ಜನ ಔಷಧ ಸಪ್ತಾಹ: ಜನಸಾಮಾನ್ಯರಿಗೆ ಕೈಗೆಟಕುವ ದರದಲ್ಲಿ ಔಷಧ- ಶಾಸಕ ಧೀರಜ್‌ ಧೀರಜ್ ಮುನಿರಾಜ್

ದೇಶದ ಶ್ರೀಸಾಮಾನ್ಯರಿಗೆ ಕೈಗೆಟಕುವ ದರದಲ್ಲಿ ಗುಣಮಟ್ಟದ ಆರೋಗ್ಯ ಸೇವೆಗಳು, ಔಷಧ, ಶಸ್ತ್ರಚಿಕಿತ್ಸಾ ಉಪಕರಣಗಳು ಲಭ್ಯವಾಗಿಸಬೇಕು ಎಂಬ ಉದ್ದೇಶದಿಂದ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿ ಯೋಜನೆಯನ್ನು (ಪಿಎಂಬಿಜೆಪಿ) ಜಾರಿಗೊಳಿಸಲಾಗಿದೆ ಎಂದು ಶಾಸಕ ಧೀರಜ್ ಮುನಿರಾಜು ತಿಳಿಸಿದರು.

ನಗರಸಭೆ ರಸ್ತೆಯಲ್ಲಿರುವ ಶ್ರೀ ರಾಮೇಗೌಡ ಸಹಕಾರ ಭವನದ ಭಾರತೀಯ ಜನ ಔಷಧಿ ಕೇಂದ್ರ ಬಳಿ ಬುಧವಾರ ಹಮ್ಮಿಕೊಂಡಿದ್ದ ಜನೌಷಧ ಸಪ್ತಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜನೌಷಧಿ ಕೇಂದ್ರಗಳಿಂದ ಜನಸಾಮಾನ್ಯರಿಗೆ ದೊಡ್ಡ ಪ್ರಮಾಣದಲ್ಲಿ ಹಣ ಉಳಿತಾಯವಾಗುತ್ತಿದೆ. ಜನೌಷಧಿಯ ದರ ಶೇ 10ರಿಂದ ಶೇ.90ರಷ್ಟು ಕಡಿಮೆಯಾಗಿದೆ. ನಮ್ಮ ನಗರದ ಕೇಂದ್ರಕ್ಕೆ ರಾಷ್ಟ್ರೀಯ ಪ್ರಶಸ್ತಿ ಸಂದಿರುವುದು ಹೆಮ್ಮೆಯ ವಿಚಾರವಾಗಿದೆ ಎಂದರು.

ಸರ್ಕಾರಿ ಆಸ್ಪತ್ರೆಗಳ ಆವರಣಗಳಿಂದ ಜನೌಷಧ ಕೇಂದ್ರಗಳನ್ನ ತೆರವು ಮಾಡಲು ಕಾಂಗ್ರೆಸ್ ಸರ್ಕಾರ ಮುಂದಾಗಿದ್ದ ವೇಳೆ ಬಿಜೆಪಿ ಹೋರಾಟ ಮಾಡಿ ಉಳಿಸಿಕೊಂಡಿದೆ ಎಂದರು.

ಜನೌಷಧ ಕೇಂದ್ರದ ದಕ್ಷಿಣ ಕರ್ನಾಟಕದ ನೋಡಲ್ ಅಧಿಕಾರಿ ಅನುಪಮ್ ಪಾಠಾಕ್ ಮಾತನಾಡಿ, ಸಾಮಾನ್ಯ ಔಷಧ ಅಂಗಡಿಗಳಲ್ಲಿ ಸಿಗುವ ಔಷಧಕ್ಕೂ ಜನೌಷಧ ಕೇಂದ್ರಗಳಲ್ಲಿ ಸಿಗುವ ಔಷಧಗಳಿಗೂ ಯಾವುದೇ ವ್ಯತ್ಯಾಸವಿಲ್ಲ. ಸಾಮಾನ್ಯ ಔಷಧ ಅಂಗಡಿಗಳಲ್ಲಿ ಕಂಪನಿಗಳ ಬ್ರಾಂಡ್‌ನಲ್ಲಿ ಔಷಧವನ್ನು ಮಾರಾಟ ಮಾಡಲಾಗುತ್ತಿದೆ. ಆದರೆ ಜನೌಷಧ ಅಂಗಡಿಗಳಲ್ಲಿ ಮೂಲ ರಾಸಾಯನಿಕದ ಹೆಸರಿನಲ್ಲಿಯೇ ಔಷಧ ಮಾರಾಟ ಮಾಡಲಾಗುತ್ತಿದೆ ಎಂದರು.

“ಜನೌಷಧಿ ಸಪ್ತಾಹದ” ಅಂಗವಾಗಿ ದೇಶಾದ್ಯಂತ ಆರೋಗ್ಯ ಶಿಬಿರಗಳನ್ನು ಏರ್ಪಡಿಸಲಾಗಿದೆ. ಉಚಿತ ಆರೋಗ್ಯ ತಪಾಸಣೆ, ಉಚಿತ ಔಷಧ ವಿತರಣೆ ಸೇರಿದಂತೆ ಜನೌಷಧಿ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಒಂದು ವಾರಕಾಲ ಬೇರೆ ಬೇರೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಈ ವೇಳೆ ಜನೌಷಧ ಕೇಂದ್ರದ ದಕ್ಷಿಣ ಕರ್ನಾಟಕದ ನೋಡಲ್ ಅಧಿಕಾರಿ ಅನುಪಮ್ ಪಾಠಾಕ್, ಜನೌಷಧ ಕೇಂದ್ರದ ವೈದ್ಯೆ ಡಾ.ಸಿಂದು, ಮುಖಂಡರಾದ ವಿಜಯ್ ಕುಮಾರ್, ಗೋಪಿನಾಥ, ವೆಂಕಟರಾಜು ಮತ್ತಿತ್ತರರು ಇದ್ದರು.

Ramesh Babu

Journalist

Recent Posts

ಮೋರಿ ಬಳಿ ತ್ಯಾಜ್ಯ ರಾಶಿ; ದುರ್ವಾಸನೆ, ಸೊಳ್ಳೆ ಕಾಟಕ್ಕೆ ವಿನಾಯಕನಗರ ನಿವಾಸಿಗಳ ಪರದಾಟ

ದೊಡ್ಡಬಳ್ಳಾಪುರ: ನಗರದ ವಿನಾಯಕನಗರದ ಸರ್ಕಾರಿ ಪ್ರಾಥಮಿಕ ಶಾಲೆ ಸಮೀಪದಲ್ಲಿರುವ ರಾಜಕಾಲುವೆಗೆ ಅಡ್ಡಲಾಗಿ ನಿರ್ಮಿಸಿರುವ ಮೋರಿ ಬಳಿ ತ್ಯಾಜ್ಯ ರಾಶಿ ಬಿದ್ದಿದ್ದು,…

51 minutes ago

ನೀರಾವರಿ ಯೋಜನೆಗಳ ಕಾಮಗಾರಿ ವಿಳಂಬ ಸಹಿಸುವುದಿಲ್ಲ- ಸಚಿವ ಎನ್ ಚಲುವರಾಯಸ್ವಾಮಿ

ರಾಜ್ಯದ ನೀರಾವರಿ ಯೋಜನೆಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ ರೈತರಿಗೆ ಯೋಜನೆಗಳ ಸಂಪೂರ್ಣ ಪ್ರಯೋಜನ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚಿನ ಬದ್ಧತೆಯಿಂದ…

4 hours ago

ಇಂದು (ಸೆ.8) ದೊಡ್ಡಬಳ್ಳಾಪುರದ ಹಲವೆಡೆ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರ ವ್ಯಾಪ್ತಿಯಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 8ರಂದು ನಗರದ ಹಲವು ಪ್ರದೇಶಗಳಲ್ಲಿ ಬೆಳಿಗ್ಗೆ 10ರಿಂದ ಸಂಜೆ…

4 hours ago

ಶ್ರಾವಣ ಮಾಸದ ಕೊನೆಯ ಸೋಮವಾರ: ದಿನ್ನೆ ಬಯಲು ಬಸವಣ್ಣ ದೇವಾಲಯದಲ್ಲಿ ಹೂವಿನ ಆರತಿ ಸೇವೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ಎಸ್.ಎಂ.ಗೊಲ್ಲಹಳ್ಳಿ ಗ್ರಾಮದ ದಿನ್ನೆ ಬಯಲು ಬಸವಣ್ಣ ದೇವಾಲಯದಲ್ಲಿ ಶ್ರಾವಣ ಮಾಸದ ಕೊನೆಯ ಸೋಮವಾರದ ಅಂಗವಾಗಿ ವಿಶೇಷ ಪೂಜೆ…

17 hours ago

ಅಗ್ನಿ ಅವಘಡದ ವೇಳೆ ತುರ್ತು ಕ್ರಮಗಳ ಕುರಿತು ಅಣಕು ಪ್ರದರ್ಶನ: ಯುವ ಆಪ್ತಮಿತ್ರ ತರಬೇತಿ ಶಿಬಿರದಲ್ಲಿ ರೋವರ್ಸ್–ರೇಂಜರ್ಸ್‌ಗೆ ಜಾಗೃತಿ

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಗಳ ವತಿಯಿಂದ ಹಮ್ಮಿಕೊಂಡಿರುವ ‘ಯುವ ಆಪ್ತಮಿತ್ರ’ ತರಬೇತಿ ಶಿಬಿರದ ಅಂಗವಾಗಿ ನಗರದ…

20 hours ago

ಘಾಟಿ ಸುಬ್ರಹ್ಮಣ್ಯ ತೇರಿನ ಬೀದಿಯಲ್ಲಿದ್ದ ಪೂಜಾ ಸಾಮಗ್ರಿ ಅಂಗಡಿಗಳ ತೆರವು

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದಲ್ಲಿರುವ ತೇರಿನ ಬೀದಿಯ ಇಕ್ಕೆಲಗಳಲ್ಲಿ ಇಟ್ಟುಕೊಂಡಿದ್ದ ಪೂಜಾ ಸಾಮಗ್ರಿ ಅಂಗಡಿಗಳನ್ನು…

1 day ago