ದೇಶದ ಶ್ರೀಸಾಮಾನ್ಯರಿಗೆ ಕೈಗೆಟಕುವ ದರದಲ್ಲಿ ಗುಣಮಟ್ಟದ ಆರೋಗ್ಯ ಸೇವೆಗಳು, ಔಷಧ, ಶಸ್ತ್ರಚಿಕಿತ್ಸಾ ಉಪಕರಣಗಳು ಲಭ್ಯವಾಗಿಸಬೇಕು ಎಂಬ ಉದ್ದೇಶದಿಂದ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿ ಯೋಜನೆಯನ್ನು (ಪಿಎಂಬಿಜೆಪಿ) ಜಾರಿಗೊಳಿಸಲಾಗಿದೆ ಎಂದು ಶಾಸಕ ಧೀರಜ್ ಮುನಿರಾಜು ತಿಳಿಸಿದರು.
ನಗರಸಭೆ ರಸ್ತೆಯಲ್ಲಿರುವ ಶ್ರೀ ರಾಮೇಗೌಡ ಸಹಕಾರ ಭವನದ ಭಾರತೀಯ ಜನ ಔಷಧಿ ಕೇಂದ್ರ ಬಳಿ ಬುಧವಾರ ಹಮ್ಮಿಕೊಂಡಿದ್ದ ಜನೌಷಧ ಸಪ್ತಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜನೌಷಧಿ ಕೇಂದ್ರಗಳಿಂದ ಜನಸಾಮಾನ್ಯರಿಗೆ ದೊಡ್ಡ ಪ್ರಮಾಣದಲ್ಲಿ ಹಣ ಉಳಿತಾಯವಾಗುತ್ತಿದೆ. ಜನೌಷಧಿಯ ದರ ಶೇ 10ರಿಂದ ಶೇ.90ರಷ್ಟು ಕಡಿಮೆಯಾಗಿದೆ. ನಮ್ಮ ನಗರದ ಕೇಂದ್ರಕ್ಕೆ ರಾಷ್ಟ್ರೀಯ ಪ್ರಶಸ್ತಿ ಸಂದಿರುವುದು ಹೆಮ್ಮೆಯ ವಿಚಾರವಾಗಿದೆ ಎಂದರು.
ಸರ್ಕಾರಿ ಆಸ್ಪತ್ರೆಗಳ ಆವರಣಗಳಿಂದ ಜನೌಷಧ ಕೇಂದ್ರಗಳನ್ನ ತೆರವು ಮಾಡಲು ಕಾಂಗ್ರೆಸ್ ಸರ್ಕಾರ ಮುಂದಾಗಿದ್ದ ವೇಳೆ ಬಿಜೆಪಿ ಹೋರಾಟ ಮಾಡಿ ಉಳಿಸಿಕೊಂಡಿದೆ ಎಂದರು.
ಜನೌಷಧ ಕೇಂದ್ರದ ದಕ್ಷಿಣ ಕರ್ನಾಟಕದ ನೋಡಲ್ ಅಧಿಕಾರಿ ಅನುಪಮ್ ಪಾಠಾಕ್ ಮಾತನಾಡಿ, ಸಾಮಾನ್ಯ ಔಷಧ ಅಂಗಡಿಗಳಲ್ಲಿ ಸಿಗುವ ಔಷಧಕ್ಕೂ ಜನೌಷಧ ಕೇಂದ್ರಗಳಲ್ಲಿ ಸಿಗುವ ಔಷಧಗಳಿಗೂ ಯಾವುದೇ ವ್ಯತ್ಯಾಸವಿಲ್ಲ. ಸಾಮಾನ್ಯ ಔಷಧ ಅಂಗಡಿಗಳಲ್ಲಿ ಕಂಪನಿಗಳ ಬ್ರಾಂಡ್ನಲ್ಲಿ ಔಷಧವನ್ನು ಮಾರಾಟ ಮಾಡಲಾಗುತ್ತಿದೆ. ಆದರೆ ಜನೌಷಧ ಅಂಗಡಿಗಳಲ್ಲಿ ಮೂಲ ರಾಸಾಯನಿಕದ ಹೆಸರಿನಲ್ಲಿಯೇ ಔಷಧ ಮಾರಾಟ ಮಾಡಲಾಗುತ್ತಿದೆ ಎಂದರು.
“ಜನೌಷಧಿ ಸಪ್ತಾಹದ” ಅಂಗವಾಗಿ ದೇಶಾದ್ಯಂತ ಆರೋಗ್ಯ ಶಿಬಿರಗಳನ್ನು ಏರ್ಪಡಿಸಲಾಗಿದೆ. ಉಚಿತ ಆರೋಗ್ಯ ತಪಾಸಣೆ, ಉಚಿತ ಔಷಧ ವಿತರಣೆ ಸೇರಿದಂತೆ ಜನೌಷಧಿ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಒಂದು ವಾರಕಾಲ ಬೇರೆ ಬೇರೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಈ ವೇಳೆ ಜನೌಷಧ ಕೇಂದ್ರದ ದಕ್ಷಿಣ ಕರ್ನಾಟಕದ ನೋಡಲ್ ಅಧಿಕಾರಿ ಅನುಪಮ್ ಪಾಠಾಕ್, ಜನೌಷಧ ಕೇಂದ್ರದ ವೈದ್ಯೆ ಡಾ.ಸಿಂದು, ಮುಖಂಡರಾದ ವಿಜಯ್ ಕುಮಾರ್, ಗೋಪಿನಾಥ, ವೆಂಕಟರಾಜು ಮತ್ತಿತ್ತರರು ಇದ್ದರು.
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…