ಜನ ಔಷಧ ಸಪ್ತಾಹ: ಜನಸಾಮಾನ್ಯರಿಗೆ ಕೈಗೆಟಕುವ ದರದಲ್ಲಿ ಔಷಧ- ಶಾಸಕ ಧೀರಜ್‌ ಧೀರಜ್ ಮುನಿರಾಜ್

ದೇಶದ ಶ್ರೀಸಾಮಾನ್ಯರಿಗೆ ಕೈಗೆಟಕುವ ದರದಲ್ಲಿ ಗುಣಮಟ್ಟದ ಆರೋಗ್ಯ ಸೇವೆಗಳು, ಔಷಧ, ಶಸ್ತ್ರಚಿಕಿತ್ಸಾ ಉಪಕರಣಗಳು ಲಭ್ಯವಾಗಿಸಬೇಕು ಎಂಬ ಉದ್ದೇಶದಿಂದ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿ ಯೋಜನೆಯನ್ನು (ಪಿಎಂಬಿಜೆಪಿ) ಜಾರಿಗೊಳಿಸಲಾಗಿದೆ ಎಂದು ಶಾಸಕ ಧೀರಜ್ ಮುನಿರಾಜು ತಿಳಿಸಿದರು.

ನಗರಸಭೆ ರಸ್ತೆಯಲ್ಲಿರುವ ಶ್ರೀ ರಾಮೇಗೌಡ ಸಹಕಾರ ಭವನದ ಭಾರತೀಯ ಜನ ಔಷಧಿ ಕೇಂದ್ರ ಬಳಿ ಬುಧವಾರ ಹಮ್ಮಿಕೊಂಡಿದ್ದ ಜನೌಷಧ ಸಪ್ತಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜನೌಷಧಿ ಕೇಂದ್ರಗಳಿಂದ ಜನಸಾಮಾನ್ಯರಿಗೆ ದೊಡ್ಡ ಪ್ರಮಾಣದಲ್ಲಿ ಹಣ ಉಳಿತಾಯವಾಗುತ್ತಿದೆ. ಜನೌಷಧಿಯ ದರ ಶೇ 10ರಿಂದ ಶೇ.90ರಷ್ಟು ಕಡಿಮೆಯಾಗಿದೆ. ನಮ್ಮ ನಗರದ ಕೇಂದ್ರಕ್ಕೆ ರಾಷ್ಟ್ರೀಯ ಪ್ರಶಸ್ತಿ ಸಂದಿರುವುದು ಹೆಮ್ಮೆಯ ವಿಚಾರವಾಗಿದೆ ಎಂದರು.

ಸರ್ಕಾರಿ ಆಸ್ಪತ್ರೆಗಳ ಆವರಣಗಳಿಂದ ಜನೌಷಧ ಕೇಂದ್ರಗಳನ್ನ ತೆರವು ಮಾಡಲು ಕಾಂಗ್ರೆಸ್ ಸರ್ಕಾರ ಮುಂದಾಗಿದ್ದ ವೇಳೆ ಬಿಜೆಪಿ ಹೋರಾಟ ಮಾಡಿ ಉಳಿಸಿಕೊಂಡಿದೆ ಎಂದರು.

ಜನೌಷಧ ಕೇಂದ್ರದ ದಕ್ಷಿಣ ಕರ್ನಾಟಕದ ನೋಡಲ್ ಅಧಿಕಾರಿ ಅನುಪಮ್ ಪಾಠಾಕ್ ಮಾತನಾಡಿ, ಸಾಮಾನ್ಯ ಔಷಧ ಅಂಗಡಿಗಳಲ್ಲಿ ಸಿಗುವ ಔಷಧಕ್ಕೂ ಜನೌಷಧ ಕೇಂದ್ರಗಳಲ್ಲಿ ಸಿಗುವ ಔಷಧಗಳಿಗೂ ಯಾವುದೇ ವ್ಯತ್ಯಾಸವಿಲ್ಲ. ಸಾಮಾನ್ಯ ಔಷಧ ಅಂಗಡಿಗಳಲ್ಲಿ ಕಂಪನಿಗಳ ಬ್ರಾಂಡ್‌ನಲ್ಲಿ ಔಷಧವನ್ನು ಮಾರಾಟ ಮಾಡಲಾಗುತ್ತಿದೆ. ಆದರೆ ಜನೌಷಧ ಅಂಗಡಿಗಳಲ್ಲಿ ಮೂಲ ರಾಸಾಯನಿಕದ ಹೆಸರಿನಲ್ಲಿಯೇ ಔಷಧ ಮಾರಾಟ ಮಾಡಲಾಗುತ್ತಿದೆ ಎಂದರು.

“ಜನೌಷಧಿ ಸಪ್ತಾಹದ” ಅಂಗವಾಗಿ ದೇಶಾದ್ಯಂತ ಆರೋಗ್ಯ ಶಿಬಿರಗಳನ್ನು ಏರ್ಪಡಿಸಲಾಗಿದೆ. ಉಚಿತ ಆರೋಗ್ಯ ತಪಾಸಣೆ, ಉಚಿತ ಔಷಧ ವಿತರಣೆ ಸೇರಿದಂತೆ ಜನೌಷಧಿ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಒಂದು ವಾರಕಾಲ ಬೇರೆ ಬೇರೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಈ ವೇಳೆ ಜನೌಷಧ ಕೇಂದ್ರದ ದಕ್ಷಿಣ ಕರ್ನಾಟಕದ ನೋಡಲ್ ಅಧಿಕಾರಿ ಅನುಪಮ್ ಪಾಠಾಕ್, ಜನೌಷಧ ಕೇಂದ್ರದ ವೈದ್ಯೆ ಡಾ.ಸಿಂದು, ಮುಖಂಡರಾದ ವಿಜಯ್ ಕುಮಾರ್, ಗೋಪಿನಾಥ, ವೆಂಕಟರಾಜು ಮತ್ತಿತ್ತರರು ಇದ್ದರು.

Ramesh Babu

Journalist

Recent Posts

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

4 hours ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

21 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

1 day ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

1 day ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

2 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago