ಜನ ಸಾಮಾನ್ಯರ ಬದುಕು ಹಸನಾಗಿಸುವ ನಿಟ್ಟಿನಲ್ಲಿ ಚಿಂತಿಸಿ- ಗಾಯಕ ವಾಸುಕಿ ವೈಭವ್

ಜನಸಾಮಾನ್ಯರ ಬದುಕನ್ನು ಹಸನಾಗಿಸುವ ಹೊಸ ವಿಚಾರ ಹಾಗೂ ಅನ್ವೇಷಣೆಗಳನ್ನು ಶ್ರದ್ಧೆಯಿಂದ ಮಾಡುವುದರಿಂದ ನಮಗೆ ಯಶಸ್ಸು, ಶ್ರೇಯಸ್ಸು, ಆತ್ಮಸಂತೋಷಗಳೆಲ್ಲವೂ ಒದಗಿಬರುತ್ತದೆ ಎಂದು ಸಂಗೀತ ಸಂಯೋಜಕ, ನಟ ವಾಸುಕಿ ವೈಭವ್ ಹೇಳಿದರು.

ನಿಟ್ಟೆ ಮೀನಾಕ್ಷಿ ತಾಂತ್ರಿಕ ವಿವಿಯಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರಮಟ್ಟದ ತಂತ್ರಜ್ಞಾನ ಹಾಗೂ ಸಾಂಸ್ಕೃತಿಕ ಉತ್ಸವ- “ಅನಾದ್ಯಂತ-2023′ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಕನಸುಗಳನ್ನು ವಿದ್ಯಾಸಂಸ್ಥೆಗಳಲ್ಲಿಯೇ ಸದಾ ತಪ್ಪುಗಳನ್ನು ಮಾಡುತ್ತಲೇ ಕಲಿಯುತ್ತೇವೆ. ಆದರೆ ಆ ತಪ್ಪುಗಳನ್ನು ತಿದ್ದುವ ಗುರುಗಳು ಇಲ್ಲಿರುತ್ತಾರೆ. ಅದಕ್ಕಾಗಿಯೇ ನಾವೆಲ್ಲರೂ ನಮ್ಮ ಗುರುಗಳಿಗೆ ಹಾಗೂ ತಂದೆ-ತಾಯಿಗಳಿಗೆ ಸದಾ ಋಣಿಯಾಗಿರಬೇಕೆಂದರು.

ನಿಟ್ಟೆ ಮೀನಾಕ್ಷಿ ತಾಂತ್ರಿಕ ವಿವಿಯ ಪ್ರಾಂಶುಪಾಲ ಡಾ.ಎಚ್‌.ಸಿ.ನಾಗರಾಜ್ ಮಾತನಾಡಿ, ‘ಮಿತಿಮೀರಿ ಬೆಳೆಯುತ್ತಿರುವ ಜನಸಂಖ್ಯೆ, ನೈಸರ್ಗಿಕ ಸಂಪನ್ಮೂಲಗಳ ಅತಿ ಬಳಕೆ, ತಲೆದೋರಬಹುದಾದ ಭೀಕರ ಜಲಕ್ಷಾಮ, ಇತರೆ ಪ್ರಾಣಿಪಕ್ಷಿಗಳ ಜೀವಕ್ಕೆ

ಸಂಚಕಾರ ಇತ್ಯಾದಿಗಳಿಂದ ನಲುಗುತ್ತಿರುವ ನಮ್ಮ ವಿಶ್ವಕ್ಕೆ ಸೂಕ್ತ ಪರಿಹಾರವನ್ನು ನಮ್ಮ ಯುವ ಎಂಜಿನಿಯರ್‌ಗಳು ಕಂಡುಕೊಳ್ಳಬೇಕಿದೆ ಎಂದರು.ಇತ್ತೀಚಿನ ಯುವ ತಂತ್ರಜ್ಞರಿಗೆ ಅಪಾರ ಅರಿವಿದೆ. ಸಮಾಜದ ಬಗ್ಗೆ ಕಾಳಜಿಯಿದೆ ಹಾಗೂ ಹೊಸತನ್ನು ಅನ್ವೇಷಿಸುವ ಉತ್ಸಾಹವಿದೆ. ತಂತ್ರಜ್ಞಾನದ ಸದ್ಬಳಕೆಯಿಂದ ಮಾತ್ರ ಈ ಜಗತ್ತನ್ನು ಅಪಾಯಗಳಿಂದ ಪಾರು ಮಾಡಬಹುದು ಎಂದ ಅವರು, ಸಂಸ್ಕೃತಿ ಸಾಹಿತ್ಯಗಳಿಂದ ಸಮಾಜಮುಖಿ ಮಾನವೀಯ ಗುಣಗಳು ವೃದ್ಧಿಯಾಗುತ್ತವೆ ಎಂಬ ಉದ್ದೇಶದಿಂದ ಈ ಸಾಂಸ್ಕೃತಿಕ ಉತ್ಸವವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ನಿಟ್ಟೆ ಶಿಕ್ಷಣ ಸಂಸ್ಥೆಯ ಡಾ.ಅಶ್ವಿತಾ ಪೂಂಜ, ನಿಟ್ಟೆ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ರೋಹಿತ್‌, ಪೂಂಜ, ಡಾ. ಸಂದೀಪ್ ಶಾಸ್ತ್ರಿ, ಡಾ.ಶ್ರೀಧರ್, ಪ್ರೊ.ಎಸ್.ನಾಗೇಂದ್ರ, ಡಾ. ಕಿರಣ್ ಐತಾಳ್ ಮತ್ತಿತರರಿದ್ದರು. ಉತ್ಸವದಲ್ಲಿ ‘ಐಡಿಯಾಥಾನ್, ‘ಸ್ಟುಡ್‌ ಸ್ಯಾಟ್’, ‘ಸಿಮುಲೇಶನ್ ರೇಸ್’, ‘ರೂಬಿಕ್ ಕ್ಯೂಬ್’ ಇತ್ಯಾದಿ ತಂತ್ರಜ್ಞಾನ ಕ್ಷೇತ್ರದ ಸ್ಪರ್ಧೆಗಳಲ್ಲದೆ ಬೀದಿ ನಾಟಕ, ಕ್ವಿಜ್, ನೃತ್ಯ, ಚರ್ಚಾ ಸ್ಪರ್ಧೆ, ಕ್ರೀಡೆ, ಫ್ಯಾಷನ್ ಶೋ ಇತರೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

Ramesh Babu

Journalist

Recent Posts

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

7 hours ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

7 hours ago

ದೊಡ್ಡಬಳ್ಳಾಪುರ ರೈಲ್ವೆ ಸ್ಟೇಷನ್ ಬಳಿ ಅಂಡರ್ ಪಾಸ್ ಅವೈಜ್ಞಾನಿಕ- ಮೇಲ್ಸೇತುವೆ ಅಗತ್ಯ- ಸಂಸದ ಡಾ. ಕೆ. ಸುಧಾಕರ್

ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯಗಳು ತಲುಪುವಂತೆ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ…

7 hours ago

ಮುಂದಿನ ದಿನಗಳಲ್ಲಿ 1000 ಸಬ್ ಇನ್ಸ್ ಪೆಕ್ಟರ್, 8000 ಕಾನ್ಸ್ಟೇಬಲ್ ಗಳ ನೇಮಕ – ಗೃಹ ಸಚಿವ ಪರಮೇಶ್ವರ್

  ಪೊಲೀಸ್ ಇಲಾಖೆಯಲ್ಲಿ 1000 ಸಬ್ ಇನ್ಸ್ಪೆಕ್ಟರ್ ಹಾಗೂ 8000 ಕಾನ್ಸ್ಟೇಬಲ್ ಗಳನ್ನು ಆದಷ್ಟು ಶೀಘ್ರ ನೇಮಕ ಮಾಡಲಾಗುವುದು ಎಂದು…

8 hours ago

ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಇಂದು ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ…

11 hours ago

ಪಿಯುಸಿ ವಿದ್ಯಾರ್ಥಿಗಳಿಗೆ National Academic Depository (NAD) – DigiLocker ಮೂಲಕ ಫಲಿತಾಂಶದ ದಿನವೇ ಅಂಕಪಟ್ಟಿ

2025-26ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಫಲಿತಾಂಶ ಪ್ರಕಟವಾದ ದಿನವೇ National Academic Depository…

14 hours ago