ದೊಡ್ಡಬಳ್ಳಾಪುರ: ನಗರದ ಕರೇನಹಳ್ಳಿ ವಾರ್ಡ್ 31ರ ರಾಜೇಶ್ವರಿ ಟೆಂಟ್ ಸಮೀಪ ಜನವಸತಿ ಪ್ರದೇಶದಲ್ಲಿ ಮದ್ಯ ಮಾರಾಟದ ಅಂಗಡಿ ತೆರೆಯಲು ಮುಂದಾಗಿರುವ ಮಾಲೀಕರ ವಿರುದ್ದ ಸ್ಥಳೀಯ ನಿವಾಸಿಗಳು ಹಾಗೂ ಚುನಾಯಿತ ಜನಪ್ರತಿನಿಧಿಗಳು ಪ್ರತಿಭಟನೆ ನಡೆಸಿದರು.
ಈ ಬಗ್ಗೆ ಮಾಹಿತಿ ನೀಡಿದ್ದ ಸ್ಥಳೀಯ ನಗರಸಭೆ ಸದಸ್ಯೆ ಆರ್.ಪ್ರಭಾನಾಗರಾಜ್, ಅರಳುಮಲ್ಲಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಿರ್ಮಲಾ ಸಿದ್ದೇಗೌಡ, ಉಪಾಧ್ಯಕ್ಷ ದ್ರುವಕುಮಾರ್, ಸದಸ್ಯರಾದ ನವೀನ್ಕುಮಾರ್, ಅಫ್ಸಾನ್ನಯಾಜ್, ಸೀನಪ್ಪ, ಜಿಲ್ಲಾಧಿಕಾರಿಗಳಿಂದ ಮೊದಲುಗೊಂಡು ಎಲ್ಲರಿಗೂ ಮನವಿ ಸಲ್ಲಿಸುವ ಮೂಲಕ ಜನವಸತಿ ಪ್ರದೇಶದಲ್ಲಿ ಮದ್ಯಮಾರಾಟಕ್ಕೆ ಅನುಮತಿ ನೀಡದಂತೆ ಕೋರಲಾಗಿದೆ. ಅಲ್ಲಿದೆ ಹಲವಾರು ಶಾಲಾ, ಕಾಲೇಜುಗಳಿಗೆ ವಿದ್ಯಾರ್ಥಿಗಳು ಹೋಗುವ ಮುಖ್ಯರಸ್ತೆಯು ಸಹ ಇದೇ ಆಗಿರುವುದರಿಂದ ಶಾಲಾ ಮಕ್ಕಳ ಮೇಲೆ ಕೆಟ್ಟಪರಿಣಾಮ ಬೀರಲಿದೆ. ಈಗ ಬಾರ್ ತೆರೆಯುತ್ತಿರುವ ಸಮೀಪದಲ್ಲೇ ದೇವಾಲಯ ಸಹ ಇರುವುದರಿಂದ ನಾಗರೀಕರಿಗು ತೊಂದರೆಯಾಗಲಿದೆ. ಹಾಗಾಗಿ ಈ ಪ್ರದೇಶದಲ್ಲಿ ಬಾರ್ ತೆರೆಯಬಾರದು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ನಗರಸಭೆ ಸದಸ್ಯ ಪ್ರಭಾನಾಗರಾಜ್, ಅರಳುಮಲ್ಲಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಿರ್ಮಲಾ ಸಿದ್ದೇಗೌಡ, ಉಪಾಧ್ಯಕ್ಷ ದ್ರುವಕುಮಾರ್, ಸದಸ್ಯರಾದ ನವೀನ್ ಕುಮಾರ್, ಅಫ್ಸಾನ್ ನಯಾಜ್, ಸೀನಪ್ ಭಾಗವಹಿಸಿದ್ದರು.
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…