ಜನ ವಸತಿ ಪ್ರದೇಶದಲ್ಲಿ ರಾತ್ರೋರಾತ್ರಿ ತಲೆಎತ್ತಿದ 5ಜಿ ನೆಟ್ ವರ್ಕ್ ಟವರ್: ಅನಾರೋಗ್ಯಕ್ಕೆ ತುತ್ತಾಗುವ ಭೀತಿಯಲ್ಲಿ ನಿವಾಸಿಗಳು: ಕೂಡಲೇ ಈ ಟವರ್ ನ್ನು ಬೇರೆಡೆಗೆ ಸ್ಥಳಾಂತರಿಸಲು ಆಗ್ರಹ

ಜನ ವಸತಿ ಪ್ರದೇಶದಲ್ಲಿ 5ಜಿ ನೆಟ್ ವರ್ಕ್ ಟವರ್‌ ಸದ್ದಿಲ್ಲದೇ ರಾತ್ರೋರಾತ್ರಿ ತಲೆಎತ್ತುತ್ತಿದೆ. ಇದನ್ನ ಕಂಡ ಸುತ್ತಮುತ್ತಲಿನ ಮನೆಗಳ ನಿವಾಸಿಗಳು ಭಯಭೀತರಾಗಿದ್ದಾರೆ. 5ಜಿ ತರಂಗಾಂತರದಿಂದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಭವಿಷ್ಯದಲ್ಲಿ ಬೀರಬಹುದು ಎಂಬ ಆತಂಕದಲ್ಲಿದ್ದಾರೆ. ತಮ್ಮ ಆರೋಗ್ಯದ ಹಿತದೃಷ್ಟಿಯಿಂದ ಎಚ್ಚೆತ್ತ ಸ್ಥಳೀಯರು ಜನ ವಸತಿ ಪ್ರದೇಶದಲ್ಲಿ 5ಜಿ ನೆಟ್ ವರ್ಕ್ ಟವರ್ ನಿರ್ಮಾಣಕ್ಕೆ ವಿರೋಧ ಮಾಡುತ್ತಿದ್ದರೂ ಟವರ್ ದಿನದಿನಕ್ಕೆ ಮೇಲಕ್ಕೆ ಹೋಗುತ್ತಿದೆ.

ದೊಡ್ಡಬಳ್ಳಾಪುರ ನಗರದಂಚಿನ ಮಾದಗೊಂಡನಹಳ್ಳಿ ರಸ್ತೆಯ ಚಂದ್ರಮೌಳೇಶ್ವರ ಲೇಔಟ್ ನಲ್ಲಿ 5ಜಿ ಟವರ್ ನಿರ್ಮಾಣವಾಗುತ್ತಿದೆ, ಸ್ಥಳೀಯ ನಿವಾಸಿಗಳಿಗೆ ಸಣ್ಣದೊಂದು ಸುಳಿವು ನೀಡದೆ ರಾತ್ರೋರಾತ್ರಿ ಟವರ್ ನಿರ್ಮಾಣಕ್ಕೆ ಮುಂದಾಗಿದ್ದಾರೆ, ಗೋಪಾಲ್ ಎಂಬುವರು ತಮ್ಮ ತೋಟದಲ್ಲಿ ಟವರ್ ನಿರ್ಮಾಣಕ್ಕೆ ಅವಕಾಶ ನೀಡಿದ್ದಾರೆ, ಟವರ್ ನಿರ್ಮಾಣದ ಬಗ್ಗೆ ಗೋಪಾಲ್ ರವರನ್ನ ಕೇಳಿದರೆ, ನನ್ನ ಜಾಗದಲ್ಲಿ ನಾನು ಏನ್ ಬೇಕಾದರು ಮಾಡಿಕೊಳ್ಳುವೆ ಎಂಬುವ ರೀತಿಯಲ್ಲಿ ಉಡಾಫೆಯ ಮಾತನ್ನಾಡಿದ್ದಾರೆಂಬುದು ಸ್ಥಳೀಯರ ಆರೋಪ,

ಇಲ್ಲಿ ಯಾವುದೇ ರೀತಿ ನೆಟ್ ವರ್ಕ್ ಸಮಸ್ಯೆ ಇಲ್ಲ, ಆದರೂ 5ಜಿ ಟವರ್ ನಿರ್ಮಾಣ ಮಾಡಲಾಗುತ್ತಿದೆ ಎಂದು ಸ್ಥಳೀಯರಾದ ಸೌಮ್ಯ ತಮ್ಮ ಅಕ್ರೋಶ ವ್ಯಕ್ತಪಡಿಸಿದರು.

ಗೋಪಾಲ್ ರವರು ರಾಜಕಾಲುವೆ ಜಾಗವನ್ನ ಒತ್ತುವರಿ ಮಾಡಿದ್ದಾರೆ, ಅದೇ ಜಾಗದಲ್ಲಿ ಟವರ್ ನಿರ್ಮಾಣಕ್ಕೆ ಅವಕಾಶ ನೀಡಿದ್ದಾರೆಂಬುದು ಸ್ಥಳೀಯರ ಆರೋಪ,  ಜನ ವಸತಿ ಪ್ರದೇಶದಲ್ಲಿ ಟವರ್ ನಿರ್ಮಾಣ ಕಾನೂನುಬಾಹಿರ, ಕೊಡಿಗೇಹಳ್ಳಿ ಗ್ರಾಮ ಪಂಚಾಯತಿ ಅಧಿಕಾರಿಗಳು ಸ್ಥಳೀಯರ ಒಪ್ಪಿಗೆ ಇಲ್ಲದೆ ಟವರ್ ನಿರ್ಮಾಣಕ್ಕೆ ಅನುಮತಿ ನೀಡಿದ್ದಾರೆ, ಮಕ್ಕಳ ಮತ್ತು ಗರ್ಭಿಣಿ ಮಹಿಳೆಯರ ಆರೋಗ್ಯದ ಮೇಲೆ ಹೈ ಬ್ರಾಂಡ್ ತರಂಗಾಂತರಗಳು ನೇರ ಪರಿಣಾಮ ಬಿರುತ್ತವೆ,

ಮಕ್ಕಳಲ್ಲಿ ಏಕಾಗ್ರತೆ, ನಿದ್ರಾ ಹೀನತೆ ಮೇಲೂ ಪರಿಣಾಮ ಬೀರಲಿದೆ. ಆದ್ದರಿಂದ ಕೂಡಲೇ ಈ ಟವರ್ ನ್ನು ಬೇರೆಡೆಗೆ ಸ್ಥಳಾಂತರಿಸಬೇಕು ಎಂದು ಸ್ಥಳೀಯರಾದ ಗುರುರಾಜ್ ಟವರ್ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದರು.

Ramesh Babu

Journalist

Recent Posts

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

38 minutes ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

5 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

11 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

1 day ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

1 day ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

1 day ago