ಜನ ವಸತಿ ಪ್ರದೇಶದಲ್ಲಿ ರಾತ್ರೋರಾತ್ರಿ ತಲೆಎತ್ತಿದ 5ಜಿ ನೆಟ್ ವರ್ಕ್ ಟವರ್: ಅನಾರೋಗ್ಯಕ್ಕೆ ತುತ್ತಾಗುವ ಭೀತಿಯಲ್ಲಿ ನಿವಾಸಿಗಳು: ಕೂಡಲೇ ಈ ಟವರ್ ನ್ನು ಬೇರೆಡೆಗೆ ಸ್ಥಳಾಂತರಿಸಲು ಆಗ್ರಹ

ಜನ ವಸತಿ ಪ್ರದೇಶದಲ್ಲಿ 5ಜಿ ನೆಟ್ ವರ್ಕ್ ಟವರ್‌ ಸದ್ದಿಲ್ಲದೇ ರಾತ್ರೋರಾತ್ರಿ ತಲೆಎತ್ತುತ್ತಿದೆ. ಇದನ್ನ ಕಂಡ ಸುತ್ತಮುತ್ತಲಿನ ಮನೆಗಳ ನಿವಾಸಿಗಳು ಭಯಭೀತರಾಗಿದ್ದಾರೆ. 5ಜಿ ತರಂಗಾಂತರದಿಂದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಭವಿಷ್ಯದಲ್ಲಿ ಬೀರಬಹುದು ಎಂಬ ಆತಂಕದಲ್ಲಿದ್ದಾರೆ. ತಮ್ಮ ಆರೋಗ್ಯದ ಹಿತದೃಷ್ಟಿಯಿಂದ ಎಚ್ಚೆತ್ತ ಸ್ಥಳೀಯರು ಜನ ವಸತಿ ಪ್ರದೇಶದಲ್ಲಿ 5ಜಿ ನೆಟ್ ವರ್ಕ್ ಟವರ್ ನಿರ್ಮಾಣಕ್ಕೆ ವಿರೋಧ ಮಾಡುತ್ತಿದ್ದರೂ ಟವರ್ ದಿನದಿನಕ್ಕೆ ಮೇಲಕ್ಕೆ ಹೋಗುತ್ತಿದೆ.

ದೊಡ್ಡಬಳ್ಳಾಪುರ ನಗರದಂಚಿನ ಮಾದಗೊಂಡನಹಳ್ಳಿ ರಸ್ತೆಯ ಚಂದ್ರಮೌಳೇಶ್ವರ ಲೇಔಟ್ ನಲ್ಲಿ 5ಜಿ ಟವರ್ ನಿರ್ಮಾಣವಾಗುತ್ತಿದೆ, ಸ್ಥಳೀಯ ನಿವಾಸಿಗಳಿಗೆ ಸಣ್ಣದೊಂದು ಸುಳಿವು ನೀಡದೆ ರಾತ್ರೋರಾತ್ರಿ ಟವರ್ ನಿರ್ಮಾಣಕ್ಕೆ ಮುಂದಾಗಿದ್ದಾರೆ, ಗೋಪಾಲ್ ಎಂಬುವರು ತಮ್ಮ ತೋಟದಲ್ಲಿ ಟವರ್ ನಿರ್ಮಾಣಕ್ಕೆ ಅವಕಾಶ ನೀಡಿದ್ದಾರೆ, ಟವರ್ ನಿರ್ಮಾಣದ ಬಗ್ಗೆ ಗೋಪಾಲ್ ರವರನ್ನ ಕೇಳಿದರೆ, ನನ್ನ ಜಾಗದಲ್ಲಿ ನಾನು ಏನ್ ಬೇಕಾದರು ಮಾಡಿಕೊಳ್ಳುವೆ ಎಂಬುವ ರೀತಿಯಲ್ಲಿ ಉಡಾಫೆಯ ಮಾತನ್ನಾಡಿದ್ದಾರೆಂಬುದು ಸ್ಥಳೀಯರ ಆರೋಪ,

ಇಲ್ಲಿ ಯಾವುದೇ ರೀತಿ ನೆಟ್ ವರ್ಕ್ ಸಮಸ್ಯೆ ಇಲ್ಲ, ಆದರೂ 5ಜಿ ಟವರ್ ನಿರ್ಮಾಣ ಮಾಡಲಾಗುತ್ತಿದೆ ಎಂದು ಸ್ಥಳೀಯರಾದ ಸೌಮ್ಯ ತಮ್ಮ ಅಕ್ರೋಶ ವ್ಯಕ್ತಪಡಿಸಿದರು.

ಗೋಪಾಲ್ ರವರು ರಾಜಕಾಲುವೆ ಜಾಗವನ್ನ ಒತ್ತುವರಿ ಮಾಡಿದ್ದಾರೆ, ಅದೇ ಜಾಗದಲ್ಲಿ ಟವರ್ ನಿರ್ಮಾಣಕ್ಕೆ ಅವಕಾಶ ನೀಡಿದ್ದಾರೆಂಬುದು ಸ್ಥಳೀಯರ ಆರೋಪ,  ಜನ ವಸತಿ ಪ್ರದೇಶದಲ್ಲಿ ಟವರ್ ನಿರ್ಮಾಣ ಕಾನೂನುಬಾಹಿರ, ಕೊಡಿಗೇಹಳ್ಳಿ ಗ್ರಾಮ ಪಂಚಾಯತಿ ಅಧಿಕಾರಿಗಳು ಸ್ಥಳೀಯರ ಒಪ್ಪಿಗೆ ಇಲ್ಲದೆ ಟವರ್ ನಿರ್ಮಾಣಕ್ಕೆ ಅನುಮತಿ ನೀಡಿದ್ದಾರೆ, ಮಕ್ಕಳ ಮತ್ತು ಗರ್ಭಿಣಿ ಮಹಿಳೆಯರ ಆರೋಗ್ಯದ ಮೇಲೆ ಹೈ ಬ್ರಾಂಡ್ ತರಂಗಾಂತರಗಳು ನೇರ ಪರಿಣಾಮ ಬಿರುತ್ತವೆ,

ಮಕ್ಕಳಲ್ಲಿ ಏಕಾಗ್ರತೆ, ನಿದ್ರಾ ಹೀನತೆ ಮೇಲೂ ಪರಿಣಾಮ ಬೀರಲಿದೆ. ಆದ್ದರಿಂದ ಕೂಡಲೇ ಈ ಟವರ್ ನ್ನು ಬೇರೆಡೆಗೆ ಸ್ಥಳಾಂತರಿಸಬೇಕು ಎಂದು ಸ್ಥಳೀಯರಾದ ಗುರುರಾಜ್ ಟವರ್ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದರು.

Ramesh Babu

Journalist

Recent Posts

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

17 hours ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

22 hours ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

22 hours ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

1 day ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

2 days ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

2 days ago