ಜನ-ಜಾನುವಾರುಗಳಿಗೆ ಕುಡಿಯುವ ನೀರು ಪೂರೈಕೆ ಮಾಡಿ- ಶಾಸಕ ಧೀರಜ್ ಮುನಿರಾಜ್ ಸೂಚನೆ

ಬೇಸಿಗೆ ಕಾಲ‌ ಆರಂಭವಾಗಿರುವುದರಿಂದ ತಾಲೂಕಿನಲ್ಲಿ ಬರಗಾಲ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆ ಜನ-ಜಾನುವಾರುಗಳಿಗೆ ಕುಡಿಯುವ ನೀರು, ಆಹಾರ, ಮೇವು ಪೂರೈಕೆ, ಆರೋಗ್ಯ ರಕ್ಷಣೆಗೆ ಅಧಿಕಾರಿಗಳು ಶೀಘ್ರವಾಗಿ ಕ್ರಮ ವಹಿಸಬೇಕು ಎಂದು ಶಾಸಕ ಧೀರಜ್ ಮುನಿರಾಜು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ  ಮಂಗಳವಾರ ನಡೆದ ತಾಲೂಕು ಮಟ್ಟದ ತ್ರೈಮಾಸಿಕ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಸ್ತುತ ವರ್ಷ ಜಿಲ್ಲೆಯಾದ್ಯಂತ ಬರಗಾಲ ಎದುರಾಗಿದ್ದು ಜನ ಜಾನುವಾರುಗಳಿಗೆ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಸಮಸ್ಯೆ ಎದುರಾಗಬಾರದು, ಈ ನಿಟ್ಟಿನಿಲ್ಲಿ ಮುಂಜಾಗ್ರತ ಕ್ರಮವಹಿಸಬೇಕು. ಜಲ ಜೀವನ್ ಮಿಷನ್ ಯೋಜನೆಯಡಿ ಕೊರೆದಿರುವ ಕೊಳವೆಬಾವಿಗಳಿಗೆ ತಕ್ಷಣವೇ ವಿದ್ಯುತ್ ಸಂಪರ್ಕ, ಮೋಟಾರ್ ಪಂಪ್ ಅಳವಡಿಸಿ ನೀರು ಪೂರೈಕೆ ಮಾಡಬೇಕು‌. ಖಾಸಗಿ ಕೊಳವೆಬಾವಿ ಹಾಗೂ ನೀರಿನ ಟ್ಯಾಂಕರ್ ಗಳನ್ನು ಅತಿ ಅವಶ್ಯಕತೆ ಇದ್ದಾಗ ಮಾತ್ರ ಬಳಸಿಕೊಳ್ಳಿ. ತಾಲೂಕಿನ ಯಾವುದೇ ವಾರ್ಡ್, ಗ್ರಾಮಾಂತರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗದಂತೆ, ಜಾನುವಾರುಗಳಿಗೆ ಮೇವು ಸಮಸ್ಯೆ ಆಗದಂತೆ ನೋಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕೃಷಿ, ತೋಟಗಾರಿಕೆ ಬೆಳೆಗಳಿಗೆ ಬೆಳೆ ವಿಮೆ ಮಾಡಿಸಿ, ಬೆಳೆ ಪರಿಹಾರವನ್ನು ಅರ್ಹ ರೈತರಿಗೆ ತಲುಪಿಸಬೇಕು. ಬೆಳೆ ವಿಮೆ ಯೋಜನೆ ಅಡಿ ನೋಂದಾಯಿತ ರೈತರಿಗೆ ಪ್ರೋತ್ಸಾಹ ನೀಡಿ. ರೇಷ್ಮೆ ಬೆಳೆಯನ್ನು ವಿಮಾ ಯೋಜನೆಗೆ ಸೇರಿಸಲು ಕ್ರಮ ವಹಿಸಲಾಗುವುದು ಎಂದರು.

ತಾಲೂಕಿನ ಎಲ್ಲಾ ಸರ್ಕಾರಿ ಶಾಲೆಗಳ ಜಾಗಕ್ಕೆ ಸೂಕ್ತ ಬಂದೋಬಸ್ತ್ ಮಾಡಬೇಕಿದ್ದು, ಒಂದು ತಿಂಗಳ ಒಳಗಾಗಿ ಸರ್ವೇ ಕಾರ್ಯ ನಡೆಸಿ, ಒತ್ತುವರಿ ಆಗಿದ್ದಲ್ಲಿ ತೆರವುಗೊಳಿಸಿ ಕಲ್ಲು ಹಾಕಿಸಿ ಎಂದರು. ಜೊತೆಗೆ ನಗರ ಸಭೆ ವತಿಯಿಂದ ಶಾಲೆಗಳ ಜಾಗದ ಇ-ಖಾತೆ ಮಾಡಿಸಿ ಶಿಕ್ಷಣ ಇಲಾಖೆಗೆ ಹಸ್ತಾಂತರಿಸಿ. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಬರಲು ಅಗತ್ಯ ಕ್ರಮ ವಹಿಸಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.

ಚುನಾವಣೆ ಸಮಯದಲ್ಲಿ ಅಕ್ರಮ ಮದ್ಯ ಮಾರಾಟ ಬಂದ್ ಆಗಬೇಕು. ಅಕ್ರಮ ಮದ್ಯ ಮಾರಾಟ ತಡೆಗಟ್ಟಲು ಸೂಕ್ತ ಕ್ರಮವಹಿಸಬೇಕು. ಕಾನೂನು ಮೀರಿ ವ್ಯಾಪಾರ ನಡೆಸುವ ಬಾರ್‌ಗಳಿಗೆ ನೋಟಿಸ್ ನೀಡಿ ಕಾನೂನು ಕ್ರಮಕ್ಕೆ ಮುಂದಾಗಬೇಕು ಎಂದು ಅಬಕಾರಿ ಇಲಾಖೆಯ ಅಧಿಕಾರಿಗೆ ಸೂಚಿಸಿದರು.

ತಾಲೂಕಿನ ತಾಯಿ ಮಗು ಆಸ್ಪತ್ರೆಯ ನಿರ್ವಹಣೆ ಬಗ್ಗೆ ಶಾಸಕರು ಅಸಮಾಧನ ವ್ಯಕ್ತಪಡಸಿ, ಗುತ್ತಿಗೆಪಡೆದಿರುವವರ ಜೊತೆ ಜಂಟಿ ಸಭೆಯನ್ನು ಆಯೋಜಿಸಲು ಆರೋಗ್ಯ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್, ತಾಪಂ ಕಾರ್ಯನಿರ್ವಾಹಕಾಧಿಕಾರಿ ಎನ್. ಮುನಿರಾಜು, ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

6 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

17 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

18 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

18 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

20 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

23 hours ago