ಜನ-ಜಾನುವಾರುಗಳಿಗೆ ಕುಡಿಯುವ ನೀರು ಪೂರೈಕೆ ಮಾಡಿ- ಶಾಸಕ ಧೀರಜ್ ಮುನಿರಾಜ್ ಸೂಚನೆ

ಬೇಸಿಗೆ ಕಾಲ‌ ಆರಂಭವಾಗಿರುವುದರಿಂದ ತಾಲೂಕಿನಲ್ಲಿ ಬರಗಾಲ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆ ಜನ-ಜಾನುವಾರುಗಳಿಗೆ ಕುಡಿಯುವ ನೀರು, ಆಹಾರ, ಮೇವು ಪೂರೈಕೆ, ಆರೋಗ್ಯ ರಕ್ಷಣೆಗೆ ಅಧಿಕಾರಿಗಳು ಶೀಘ್ರವಾಗಿ ಕ್ರಮ ವಹಿಸಬೇಕು ಎಂದು ಶಾಸಕ ಧೀರಜ್ ಮುನಿರಾಜು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ  ಮಂಗಳವಾರ ನಡೆದ ತಾಲೂಕು ಮಟ್ಟದ ತ್ರೈಮಾಸಿಕ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಸ್ತುತ ವರ್ಷ ಜಿಲ್ಲೆಯಾದ್ಯಂತ ಬರಗಾಲ ಎದುರಾಗಿದ್ದು ಜನ ಜಾನುವಾರುಗಳಿಗೆ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಸಮಸ್ಯೆ ಎದುರಾಗಬಾರದು, ಈ ನಿಟ್ಟಿನಿಲ್ಲಿ ಮುಂಜಾಗ್ರತ ಕ್ರಮವಹಿಸಬೇಕು. ಜಲ ಜೀವನ್ ಮಿಷನ್ ಯೋಜನೆಯಡಿ ಕೊರೆದಿರುವ ಕೊಳವೆಬಾವಿಗಳಿಗೆ ತಕ್ಷಣವೇ ವಿದ್ಯುತ್ ಸಂಪರ್ಕ, ಮೋಟಾರ್ ಪಂಪ್ ಅಳವಡಿಸಿ ನೀರು ಪೂರೈಕೆ ಮಾಡಬೇಕು‌. ಖಾಸಗಿ ಕೊಳವೆಬಾವಿ ಹಾಗೂ ನೀರಿನ ಟ್ಯಾಂಕರ್ ಗಳನ್ನು ಅತಿ ಅವಶ್ಯಕತೆ ಇದ್ದಾಗ ಮಾತ್ರ ಬಳಸಿಕೊಳ್ಳಿ. ತಾಲೂಕಿನ ಯಾವುದೇ ವಾರ್ಡ್, ಗ್ರಾಮಾಂತರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗದಂತೆ, ಜಾನುವಾರುಗಳಿಗೆ ಮೇವು ಸಮಸ್ಯೆ ಆಗದಂತೆ ನೋಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕೃಷಿ, ತೋಟಗಾರಿಕೆ ಬೆಳೆಗಳಿಗೆ ಬೆಳೆ ವಿಮೆ ಮಾಡಿಸಿ, ಬೆಳೆ ಪರಿಹಾರವನ್ನು ಅರ್ಹ ರೈತರಿಗೆ ತಲುಪಿಸಬೇಕು. ಬೆಳೆ ವಿಮೆ ಯೋಜನೆ ಅಡಿ ನೋಂದಾಯಿತ ರೈತರಿಗೆ ಪ್ರೋತ್ಸಾಹ ನೀಡಿ. ರೇಷ್ಮೆ ಬೆಳೆಯನ್ನು ವಿಮಾ ಯೋಜನೆಗೆ ಸೇರಿಸಲು ಕ್ರಮ ವಹಿಸಲಾಗುವುದು ಎಂದರು.

ತಾಲೂಕಿನ ಎಲ್ಲಾ ಸರ್ಕಾರಿ ಶಾಲೆಗಳ ಜಾಗಕ್ಕೆ ಸೂಕ್ತ ಬಂದೋಬಸ್ತ್ ಮಾಡಬೇಕಿದ್ದು, ಒಂದು ತಿಂಗಳ ಒಳಗಾಗಿ ಸರ್ವೇ ಕಾರ್ಯ ನಡೆಸಿ, ಒತ್ತುವರಿ ಆಗಿದ್ದಲ್ಲಿ ತೆರವುಗೊಳಿಸಿ ಕಲ್ಲು ಹಾಕಿಸಿ ಎಂದರು. ಜೊತೆಗೆ ನಗರ ಸಭೆ ವತಿಯಿಂದ ಶಾಲೆಗಳ ಜಾಗದ ಇ-ಖಾತೆ ಮಾಡಿಸಿ ಶಿಕ್ಷಣ ಇಲಾಖೆಗೆ ಹಸ್ತಾಂತರಿಸಿ. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಬರಲು ಅಗತ್ಯ ಕ್ರಮ ವಹಿಸಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.

ಚುನಾವಣೆ ಸಮಯದಲ್ಲಿ ಅಕ್ರಮ ಮದ್ಯ ಮಾರಾಟ ಬಂದ್ ಆಗಬೇಕು. ಅಕ್ರಮ ಮದ್ಯ ಮಾರಾಟ ತಡೆಗಟ್ಟಲು ಸೂಕ್ತ ಕ್ರಮವಹಿಸಬೇಕು. ಕಾನೂನು ಮೀರಿ ವ್ಯಾಪಾರ ನಡೆಸುವ ಬಾರ್‌ಗಳಿಗೆ ನೋಟಿಸ್ ನೀಡಿ ಕಾನೂನು ಕ್ರಮಕ್ಕೆ ಮುಂದಾಗಬೇಕು ಎಂದು ಅಬಕಾರಿ ಇಲಾಖೆಯ ಅಧಿಕಾರಿಗೆ ಸೂಚಿಸಿದರು.

ತಾಲೂಕಿನ ತಾಯಿ ಮಗು ಆಸ್ಪತ್ರೆಯ ನಿರ್ವಹಣೆ ಬಗ್ಗೆ ಶಾಸಕರು ಅಸಮಾಧನ ವ್ಯಕ್ತಪಡಸಿ, ಗುತ್ತಿಗೆಪಡೆದಿರುವವರ ಜೊತೆ ಜಂಟಿ ಸಭೆಯನ್ನು ಆಯೋಜಿಸಲು ಆರೋಗ್ಯ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್, ತಾಪಂ ಕಾರ್ಯನಿರ್ವಾಹಕಾಧಿಕಾರಿ ಎನ್. ಮುನಿರಾಜು, ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಎಂಎಸ್ ಜಿಪಿ ಘಟಕಕ್ಕೆ ಬಂದ ಹೆಚ್ಚುವರಿ ಕಸದ ಲಾರಿಗಳು: ಶಾಸಕ ಧೀರಜ್ ಮುನಿರಾಜು ನೇತೃತ್ವದಲ್ಲಿ ಲಾರಿಗಳಿಗೆ ತಡೆ

ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…

9 minutes ago

40 ಸಾವಿರ ಲಂಚ ಪಡೆಯುವಾಗ ವಿಶೇಷ ಭೂಸ್ವಾಧೀನಾಧಿಕಾರಿ ಸೇರಿದಂತೆ ಇಬ್ಬರು ಲೋಕಾಯುಕ್ತ ಬಲೆಗೆ.!

ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…

47 minutes ago

Accident Update: ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ‌ ಪ್ರಕರಣ: ಬೈಕ್ ಸವಾರ ಸಾವು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…

1 hour ago

ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…

1 hour ago

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿ ಪ್ರಕಟ

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…

4 hours ago

ಗೀತಂ ಯೂನಿವರ್ಸಿಟಿಯಲ್ಲಿ ಯುವತಿ ಆತ್ಮಹತ್ಯೆ ಪ್ರಕರಣ: ಸ್ಥಳಕ್ಕೆ ಎಸ್ಪಿ‌ ಚಂದ್ರಕಾಂತ್ ಭೇಟಿ, ಪರಿಶೀಲನೆ, ಪ್ರತಿಕ್ರಿಯೆ

ಆಕೆ ತಂದೆ ತಾಯಿಗೆ ಇದ್ದ ಏಕೈಕ‌ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ‌. ಮಗಳು ಚೆನ್ನಾಗಿ…

5 hours ago