ರಾಜ್ಯದ ಜನತೆಯ ಆದೇಶವನ್ನು ನಾನು ಸ್ವಾಗತಿಸುತ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಾದೇಶವೇ ಅಂತಿಮ. ಸೋಲು, ಗೆಲುವನ್ನು ನಾನು ಸಮಚಿತ್ತದಿಂದ ಸ್ವೀಕರಿಸುತ್ತೇನೆ. ಆದರೆ, ಈ ಸೋಲು ಅಂತಿಮವಲ್ಲ, ನನ್ನ ಹೋರಾಟ ನಿಲ್ಲುವುದಿಲ್ಲ, ಸದಾ ಜನರ ಜತೆಯಲ್ಲೇ ಇರುತ್ತೇನೆ. ನಮ್ಮ ಪಕ್ಷವನ್ನು ಆಶೀರ್ವದಿಸಿದ ಮಹಾಜನತೆಗೆ ಅಭಿನಂದನೆಗಳು ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ನನಗಾಗಲಿ, ನಮ್ಮ ಕುಟುಂಬಕ್ಕೆ ಆಗಲಿ ಸೋಲು, ಗೆಲುವು ಹೊಸದೇನಲ್ಲ. ಈ ಹಿಂದೆ ಹೆಚ್.ಡಿ.ದೇವೇಗೌಡರು, ಹೆಚ್.ಡಿ.ರೇವಣ್ಣ, ನಾನೂ ಸೋತಿದ್ದೆವು. ಹಾಗೆಯೇ ಗೆದ್ದಾಗ ಬದ್ಧತೆಯಿಂದ ಜನಸೇವೆ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಸಂಘಟನೆಯಲ್ಲಿ ತೊಡಗಿಸಿಕೊಂಡು ಪಕ್ಷ ಕಟ್ಟುವ ಕೆಲಸ ಮಾಡುತ್ತೇನೆ.
ರಾಜ್ಯದಲ್ಲಿ ಅಸ್ತಿತ್ವಕ್ಕೆ ಬರಲಿರುವ ನೂತನ ಸರಕಾರಕ್ಕೆ ಶುಭವಾಗಲಿ. ಜನರ ಆಶೋತ್ತರಳಿಗೆ ಸ್ಪಂದಿಸಲಿ ಎಂದು ಹಾರೈಸುತ್ತೇನೆ.
ಈ ಚುನಾವಣೆಯಲ್ಲಿ ಪಕ್ಷದ ಪರವಾಗಿ ಹಗಲಿರುಳು ಶ್ರಮಿಸಿದ ಕಾರ್ಯಕರ್ತರು, ಮುಖಂಡರು, ಅಭ್ಯರ್ಥಿಗಳಿಗೆ ನನ್ನ ಕೃತಜ್ಞತೆಗಳು. ಯಾವುದೇ ಕಾರಣಕ್ಕೂ ಯಾರೂ ಧೃತಿಗೆಡುವುದು ಬೇಡ, ನಿಮ್ಮ ಜತೆಯಲ್ಲಿ ನಾನಿದ್ದೇನೆ ಎಂದು ಬರೆದುಕೊಂಡಿದ್ದಾರೆ.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…