‘ಜನ ಸಂಕಷ್ಟದಲ್ಲಿದ್ದರೆ ಕರ್ನಾಟಕದ ನೀರೋ ಕ್ರಿಕೆಟ್‌ ಮ್ಯಾಚ್‌ ನೋಡುತ್ತಿದ್ದ’!!!- ಮಾಜಿ ಸಿಎಂ ಕುಮಾರಸ್ವಾಮಿ

ವೆಸ್ಟ್ ಎಂಡ್ ನಲ್ಲಿ ಆಡಳಿತ ನಡೆಸಿಲ್ಲ ಎನ್ನುವ ಗಿಲೀಟು ಗಿರಾಕಿ, ಆವತ್ತು ಮುಖ್ಯಮಂತ್ರಿ ನಿವಾಸವನ್ನೇಕೆ ತೆರವು ಮಾಡಲಿಲ್ಲ? 5 ವರ್ಷ ಸರಕಾರ ಕೊಟ್ಟ ಸಿದ್ದಪುರುಷ ಇನ್ನೊಬ್ಬರ ಹೆಸರಿನಲ್ಲಿ ಭಂಗಲೆ ಪಡೆದು ಸಾಸಿವೆ ಕಾಳಷ್ಟೂ ಸಂಕೋಚವಿಲ್ಲದೆ ಅದೇ ಜಾಗದಲ್ಲಿ ಹೆಗ್ಗಣವಾಗಿ ಮೈತ್ರಿ ಸರಕಾರಕ್ಕೆ ಕನ್ನ ಕೊರೆದಿದ್ದನ್ನು ಕನ್ನಡಿಗರು ಮರೆತಿಲ್ಲ. ಹೇಳಿದ್ದೇ ಹೇಳುವ ಕಿಸುಬಾಯಿ ದಾಸನಿಗೆ ಗೊತ್ತಿರುವುದು ಎರಡೇ; 1.ವೆಸ್ಟ್‌ ಎಂಡ್‌ 2.ಬಿಜೆಪಿ ಬಿ ಟೀಂ ಎಂದ ಮಾಜಿ ಸಿಎಂ ಕುಮಾರಸ್ವಾಮಿ.

ಡೋಂಗೀ ಸಮಾಜವಾದಿ, ಫುಲ್ ಟೈಂ ಮೀರುಸಾಧಿಕವಾದಿಗೆ ವೆಸ್ಟ್ ಎಂಡ್ ಸೋಂಕು ಮತ್ತೆ ತಗುಲಿದೆ. I.N.D.I.A. ಕೂಟದ ಸಭೆಯನ್ನು ಇದೇ ವೆಸ್ಟ್ ಎಂಡ್ ಬದಲಿಗೆ, ತಮ್ಮ ಸುತ್ತ ಕೆನೆಪದರ, ಒಳಪದರ, ತೆಳುಪದರದಂತೆ ತಲೆ ಎತ್ತಿರುವ ʼಪರ್ಸಂಟೇಜ್ ಪಟಾಲಂʼ ಏಳುಸುತ್ತಿನ ಕೋಟೆಯ ವಠಾರದಲ್ಲಿಯೇ ನಡೆಸಬೇಕಿತ್ತು. ಏಕೆ ನಡೆಸಲಿಲ್ಲ? ಎಂದು ಪ್ರಶ್ನೆ ಮಾಡಿದ್ದಾರೆ.

ಆಧುನಿಕ ಭಾರತದ ಈಸ್ಟ್‌ ಇಂಡಿಯಾ ಕಂಪನಿ ಕಾಂಗ್ರೆಸ್ ಗೆ ಕರ್ನಾಟಕ ಪೊಗದಸ್ತು ಹುಲ್ಲುಗಾವಲು. ಸಿದ್ದಪುರುಷ @ಶೋಕಿಪುರುಷನೇ ಈ ಹುಲ್ಲುಗಾವಲಿನ ಮೇಟಿ.  ವಿದ್ಯುತ್ ಕ್ಷಾಮ ಮತ್ತು ಬರದಲ್ಲಿ ಜನರು ಬೆಯುತ್ತಿದ್ದರೆ ದಿನಪೂರ್ತಿ ಕೂತು ಕ್ರಿಕೆಟ್ ನೋಡುವಷ್ಟು ಶೋಕಿದಾರ! ರೋಮ್ ನಗರ ಹೊತ್ತಿ ಉರಿಯುತ್ತಿದ್ದರೆ ನೀರೋ ಪಿಟೀಲು ಬಾರಿಸುತ್ತಿದ್ದ!! ಜನ ಸಂಕಷ್ಟದಲ್ಲಿದ್ದರೆ ಕರ್ನಾಟಕದ ನೀರೋ ಕ್ರಿಕೆಟ್‌ ಮ್ಯಾಚ್‌ ನೋಡುತ್ತಿದ್ದ!!! ಎಂದು ವ್ಯಂಗ್ಯವಾಡಿದ್ದಾರೆ.

5 ತಿಂಗಳಿಂದ ವಿದ್ಯುತ್ ಉತ್ಪಾದನೆ ಅಲಕ್ಷಿಸಿದ್ದೇಕೆ? ಹಾಹಾಕಾರ ಎದ್ದ ಮೇಲೆ ಅದು ಮಾಡಿದ್ದೇವೆ, ಇದು ಮಾಡಿದ್ದೇವೆ ಎಂದರೆ ಲೋಡ್ ಶೆಡ್ಡಿಂಗ್ ಏಕೆ ಬಂತು? 2013-2018ರಲ್ಲಿ 12,000 ಮೆ.ವ್ಯಾ. ಉತ್ಪಾದಿಸಿದ್ದೇವೆ ಎಂದು ನೀವೇ ಹೇಳಿದ್ದೀರಿ, ಸರಿ. ಈಗ ಮಳೆ ಕಡಿಮೆಯಾಗಿ ಜಲವಿದ್ಯುತ್‌ ಉತ್ಪಾದನೆ ಕುಸಿದಿದೆ, ನನಗೂ ಗೊತ್ತಿದೆ. ಅದರಲ್ಲಿ 3,000 ಮೆ.ವ್ಯಾ. ಇಲ್ಲ ಎಂದರೂ ಸಾರ್ವಜನಿಕ & ಖಾಸಗಿ ವಲಯ ಸೇರಿ ಒಟ್ಟು 29,000 ಮೆ.ವ್ಯಾ. ವಿದ್ಯುತ್‌ ಉತ್ಪಾದನೆ ಆಗಲೇಬೇಕಿತ್ತು. ಆಗಿಲ್ಲವೇಕೆ? ಏಕಾಎಕಿ ಉತ್ಪಾದನೆ ನಿಲ್ಲಿಸಿದ್ದೇಕೆ? ಜಲವಿದ್ಯುತ್‌ ಕೈಕೊಡುತ್ತದೆ ಎಂದು ಗೊತ್ತಿದ್ದರೂ ಕಲ್ಲಿದ್ದಲ ಸಂಗ್ರಹ ಇಟ್ಟುಕೊಳ್ಳಲಿಲ್ಲವಲ್ಲ, ಏಕೆ? ಎಂದು ಪ್ರಶ್ನಿಸಿದ್ದಾರೆ.

ಜಲ ವಿದ್ಯುತ್‌ ಹೊರತುಪಡಿಸಿ ಇತರೆ ಮೂಲಗಳ ವಿದ್ಯುತ್‌ ಉತ್ಪಾದನೆಗೂ ಖೋತಾ ಬೀಳಲಿಕ್ಕೆ ಪ್ರಕೃತಿ ಕಾರಣವೋ? ಅಥವಾ ನಿಮ್ಮ ʼಕೈ ಚಳಕʼವೇ ಕಾರಣವೋ? ಸತ್ಯ ಹೇಳಿದರೆ ನನ್ನ ಕಡೆಗೇ ಬೊಟ್ಟು ಮಾಡುತ್ತೀರಿ, ನಿಮ್ಮ ಸಚಿವರನ್ನು ….. ….. ಗಳಂತೆ ನನ್ನ ಮೇಲೆ ಛೂ ಬಿಡುತ್ತೀರಿ. ಎಷ್ಟು ದಿನ ನೆಪಗಳ ನಾಜೂಕತನ? ಎಂದಿದ್ದಾರೆ.

ಮತ್ತೆ ಮತ್ತೆ ನಾನು ಹೇಳುತ್ತೇನೆ, ವಿದ್ಯುತ್ ಕೃತಕ ಅಭಾವ ಸೃಷ್ಟಿ ನಿಮ್ಮದೇ ಷಡ್ಯಂತ್ರ. ಅದು ಉಲ್ಬಣಿಸಿದಷ್ಟೂ ನಿಮಗೆ ಕಲೆಕ್ಷನ್‌ ಹೆಚ್ಚು. ಖಾಸಗಿ ಕಂಪನಿಗಳಿಂದ ಖರೀದಿಸಿ ಕೈ ತುಂಬಾ ಕಮೀಷನ್ ಎತ್ತಲು ಹೊರಟಿದ್ದೀರಿ. ಇಲ್ಲ ಎಂದಾದರೆ ವಿದ್ಯುತ್‌ ಕ್ಷಾಮದ ವಾಸ್ತವತೆ ಬಗ್ಗೆ ‘ಶ್ವೇತಪತ್ರ’ ಹೊರಡಿಸಿ. ಈ ಬಗ್ಗೆ ನಿಮ್ಮ ಮೌನ ಏಕೆ? ಬೆಂಗಳೂರು ನಗದು ಅಭಿವೃದ್ಧಿ ಇಲಾಖೆ ನಂತರ ಇಂ’ಧನ’ ಇಲಾಖೆಯಲ್ಲೂ ನೀವು ನಗದೀಕರಣಕ್ಕೆ ನಾಂದಿ ಹಾಡಿದ್ದೀರಿ. ಖರೀದಿ ಖುಷಿಯಲ್ಲಿ ಪರ್ಸಂಟೇಜ್ ಪಟಾಲಂ ಸಂಭ್ರಮಿಸುತ್ತಿದೆ ಎಂದು ಕಿಡಿಕಾರಿದ್ದಾರೆ.

Ramesh Babu

Journalist

Recent Posts

ಕೆ.ಎಚ್. ಮುನಿಯಪ್ಪ ಅವರಿಗೆ ಡಿಸಿಎಂ ಸ್ಥಾನ ನೀಡಲು ಮಾದಾರ ಮಹಾಸಭಾ ಒತ್ತಾಯ

ದೊಡ್ಡಬಳ್ಳಾಪುರ: ರಾಜ್ಯ ಸಚಿವ ಸಂಪುಟ ಪುನರ್‌ರಚನೆಯ ಸಂದರ್ಭದಲ್ಲಿ ಮಾದಿಗ ಸಮುದಾಯದ ಹಿರಿಯ ನಾಯಕ ಹಾಗೂ ಸಚಿವ ಕೆ.ಎಚ್. ಮುನಿಯಪ್ಪ ಅವರಿಗೆ…

28 minutes ago

ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP)ನಾಯಕರಾಗಿ ಡಿ.ಕೆ. ಶಿವಕುಮಾರ್ ಆಯ್ಕೆ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ ಬಳಿಕ ರಾಜ್ಯದಲ್ಲಿ ನೂತನ ಸರ್ಕಾರ ರಚನೆಗೆ ಚಟುವಟಿಕೆಗಳು ವೇಗ ಪಡೆದಿದ್ದು, ಕೆಪಿಸಿಸಿ…

1 hour ago

ಕೆ.ಎಚ್ ಮುನಿಯಪ್ಪನವರ ಅನುಭವಕ್ಕೆ ನ್ಯಾಯ ಸಿಗಲಿ: ಉಪಮುಖ್ಯಮಂತ್ರಿಯನ್ನಾಗಿ ನೇಮಿಸಲು ಆಗ್ರಹ

ದೊಡ್ಡಬಳ್ಳಾಪುರ: ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆಯ ಬೆನ್ನಲ್ಲೇ ಬದಲಾವಣೆಗೆ ಕ್ಷಣಗಣನೆ ಆರಂಭವಾಗಿದ್ದು ಇದರ ಜೊತೆಗೆ ಸಚಿವ ಸಂಪುಟ ಪುನರ್ ರಚನೆಯೂ…

3 hours ago

ಭಾರತದ ಉತ್ತರ ಮತ್ತು ದಕ್ಷಿಣ ಧ್ರುವ ಪ್ರವಾಸದ ನೆನಪುಗಳು…..

ಕಾಶ್ಮೀರ ಮತ್ತು ಕನ್ಯಾಕುಮಾರಿ...... ಭಾರತದ ಉತ್ತರ ಮತ್ತು ದಕ್ಷಿಣ ಧ್ರುವ ಪ್ರವಾಸದ ನೆನಪುಗಳು..... ಕನ್ಯಾಕುಮಾರಿ, ಧ್ಯಾನ, ಸ್ವಾಮಿ ವಿವೇಕಾನಂದ, ಕಾಶ್ಮೀರ,…

12 hours ago

ಶ್ರೀ ಕ್ಷೇತ್ರ ಘಾಟಿ‌ ಸುಬ್ರಹ್ಮಣ್ಯ ದೇವಸ್ಥಾನದ ಹುಂಡಿ ಎಣಿಕೆ: 79,72,502 ಕಾಣಿಕೆ ಸಂಗ್ರಹ

ದೊಡ್ಡಬಳ್ಳಾಪುರ ತಾಲೂಕಿನ ನಾಗಾರಾಧನೆಗೆ ಪ್ರಸಿದ್ಧಿ ಪಡೆದಿರುವ ಶ್ರೀ ಕ್ಷೇತ್ರ ಘಾಟಿ‌ ಸುಬ್ರಹ್ಮಣ್ಯ ದೇವಸ್ಥಾನದ ಹುಂಡಿಯಲ್ಲಿ ಸಂಗ್ರಹವಾಗಿದ್ದ ಕಾಣಿಕೆ ಹಣವನ್ನು ಎಣಿಕೆ‌…

1 day ago

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ರಾಜೀನಾಮೆ ಪತ್ರವನ್ನ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅಂಗೀಕಾರ: ಸಚಿವ ಸಂಪುಟವನ್ನೂ ತಕ್ಷಣ ಜಾರಿಗೆ ಬರುವಂತೆ ವಿಸರ್ಜನೆ

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅಂಗೀಕರಿಸಿದ್ದಾರೆ.‌‌ ಜೊತೆಗೆ ಸಿದ್ದರಾಮಯ್ಯ…

1 day ago