್ಯಮಾರಾಟಕ್ಕೆ ಅನುಮತಿ ನೀಡದಂತೆ ಕೋರಲಾಗಿದೆ. ಅಲ್ಲಿದೆ ಹಲವಾರು ಶಾಲಾ, ಕಾಲೇಜುಗಳಿಗೆ ವಿದ್ಯಾರ್ಥಿಗಳು ಹೋಗುವ ಮುಖ್ಯರಸ್ತೆಯು ಸಹ ಇದೇ ಆಗಿರುವುದರಿಂದ ಶಾಲಾ ಮಕ್ಕಳ ಮೇಲೆ ಕೆಟ್ಟಪರಿಣಾಮ ಬೀರಲಿದೆ. ಈಗ ಬಾರ್ ತೆರೆಯುತ್ತಿರುವ ಸಮೀಪದಲ್ಲೇ ದೇವಾಲಯ ಸಹ ಇರುವುದರಿಂದ ನಾಗರೀಕರಿಗು ತೊಂದರೆಯಾಗಲಿದೆ. ಹಾಗಾಗಿ ಈ ಪ್ರದೇಶದಲ್ಲಿ ಬಾರ್ ತೆರೆಯಬಾರದು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ನಗರಸಭೆ ಸದಸ್ಯ ಪ್ರಭಾನಾಗರಾಜ್, ಅರಳುಮಲ್ಲಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಿರ್ಮಲಾ ಸಿದ್ದೇಗೌಡ, ಉಪಾಧ್ಯಕ್ಷ ದ್ರುವಕುಮಾರ್, ಸದಸ್ಯರಾದ ನವೀನ್ ಕುಮಾರ್, ಅಫ್ಸಾನ್ ನಯಾಜ್, ಸೀನಪ್ ಭಾಗವಹಿಸಿದ್ದರು.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…