ಜನ ವಸತಿ ಪ್ರದೇಶದಲ್ಲಿ ರಾತ್ರೋರಾತ್ರಿ ತಲೆಎತ್ತಿದ 5ಜಿ ನೆಟ್ ವರ್ಕ್ ಟವರ್: ಅನಾರೋಗ್ಯಕ್ಕೆ ತುತ್ತಾಗುವ ಭೀತಿಯಲ್ಲಿ ನಿವಾಸಿಗಳು: ಕೂಡಲೇ ಈ ಟವರ್ ನ್ನು ಬೇರೆಡೆಗೆ ಸ್ಥಳಾಂತರಿಸಲು ಆಗ್ರಹ

ಜನ ವಸತಿ ಪ್ರದೇಶದಲ್ಲಿ 5ಜಿ ನೆಟ್ ವರ್ಕ್ ಟವರ್‌ ಸದ್ದಿಲ್ಲದೇ ರಾತ್ರೋರಾತ್ರಿ ತಲೆಎತ್ತುತ್ತಿದೆ. ಇದನ್ನ ಕಂಡ ಸುತ್ತಮುತ್ತಲಿನ ಮನೆಗಳ ನಿವಾಸಿಗಳು ಭಯಭೀತರಾಗಿದ್ದಾರೆ. 5ಜಿ ತರಂಗಾಂತರದಿಂದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಭವಿಷ್ಯದಲ್ಲಿ ಬೀರಬಹುದು ಎಂಬ ಆತಂಕದಲ್ಲಿದ್ದಾರೆ. ತಮ್ಮ ಆರೋಗ್ಯದ ಹಿತದೃಷ್ಟಿಯಿಂದ ಎಚ್ಚೆತ್ತ ಸ್ಥಳೀಯರು ಜನ ವಸತಿ ಪ್ರದೇಶದಲ್ಲಿ 5ಜಿ ನೆಟ್ ವರ್ಕ್ ಟವರ್ ನಿರ್ಮಾಣಕ್ಕೆ ವಿರೋಧ ಮಾಡುತ್ತಿದ್ದರೂ ಟವರ್ ದಿನದಿನಕ್ಕೆ ಮೇಲಕ್ಕೆ ಹೋಗುತ್ತಿದೆ.

ದೊಡ್ಡಬಳ್ಳಾಪುರ ನಗರದಂಚಿನ ಮಾದಗೊಂಡನಹಳ್ಳಿ ರಸ್ತೆಯ ಚಂದ್ರಮೌಳೇಶ್ವರ ಲೇಔಟ್ ನಲ್ಲಿ 5ಜಿ ಟವರ್ ನಿರ್ಮಾಣವಾಗುತ್ತಿದೆ, ಸ್ಥಳೀಯ ನಿವಾಸಿಗಳಿಗೆ ಸಣ್ಣದೊಂದು ಸುಳಿವು ನೀಡದೆ ರಾತ್ರೋರಾತ್ರಿ ಟವರ್ ನಿರ್ಮಾಣಕ್ಕೆ ಮುಂದಾಗಿದ್ದಾರೆ, ಗೋಪಾಲ್ ಎಂಬುವರು ತಮ್ಮ ತೋಟದಲ್ಲಿ ಟವರ್ ನಿರ್ಮಾಣಕ್ಕೆ ಅವಕಾಶ ನೀಡಿದ್ದಾರೆ, ಟವರ್ ನಿರ್ಮಾಣದ ಬಗ್ಗೆ ಗೋಪಾಲ್ ರವರನ್ನ ಕೇಳಿದರೆ, ನನ್ನ ಜಾಗದಲ್ಲಿ ನಾನು ಏನ್ ಬೇಕಾದರು ಮಾಡಿಕೊಳ್ಳುವೆ ಎಂಬುವ ರೀತಿಯಲ್ಲಿ ಉಡಾಫೆಯ ಮಾತನ್ನಾಡಿದ್ದಾರೆಂಬುದು ಸ್ಥಳೀಯರ ಆರೋಪ,

ಇಲ್ಲಿ ಯಾವುದೇ ರೀತಿ ನೆಟ್ ವರ್ಕ್ ಸಮಸ್ಯೆ ಇಲ್ಲ, ಆದರೂ 5ಜಿ ಟವರ್ ನಿರ್ಮಾಣ ಮಾಡಲಾಗುತ್ತಿದೆ ಎಂದು ಸ್ಥಳೀಯರಾದ ಸೌಮ್ಯ ತಮ್ಮ ಅಕ್ರೋಶ ವ್ಯಕ್ತಪಡಿಸಿದರು.

ಗೋಪಾಲ್ ರವರು ರಾಜಕಾಲುವೆ ಜಾಗವನ್ನ ಒತ್ತುವರಿ ಮಾಡಿದ್ದಾರೆ, ಅದೇ ಜಾಗದಲ್ಲಿ ಟವರ್ ನಿರ್ಮಾಣಕ್ಕೆ ಅವಕಾಶ ನೀಡಿದ್ದಾರೆಂಬುದು ಸ್ಥಳೀಯರ ಆರೋಪ,  ಜನ ವಸತಿ ಪ್ರದೇಶದಲ್ಲಿ ಟವರ್ ನಿರ್ಮಾಣ ಕಾನೂನುಬಾಹಿರ, ಕೊಡಿಗೇಹಳ್ಳಿ ಗ್ರಾಮ ಪಂಚಾಯತಿ ಅಧಿಕಾರಿಗಳು ಸ್ಥಳೀಯರ ಒಪ್ಪಿಗೆ ಇಲ್ಲದೆ ಟವರ್ ನಿರ್ಮಾಣಕ್ಕೆ ಅನುಮತಿ ನೀಡಿದ್ದಾರೆ, ಮಕ್ಕಳ ಮತ್ತು ಗರ್ಭಿಣಿ ಮಹಿಳೆಯರ ಆರೋಗ್ಯದ ಮೇಲೆ ಹೈ ಬ್ರಾಂಡ್ ತರಂಗಾಂತರಗಳು ನೇರ ಪರಿಣಾಮ ಬಿರುತ್ತವೆ,

ಮಕ್ಕಳಲ್ಲಿ ಏಕಾಗ್ರತೆ, ನಿದ್ರಾ ಹೀನತೆ ಮೇಲೂ ಪರಿಣಾಮ ಬೀರಲಿದೆ. ಆದ್ದರಿಂದ ಕೂಡಲೇ ಈ ಟವರ್ ನ್ನು ಬೇರೆಡೆಗೆ ಸ್ಥಳಾಂತರಿಸಬೇಕು ಎಂದು ಸ್ಥಳೀಯರಾದ ಗುರುರಾಜ್ ಟವರ್ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದರು.

Ramesh Babu

Journalist

Recent Posts

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

4 hours ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

20 hours ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

2 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

2 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

3 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

4 days ago