ದೇಶದ ಶ್ರೀಸಾಮಾನ್ಯರಿಗೆ ಕೈಗೆಟಕುವ ದರದಲ್ಲಿ ಗುಣಮಟ್ಟದ ಆರೋಗ್ಯ ಸೇವೆಗಳು, ಔಷಧ, ಶಸ್ತ್ರಚಿಕಿತ್ಸಾ ಉಪಕರಣಗಳು ಲಭ್ಯವಾಗಿಸಬೇಕು ಎಂಬ ಉದ್ದೇಶದಿಂದ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿ ಯೋಜನೆಯನ್ನು (ಪಿಎಂಬಿಜೆಪಿ) ಜಾರಿಗೊಳಿಸಲಾಗಿದೆ ಎಂದು ಶಾಸಕ ಧೀರಜ್ ಮುನಿರಾಜು ತಿಳಿಸಿದರು.
ನಗರಸಭೆ ರಸ್ತೆಯಲ್ಲಿರುವ ಶ್ರೀ ರಾಮೇಗೌಡ ಸಹಕಾರ ಭವನದ ಭಾರತೀಯ ಜನ ಔಷಧಿ ಕೇಂದ್ರ ಬಳಿ ಬುಧವಾರ ಹಮ್ಮಿಕೊಂಡಿದ್ದ ಜನೌಷಧ ಸಪ್ತಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜನೌಷಧಿ ಕೇಂದ್ರಗಳಿಂದ ಜನಸಾಮಾನ್ಯರಿಗೆ ದೊಡ್ಡ ಪ್ರಮಾಣದಲ್ಲಿ ಹಣ ಉಳಿತಾಯವಾಗುತ್ತಿದೆ. ಜನೌಷಧಿಯ ದರ ಶೇ 10ರಿಂದ ಶೇ.90ರಷ್ಟು ಕಡಿಮೆಯಾಗಿದೆ. ನಮ್ಮ ನಗರದ ಕೇಂದ್ರಕ್ಕೆ ರಾಷ್ಟ್ರೀಯ ಪ್ರಶಸ್ತಿ ಸಂದಿರುವುದು ಹೆಮ್ಮೆಯ ವಿಚಾರವಾಗಿದೆ ಎಂದರು.
ಸರ್ಕಾರಿ ಆಸ್ಪತ್ರೆಗಳ ಆವರಣಗಳಿಂದ ಜನೌಷಧ ಕೇಂದ್ರಗಳನ್ನ ತೆರವು ಮಾಡಲು ಕಾಂಗ್ರೆಸ್ ಸರ್ಕಾರ ಮುಂದಾಗಿದ್ದ ವೇಳೆ ಬಿಜೆಪಿ ಹೋರಾಟ ಮಾಡಿ ಉಳಿಸಿಕೊಂಡಿದೆ ಎಂದರು.
ಜನೌಷಧ ಕೇಂದ್ರದ ದಕ್ಷಿಣ ಕರ್ನಾಟಕದ ನೋಡಲ್ ಅಧಿಕಾರಿ ಅನುಪಮ್ ಪಾಠಾಕ್ ಮಾತನಾಡಿ, ಸಾಮಾನ್ಯ ಔಷಧ ಅಂಗಡಿಗಳಲ್ಲಿ ಸಿಗುವ ಔಷಧಕ್ಕೂ ಜನೌಷಧ ಕೇಂದ್ರಗಳಲ್ಲಿ ಸಿಗುವ ಔಷಧಗಳಿಗೂ ಯಾವುದೇ ವ್ಯತ್ಯಾಸವಿಲ್ಲ. ಸಾಮಾನ್ಯ ಔಷಧ ಅಂಗಡಿಗಳಲ್ಲಿ ಕಂಪನಿಗಳ ಬ್ರಾಂಡ್ನಲ್ಲಿ ಔಷಧವನ್ನು ಮಾರಾಟ ಮಾಡಲಾಗುತ್ತಿದೆ. ಆದರೆ ಜನೌಷಧ ಅಂಗಡಿಗಳಲ್ಲಿ ಮೂಲ ರಾಸಾಯನಿಕದ ಹೆಸರಿನಲ್ಲಿಯೇ ಔಷಧ ಮಾರಾಟ ಮಾಡಲಾಗುತ್ತಿದೆ ಎಂದರು.
“ಜನೌಷಧಿ ಸಪ್ತಾಹದ” ಅಂಗವಾಗಿ ದೇಶಾದ್ಯಂತ ಆರೋಗ್ಯ ಶಿಬಿರಗಳನ್ನು ಏರ್ಪಡಿಸಲಾಗಿದೆ. ಉಚಿತ ಆರೋಗ್ಯ ತಪಾಸಣೆ, ಉಚಿತ ಔಷಧ ವಿತರಣೆ ಸೇರಿದಂತೆ ಜನೌಷಧಿ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಒಂದು ವಾರಕಾಲ ಬೇರೆ ಬೇರೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಈ ವೇಳೆ ಜನೌಷಧ ಕೇಂದ್ರದ ದಕ್ಷಿಣ ಕರ್ನಾಟಕದ ನೋಡಲ್ ಅಧಿಕಾರಿ ಅನುಪಮ್ ಪಾಠಾಕ್, ಜನೌಷಧ ಕೇಂದ್ರದ ವೈದ್ಯೆ ಡಾ.ಸಿಂದು, ಮುಖಂಡರಾದ ವಿಜಯ್ ಕುಮಾರ್, ಗೋಪಿನಾಥ, ವೆಂಕಟರಾಜು ಮತ್ತಿತ್ತರರು ಇದ್ದರು.
ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್ಎಸ್ಎಸ್ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…
ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…