ಜನ ಔಷಧ ಸಪ್ತಾಹ: ಜನಸಾಮಾನ್ಯರಿಗೆ ಕೈಗೆಟಕುವ ದರದಲ್ಲಿ ಔಷಧ- ಶಾಸಕ ಧೀರಜ್‌ ಧೀರಜ್ ಮುನಿರಾಜ್

ದೇಶದ ಶ್ರೀಸಾಮಾನ್ಯರಿಗೆ ಕೈಗೆಟಕುವ ದರದಲ್ಲಿ ಗುಣಮಟ್ಟದ ಆರೋಗ್ಯ ಸೇವೆಗಳು, ಔಷಧ, ಶಸ್ತ್ರಚಿಕಿತ್ಸಾ ಉಪಕರಣಗಳು ಲಭ್ಯವಾಗಿಸಬೇಕು ಎಂಬ ಉದ್ದೇಶದಿಂದ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿ ಯೋಜನೆಯನ್ನು (ಪಿಎಂಬಿಜೆಪಿ) ಜಾರಿಗೊಳಿಸಲಾಗಿದೆ ಎಂದು ಶಾಸಕ ಧೀರಜ್ ಮುನಿರಾಜು ತಿಳಿಸಿದರು.

ನಗರಸಭೆ ರಸ್ತೆಯಲ್ಲಿರುವ ಶ್ರೀ ರಾಮೇಗೌಡ ಸಹಕಾರ ಭವನದ ಭಾರತೀಯ ಜನ ಔಷಧಿ ಕೇಂದ್ರ ಬಳಿ ಬುಧವಾರ ಹಮ್ಮಿಕೊಂಡಿದ್ದ ಜನೌಷಧ ಸಪ್ತಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜನೌಷಧಿ ಕೇಂದ್ರಗಳಿಂದ ಜನಸಾಮಾನ್ಯರಿಗೆ ದೊಡ್ಡ ಪ್ರಮಾಣದಲ್ಲಿ ಹಣ ಉಳಿತಾಯವಾಗುತ್ತಿದೆ. ಜನೌಷಧಿಯ ದರ ಶೇ 10ರಿಂದ ಶೇ.90ರಷ್ಟು ಕಡಿಮೆಯಾಗಿದೆ. ನಮ್ಮ ನಗರದ ಕೇಂದ್ರಕ್ಕೆ ರಾಷ್ಟ್ರೀಯ ಪ್ರಶಸ್ತಿ ಸಂದಿರುವುದು ಹೆಮ್ಮೆಯ ವಿಚಾರವಾಗಿದೆ ಎಂದರು.

ಸರ್ಕಾರಿ ಆಸ್ಪತ್ರೆಗಳ ಆವರಣಗಳಿಂದ ಜನೌಷಧ ಕೇಂದ್ರಗಳನ್ನ ತೆರವು ಮಾಡಲು ಕಾಂಗ್ರೆಸ್ ಸರ್ಕಾರ ಮುಂದಾಗಿದ್ದ ವೇಳೆ ಬಿಜೆಪಿ ಹೋರಾಟ ಮಾಡಿ ಉಳಿಸಿಕೊಂಡಿದೆ ಎಂದರು.

ಜನೌಷಧ ಕೇಂದ್ರದ ದಕ್ಷಿಣ ಕರ್ನಾಟಕದ ನೋಡಲ್ ಅಧಿಕಾರಿ ಅನುಪಮ್ ಪಾಠಾಕ್ ಮಾತನಾಡಿ, ಸಾಮಾನ್ಯ ಔಷಧ ಅಂಗಡಿಗಳಲ್ಲಿ ಸಿಗುವ ಔಷಧಕ್ಕೂ ಜನೌಷಧ ಕೇಂದ್ರಗಳಲ್ಲಿ ಸಿಗುವ ಔಷಧಗಳಿಗೂ ಯಾವುದೇ ವ್ಯತ್ಯಾಸವಿಲ್ಲ. ಸಾಮಾನ್ಯ ಔಷಧ ಅಂಗಡಿಗಳಲ್ಲಿ ಕಂಪನಿಗಳ ಬ್ರಾಂಡ್‌ನಲ್ಲಿ ಔಷಧವನ್ನು ಮಾರಾಟ ಮಾಡಲಾಗುತ್ತಿದೆ. ಆದರೆ ಜನೌಷಧ ಅಂಗಡಿಗಳಲ್ಲಿ ಮೂಲ ರಾಸಾಯನಿಕದ ಹೆಸರಿನಲ್ಲಿಯೇ ಔಷಧ ಮಾರಾಟ ಮಾಡಲಾಗುತ್ತಿದೆ ಎಂದರು.

“ಜನೌಷಧಿ ಸಪ್ತಾಹದ” ಅಂಗವಾಗಿ ದೇಶಾದ್ಯಂತ ಆರೋಗ್ಯ ಶಿಬಿರಗಳನ್ನು ಏರ್ಪಡಿಸಲಾಗಿದೆ. ಉಚಿತ ಆರೋಗ್ಯ ತಪಾಸಣೆ, ಉಚಿತ ಔಷಧ ವಿತರಣೆ ಸೇರಿದಂತೆ ಜನೌಷಧಿ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಒಂದು ವಾರಕಾಲ ಬೇರೆ ಬೇರೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಈ ವೇಳೆ ಜನೌಷಧ ಕೇಂದ್ರದ ದಕ್ಷಿಣ ಕರ್ನಾಟಕದ ನೋಡಲ್ ಅಧಿಕಾರಿ ಅನುಪಮ್ ಪಾಠಾಕ್, ಜನೌಷಧ ಕೇಂದ್ರದ ವೈದ್ಯೆ ಡಾ.ಸಿಂದು, ಮುಖಂಡರಾದ ವಿಜಯ್ ಕುಮಾರ್, ಗೋಪಿನಾಥ, ವೆಂಕಟರಾಜು ಮತ್ತಿತ್ತರರು ಇದ್ದರು.

Ramesh Babu

Journalist

Recent Posts

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಸೋಲು

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಸೋಲಾಗಿದೆ. ವಿಧೇಯಕ ಅಂಗೀಕಾರವಾಗಲು 326 ಸದಸ್ಯರ ಬೆಂಬಲ‌ ಬೇಕಿತ್ತು.‌ ಒಟ್ಟಾರೆ 489 ಸದಸ್ಯರು ಮತ…

6 hours ago

ಧಾರವಾಡದ ಬಿಜೆಪಿ ಮುಖಂಡ ಯೋಗೀಶ್‌ ಗೌಡ ಹತ್ಯೆ ಪ್ರಕರಣ: ಹಾಲಿ ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ ಪ್ರಕಟ

2016ರಲ್ಲಿ ಧಾರವಾಡದಲ್ಲಿ ಜಿಲ್ಲಾ ಪಂಚಾಯಿತಿಯ ಬಿಜೆಪಿ ಸದಸ್ಯರಾಗಿದ್ದ ಯೋಗೀಶಗೌಡ ಗೌಡ ಹತ್ಯೆ ಪ್ರಕರಣದಲ್ಲಿ ದೋಷಿಗಳಾದ ಮಾಜಿ ಸಚಿವ ಹಾಗೂ ಹಾಲಿ…

9 hours ago

ಚಿನ್ನಸ್ವಾಮಿ ಕ್ರೀಡಾಂಗಣದ ಕ್ಯಾಂಟೀನ್ ನೌಕರನ ಬಳಿ 100 ಐಪಿಎಲ್ ಟಿಕೆಟ್ ಪತ್ತೆ

ಚಿನ್ನಸ್ವಾಮಿ ಕ್ರೀಡಾಂಗಣದ ಕ್ಯಾಂಟೀನ್ ನೌಕರನ ಬಳಿ 100 ಐಪಿಎಲ್ ಟಿಕೆಟ್ ಪತ್ತೆಯಾಗಿದೆ. ಕ್ಯಾಂಟೀನ್ ನೌಕರ 100ಕ್ಕೂ ಹೆಚ್ಚು ಐಪಿಎಲ್ ಟಿಕೆಟ್‌ಗಳನ್ನು…

12 hours ago

ಲವ್ ಜಿಹಾದ್ ಮತ್ತೊಮ್ಮೆ ಇಡೀ ದೇಶಾದ್ಯಂತ ಮಾಧ್ಯಮಗಳಲ್ಲಿ ಚರ್ಚೆ

ಲವ್ ಜಿಹಾದ್....... ಪ್ರೀತಿ - ಪ್ರೇಮದ ಧರ್ಮ ಯುದ್ಧ..... ಒಂದು ಆತ್ಮಾವಲೋಕನ,..... ನಿಜ ಪ್ರೀತಿಯನ್ನು ಅನುಮಾನದಿಂದ ನೋಡುವ ಅತ್ಯಂತ ಕೆಟ್ಟ,…

20 hours ago

ಪ್ರಸ್ತುತ 114 ತಾಲೂಕುಗಳ 598 ಗ್ರಾಮ ಪಂಚಾಯತಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿದೆ- ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆ, ಜಾನುವಾರುಗಳ…

1 day ago

LKG, UKG ತರಗತಿಗಳಿಗೆ ಉಚಿತ ಪ್ರವೇಶ ಪಡೆಯಲು ಅರ್ಜಿ ಆಹ್ವಾನ

2026-27ನೇ ಶೈಕ್ಷಣಿಕ ಸಾಲಿಗೆ ಅಲ್ಪಸಂಖ್ಯಾತರ ನಿದೇಶನಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕು (ವಿಜಯಪುರ) ದಲ್ಲಿ ಕಾರ್ಯನಿರ್ವಹಿಸುತ್ತಿರುವ…

1 day ago