ಜನ ವಸತಿ ಪ್ರದೇಶದಲ್ಲಿ ರಾತ್ರೋರಾತ್ರಿ ತಲೆಎತ್ತಿದ 5ಜಿ ನೆಟ್ ವರ್ಕ್ ಟವರ್: ಅನಾರೋಗ್ಯಕ್ಕೆ ತುತ್ತಾಗುವ ಭೀತಿಯಲ್ಲಿ ನಿವಾಸಿಗಳು: ಕೂಡಲೇ ಈ ಟವರ್ ನ್ನು ಬೇರೆಡೆಗೆ ಸ್ಥಳಾಂತರಿಸಲು ಆಗ್ರಹ

ಜನ ವಸತಿ ಪ್ರದೇಶದಲ್ಲಿ 5ಜಿ ನೆಟ್ ವರ್ಕ್ ಟವರ್‌ ಸದ್ದಿಲ್ಲದೇ ರಾತ್ರೋರಾತ್ರಿ ತಲೆಎತ್ತುತ್ತಿದೆ. ಇದನ್ನ ಕಂಡ ಸುತ್ತಮುತ್ತಲಿನ ಮನೆಗಳ ನಿವಾಸಿಗಳು ಭಯಭೀತರಾಗಿದ್ದಾರೆ. 5ಜಿ ತರಂಗಾಂತರದಿಂದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಭವಿಷ್ಯದಲ್ಲಿ ಬೀರಬಹುದು ಎಂಬ ಆತಂಕದಲ್ಲಿದ್ದಾರೆ. ತಮ್ಮ ಆರೋಗ್ಯದ ಹಿತದೃಷ್ಟಿಯಿಂದ ಎಚ್ಚೆತ್ತ ಸ್ಥಳೀಯರು ಜನ ವಸತಿ ಪ್ರದೇಶದಲ್ಲಿ 5ಜಿ ನೆಟ್ ವರ್ಕ್ ಟವರ್ ನಿರ್ಮಾಣಕ್ಕೆ ವಿರೋಧ ಮಾಡುತ್ತಿದ್ದರೂ ಟವರ್ ದಿನದಿನಕ್ಕೆ ಮೇಲಕ್ಕೆ ಹೋಗುತ್ತಿದೆ.

ದೊಡ್ಡಬಳ್ಳಾಪುರ ನಗರದಂಚಿನ ಮಾದಗೊಂಡನಹಳ್ಳಿ ರಸ್ತೆಯ ಚಂದ್ರಮೌಳೇಶ್ವರ ಲೇಔಟ್ ನಲ್ಲಿ 5ಜಿ ಟವರ್ ನಿರ್ಮಾಣವಾಗುತ್ತಿದೆ, ಸ್ಥಳೀಯ ನಿವಾಸಿಗಳಿಗೆ ಸಣ್ಣದೊಂದು ಸುಳಿವು ನೀಡದೆ ರಾತ್ರೋರಾತ್ರಿ ಟವರ್ ನಿರ್ಮಾಣಕ್ಕೆ ಮುಂದಾಗಿದ್ದಾರೆ, ಗೋಪಾಲ್ ಎಂಬುವರು ತಮ್ಮ ತೋಟದಲ್ಲಿ ಟವರ್ ನಿರ್ಮಾಣಕ್ಕೆ ಅವಕಾಶ ನೀಡಿದ್ದಾರೆ, ಟವರ್ ನಿರ್ಮಾಣದ ಬಗ್ಗೆ ಗೋಪಾಲ್ ರವರನ್ನ ಕೇಳಿದರೆ, ನನ್ನ ಜಾಗದಲ್ಲಿ ನಾನು ಏನ್ ಬೇಕಾದರು ಮಾಡಿಕೊಳ್ಳುವೆ ಎಂಬುವ ರೀತಿಯಲ್ಲಿ ಉಡಾಫೆಯ ಮಾತನ್ನಾಡಿದ್ದಾರೆಂಬುದು ಸ್ಥಳೀಯರ ಆರೋಪ,

ಇಲ್ಲಿ ಯಾವುದೇ ರೀತಿ ನೆಟ್ ವರ್ಕ್ ಸಮಸ್ಯೆ ಇಲ್ಲ, ಆದರೂ 5ಜಿ ಟವರ್ ನಿರ್ಮಾಣ ಮಾಡಲಾಗುತ್ತಿದೆ ಎಂದು ಸ್ಥಳೀಯರಾದ ಸೌಮ್ಯ ತಮ್ಮ ಅಕ್ರೋಶ ವ್ಯಕ್ತಪಡಿಸಿದರು.

ಗೋಪಾಲ್ ರವರು ರಾಜಕಾಲುವೆ ಜಾಗವನ್ನ ಒತ್ತುವರಿ ಮಾಡಿದ್ದಾರೆ, ಅದೇ ಜಾಗದಲ್ಲಿ ಟವರ್ ನಿರ್ಮಾಣಕ್ಕೆ ಅವಕಾಶ ನೀಡಿದ್ದಾರೆಂಬುದು ಸ್ಥಳೀಯರ ಆರೋಪ,  ಜನ ವಸತಿ ಪ್ರದೇಶದಲ್ಲಿ ಟವರ್ ನಿರ್ಮಾಣ ಕಾನೂನುಬಾಹಿರ, ಕೊಡಿಗೇಹಳ್ಳಿ ಗ್ರಾಮ ಪಂಚಾಯತಿ ಅಧಿಕಾರಿಗಳು ಸ್ಥಳೀಯರ ಒಪ್ಪಿಗೆ ಇಲ್ಲದೆ ಟವರ್ ನಿರ್ಮಾಣಕ್ಕೆ ಅನುಮತಿ ನೀಡಿದ್ದಾರೆ, ಮಕ್ಕಳ ಮತ್ತು ಗರ್ಭಿಣಿ ಮಹಿಳೆಯರ ಆರೋಗ್ಯದ ಮೇಲೆ ಹೈ ಬ್ರಾಂಡ್ ತರಂಗಾಂತರಗಳು ನೇರ ಪರಿಣಾಮ ಬಿರುತ್ತವೆ,

ಮಕ್ಕಳಲ್ಲಿ ಏಕಾಗ್ರತೆ, ನಿದ್ರಾ ಹೀನತೆ ಮೇಲೂ ಪರಿಣಾಮ ಬೀರಲಿದೆ. ಆದ್ದರಿಂದ ಕೂಡಲೇ ಈ ಟವರ್ ನ್ನು ಬೇರೆಡೆಗೆ ಸ್ಥಳಾಂತರಿಸಬೇಕು ಎಂದು ಸ್ಥಳೀಯರಾದ ಗುರುರಾಜ್ ಟವರ್ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದರು.

Ramesh Babu

Journalist

Recent Posts

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

4 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

19 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

1 day ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

1 day ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

1 day ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

2 days ago