ಜನ ವಸತಿ ಪ್ರದೇಶದಲ್ಲಿ ರಾತ್ರೋರಾತ್ರಿ ತಲೆಎತ್ತಿದ 5ಜಿ ನೆಟ್ ವರ್ಕ್ ಟವರ್: ಅನಾರೋಗ್ಯಕ್ಕೆ ತುತ್ತಾಗುವ ಭೀತಿಯಲ್ಲಿ ನಿವಾಸಿಗಳು: ಕೂಡಲೇ ಈ ಟವರ್ ನ್ನು ಬೇರೆಡೆಗೆ ಸ್ಥಳಾಂತರಿಸಲು ಆಗ್ರಹ

ಜನ ವಸತಿ ಪ್ರದೇಶದಲ್ಲಿ 5ಜಿ ನೆಟ್ ವರ್ಕ್ ಟವರ್‌ ಸದ್ದಿಲ್ಲದೇ ರಾತ್ರೋರಾತ್ರಿ ತಲೆಎತ್ತುತ್ತಿದೆ. ಇದನ್ನ ಕಂಡ ಸುತ್ತಮುತ್ತಲಿನ ಮನೆಗಳ ನಿವಾಸಿಗಳು ಭಯಭೀತರಾಗಿದ್ದಾರೆ. 5ಜಿ ತರಂಗಾಂತರದಿಂದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಭವಿಷ್ಯದಲ್ಲಿ ಬೀರಬಹುದು ಎಂಬ ಆತಂಕದಲ್ಲಿದ್ದಾರೆ. ತಮ್ಮ ಆರೋಗ್ಯದ ಹಿತದೃಷ್ಟಿಯಿಂದ ಎಚ್ಚೆತ್ತ ಸ್ಥಳೀಯರು ಜನ ವಸತಿ ಪ್ರದೇಶದಲ್ಲಿ 5ಜಿ ನೆಟ್ ವರ್ಕ್ ಟವರ್ ನಿರ್ಮಾಣಕ್ಕೆ ವಿರೋಧ ಮಾಡುತ್ತಿದ್ದರೂ ಟವರ್ ದಿನದಿನಕ್ಕೆ ಮೇಲಕ್ಕೆ ಹೋಗುತ್ತಿದೆ.

ದೊಡ್ಡಬಳ್ಳಾಪುರ ನಗರದಂಚಿನ ಮಾದಗೊಂಡನಹಳ್ಳಿ ರಸ್ತೆಯ ಚಂದ್ರಮೌಳೇಶ್ವರ ಲೇಔಟ್ ನಲ್ಲಿ 5ಜಿ ಟವರ್ ನಿರ್ಮಾಣವಾಗುತ್ತಿದೆ, ಸ್ಥಳೀಯ ನಿವಾಸಿಗಳಿಗೆ ಸಣ್ಣದೊಂದು ಸುಳಿವು ನೀಡದೆ ರಾತ್ರೋರಾತ್ರಿ ಟವರ್ ನಿರ್ಮಾಣಕ್ಕೆ ಮುಂದಾಗಿದ್ದಾರೆ, ಗೋಪಾಲ್ ಎಂಬುವರು ತಮ್ಮ ತೋಟದಲ್ಲಿ ಟವರ್ ನಿರ್ಮಾಣಕ್ಕೆ ಅವಕಾಶ ನೀಡಿದ್ದಾರೆ, ಟವರ್ ನಿರ್ಮಾಣದ ಬಗ್ಗೆ ಗೋಪಾಲ್ ರವರನ್ನ ಕೇಳಿದರೆ, ನನ್ನ ಜಾಗದಲ್ಲಿ ನಾನು ಏನ್ ಬೇಕಾದರು ಮಾಡಿಕೊಳ್ಳುವೆ ಎಂಬುವ ರೀತಿಯಲ್ಲಿ ಉಡಾಫೆಯ ಮಾತನ್ನಾಡಿದ್ದಾರೆಂಬುದು ಸ್ಥಳೀಯರ ಆರೋಪ,

ಇಲ್ಲಿ ಯಾವುದೇ ರೀತಿ ನೆಟ್ ವರ್ಕ್ ಸಮಸ್ಯೆ ಇಲ್ಲ, ಆದರೂ 5ಜಿ ಟವರ್ ನಿರ್ಮಾಣ ಮಾಡಲಾಗುತ್ತಿದೆ ಎಂದು ಸ್ಥಳೀಯರಾದ ಸೌಮ್ಯ ತಮ್ಮ ಅಕ್ರೋಶ ವ್ಯಕ್ತಪಡಿಸಿದರು.

ಗೋಪಾಲ್ ರವರು ರಾಜಕಾಲುವೆ ಜಾಗವನ್ನ ಒತ್ತುವರಿ ಮಾಡಿದ್ದಾರೆ, ಅದೇ ಜಾಗದಲ್ಲಿ ಟವರ್ ನಿರ್ಮಾಣಕ್ಕೆ ಅವಕಾಶ ನೀಡಿದ್ದಾರೆಂಬುದು ಸ್ಥಳೀಯರ ಆರೋಪ,  ಜನ ವಸತಿ ಪ್ರದೇಶದಲ್ಲಿ ಟವರ್ ನಿರ್ಮಾಣ ಕಾನೂನುಬಾಹಿರ, ಕೊಡಿಗೇಹಳ್ಳಿ ಗ್ರಾಮ ಪಂಚಾಯತಿ ಅಧಿಕಾರಿಗಳು ಸ್ಥಳೀಯರ ಒಪ್ಪಿಗೆ ಇಲ್ಲದೆ ಟವರ್ ನಿರ್ಮಾಣಕ್ಕೆ ಅನುಮತಿ ನೀಡಿದ್ದಾರೆ, ಮಕ್ಕಳ ಮತ್ತು ಗರ್ಭಿಣಿ ಮಹಿಳೆಯರ ಆರೋಗ್ಯದ ಮೇಲೆ ಹೈ ಬ್ರಾಂಡ್ ತರಂಗಾಂತರಗಳು ನೇರ ಪರಿಣಾಮ ಬಿರುತ್ತವೆ,

ಮಕ್ಕಳಲ್ಲಿ ಏಕಾಗ್ರತೆ, ನಿದ್ರಾ ಹೀನತೆ ಮೇಲೂ ಪರಿಣಾಮ ಬೀರಲಿದೆ. ಆದ್ದರಿಂದ ಕೂಡಲೇ ಈ ಟವರ್ ನ್ನು ಬೇರೆಡೆಗೆ ಸ್ಥಳಾಂತರಿಸಬೇಕು ಎಂದು ಸ್ಥಳೀಯರಾದ ಗುರುರಾಜ್ ಟವರ್ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದರು.

Ramesh Babu

Journalist

Recent Posts

ಜೂ.05 ರಿಂದ ಮೂರು ದಿನಗಳ ಕಾಲ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ಮೇಳ

ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…

34 minutes ago

ಟಿವಿಎಸ್ ಎಕ್ಸ್‌ಎಲ್-100 ಕಳವು: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್‌ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…

5 hours ago

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

19 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

19 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

20 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

21 hours ago