ಜನ ವಸತಿ ಪ್ರದೇಶದಲ್ಲಿ ರಾತ್ರೋರಾತ್ರಿ ತಲೆಎತ್ತಿದ 5ಜಿ ನೆಟ್ ವರ್ಕ್ ಟವರ್: ಅನಾರೋಗ್ಯಕ್ಕೆ ತುತ್ತಾಗುವ ಭೀತಿಯಲ್ಲಿ ನಿವಾಸಿಗಳು: ಕೂಡಲೇ ಈ ಟವರ್ ನ್ನು ಬೇರೆಡೆಗೆ ಸ್ಥಳಾಂತರಿಸಲು ಆಗ್ರಹ

ಜನ ವಸತಿ ಪ್ರದೇಶದಲ್ಲಿ 5ಜಿ ನೆಟ್ ವರ್ಕ್ ಟವರ್‌ ಸದ್ದಿಲ್ಲದೇ ರಾತ್ರೋರಾತ್ರಿ ತಲೆಎತ್ತುತ್ತಿದೆ. ಇದನ್ನ ಕಂಡ ಸುತ್ತಮುತ್ತಲಿನ ಮನೆಗಳ ನಿವಾಸಿಗಳು ಭಯಭೀತರಾಗಿದ್ದಾರೆ. 5ಜಿ ತರಂಗಾಂತರದಿಂದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಭವಿಷ್ಯದಲ್ಲಿ ಬೀರಬಹುದು ಎಂಬ ಆತಂಕದಲ್ಲಿದ್ದಾರೆ. ತಮ್ಮ ಆರೋಗ್ಯದ ಹಿತದೃಷ್ಟಿಯಿಂದ ಎಚ್ಚೆತ್ತ ಸ್ಥಳೀಯರು ಜನ ವಸತಿ ಪ್ರದೇಶದಲ್ಲಿ 5ಜಿ ನೆಟ್ ವರ್ಕ್ ಟವರ್ ನಿರ್ಮಾಣಕ್ಕೆ ವಿರೋಧ ಮಾಡುತ್ತಿದ್ದರೂ ಟವರ್ ದಿನದಿನಕ್ಕೆ ಮೇಲಕ್ಕೆ ಹೋಗುತ್ತಿದೆ.

ದೊಡ್ಡಬಳ್ಳಾಪುರ ನಗರದಂಚಿನ ಮಾದಗೊಂಡನಹಳ್ಳಿ ರಸ್ತೆಯ ಚಂದ್ರಮೌಳೇಶ್ವರ ಲೇಔಟ್ ನಲ್ಲಿ 5ಜಿ ಟವರ್ ನಿರ್ಮಾಣವಾಗುತ್ತಿದೆ, ಸ್ಥಳೀಯ ನಿವಾಸಿಗಳಿಗೆ ಸಣ್ಣದೊಂದು ಸುಳಿವು ನೀಡದೆ ರಾತ್ರೋರಾತ್ರಿ ಟವರ್ ನಿರ್ಮಾಣಕ್ಕೆ ಮುಂದಾಗಿದ್ದಾರೆ, ಗೋಪಾಲ್ ಎಂಬುವರು ತಮ್ಮ ತೋಟದಲ್ಲಿ ಟವರ್ ನಿರ್ಮಾಣಕ್ಕೆ ಅವಕಾಶ ನೀಡಿದ್ದಾರೆ, ಟವರ್ ನಿರ್ಮಾಣದ ಬಗ್ಗೆ ಗೋಪಾಲ್ ರವರನ್ನ ಕೇಳಿದರೆ, ನನ್ನ ಜಾಗದಲ್ಲಿ ನಾನು ಏನ್ ಬೇಕಾದರು ಮಾಡಿಕೊಳ್ಳುವೆ ಎಂಬುವ ರೀತಿಯಲ್ಲಿ ಉಡಾಫೆಯ ಮಾತನ್ನಾಡಿದ್ದಾರೆಂಬುದು ಸ್ಥಳೀಯರ ಆರೋಪ,

ಇಲ್ಲಿ ಯಾವುದೇ ರೀತಿ ನೆಟ್ ವರ್ಕ್ ಸಮಸ್ಯೆ ಇಲ್ಲ, ಆದರೂ 5ಜಿ ಟವರ್ ನಿರ್ಮಾಣ ಮಾಡಲಾಗುತ್ತಿದೆ ಎಂದು ಸ್ಥಳೀಯರಾದ ಸೌಮ್ಯ ತಮ್ಮ ಅಕ್ರೋಶ ವ್ಯಕ್ತಪಡಿಸಿದರು.

ಗೋಪಾಲ್ ರವರು ರಾಜಕಾಲುವೆ ಜಾಗವನ್ನ ಒತ್ತುವರಿ ಮಾಡಿದ್ದಾರೆ, ಅದೇ ಜಾಗದಲ್ಲಿ ಟವರ್ ನಿರ್ಮಾಣಕ್ಕೆ ಅವಕಾಶ ನೀಡಿದ್ದಾರೆಂಬುದು ಸ್ಥಳೀಯರ ಆರೋಪ,  ಜನ ವಸತಿ ಪ್ರದೇಶದಲ್ಲಿ ಟವರ್ ನಿರ್ಮಾಣ ಕಾನೂನುಬಾಹಿರ, ಕೊಡಿಗೇಹಳ್ಳಿ ಗ್ರಾಮ ಪಂಚಾಯತಿ ಅಧಿಕಾರಿಗಳು ಸ್ಥಳೀಯರ ಒಪ್ಪಿಗೆ ಇಲ್ಲದೆ ಟವರ್ ನಿರ್ಮಾಣಕ್ಕೆ ಅನುಮತಿ ನೀಡಿದ್ದಾರೆ, ಮಕ್ಕಳ ಮತ್ತು ಗರ್ಭಿಣಿ ಮಹಿಳೆಯರ ಆರೋಗ್ಯದ ಮೇಲೆ ಹೈ ಬ್ರಾಂಡ್ ತರಂಗಾಂತರಗಳು ನೇರ ಪರಿಣಾಮ ಬಿರುತ್ತವೆ,

ಮಕ್ಕಳಲ್ಲಿ ಏಕಾಗ್ರತೆ, ನಿದ್ರಾ ಹೀನತೆ ಮೇಲೂ ಪರಿಣಾಮ ಬೀರಲಿದೆ. ಆದ್ದರಿಂದ ಕೂಡಲೇ ಈ ಟವರ್ ನ್ನು ಬೇರೆಡೆಗೆ ಸ್ಥಳಾಂತರಿಸಬೇಕು ಎಂದು ಸ್ಥಳೀಯರಾದ ಗುರುರಾಜ್ ಟವರ್ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದರು.

Ramesh Babu

Journalist

Recent Posts

ರಾಷ್ಟ್ರೀಯ ಪಂಚಾಯತ್ ರಾಜ್ ದಿನ ಆಚರಣೆ: ಅತಿ ಹೆಚ್ಚು ತೆರಿಗೆ ವಸೂಲಾತಿ ಮಾಡಿದ ಕಾಡನೂರು ಗ್ರಾ.ಪಂ ಗೆ ಬಹುಮಾನ ವಿತರಣೆ

ಗ್ರಾಮೀಣ ಪ್ರದೇಶದ ಜನರ ಆಶೋತ್ತರಗಳಿಗೆ ಧ್ವನಿಯಾಗಿ ಪಂಚಾಯತ್ ರಾಜ್ ಇಲಾಖೆಯು ಕೆಲಸ ನಿರ್ವಹಿಸುತ್ತಿದೆ. ಪಾರದರ್ಶಕವಾಗಿ ಸ್ಥಳೀಯ ಆಡಳಿತ ವ್ಯವಸ್ಥೆ ನಡೆಯುತ್ತಾ,…

7 seconds ago

ಜೆಡಿಎಸ್ ತಾಲೂಕು ಅಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ

ಜೆಡಿಎಸ್ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಹರೀಶ್ ಗೌಡ ಅವರನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರಿನಲ್ಲಿರುವ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ನಡೆದ ಜೆಡಿಎಸ್…

2 hours ago

ಇ-ಸ್ವತ್ತು ಅರ್ಜಿ ಸಲ್ಲಿಕೆಗೆ ಬಾಪೂಜಿ ಸೇವಾ ಕೇಂದ್ರ (ಗ್ರಾಮ ಒನ್), ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲೂ ಸೌಲಭ್ಯ

ನಾಗರಿಕರಿಗೆ ಇನ್ನಷ್ಟು ಹತ್ತಿರದಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಇ-ಆಡಳಿತ ಇಲಾಖೆಯ…

7 hours ago

Effektives Schreiben einer Facharbeit_ Ein Leitfaden

Das Schreiben einer Facharbeit stellt für viele Schüler und Studenten eine große Herausforderung dar. Der…

8 hours ago

ಡಾಕ್ಟರ್ ರಾಜ್ ಕುಮಾರ್ ಅವರಿಗೆ ಜನ್ಮದಿನದ ಶುಭಾಶಯಗಳು

ಏಪ್ರಿಲ್ ಧಮಾಕಾ....... ಕನ್ನಡ ಸಿನಿಮಾದ ಡಾಕ್ಟರ್ ರಾಜಕುಮಾರ್ ಏಪ್ರಿಲ್ 24, ಇಂಗ್ಲೀಷ್ ಸಾಹಿತ್ಯದ ವಿಲಿಯಂ ಶೇಕ್ಸ್ಪಿಯರ್ ಏಪ್ರಿಲ್ 23, ವಿಶ್ವ…

12 hours ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 11ನೇ ಸ್ಥಾನ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…

1 day ago