ಜನಸಾಮಾನ್ಯರ ಬದುಕನ್ನು ಹಸನಾಗಿಸುವ ಹೊಸ ವಿಚಾರ ಹಾಗೂ ಅನ್ವೇಷಣೆಗಳನ್ನು ಶ್ರದ್ಧೆಯಿಂದ ಮಾಡುವುದರಿಂದ ನಮಗೆ ಯಶಸ್ಸು, ಶ್ರೇಯಸ್ಸು, ಆತ್ಮಸಂತೋಷಗಳೆಲ್ಲವೂ ಒದಗಿಬರುತ್ತದೆ ಎಂದು ಸಂಗೀತ ಸಂಯೋಜಕ, ನಟ ವಾಸುಕಿ ವೈಭವ್ ಹೇಳಿದರು.
ನಿಟ್ಟೆ ಮೀನಾಕ್ಷಿ ತಾಂತ್ರಿಕ ವಿವಿಯಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರಮಟ್ಟದ ತಂತ್ರಜ್ಞಾನ ಹಾಗೂ ಸಾಂಸ್ಕೃತಿಕ ಉತ್ಸವ- “ಅನಾದ್ಯಂತ-2023′ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಕನಸುಗಳನ್ನು ವಿದ್ಯಾಸಂಸ್ಥೆಗಳಲ್ಲಿಯೇ ಸದಾ ತಪ್ಪುಗಳನ್ನು ಮಾಡುತ್ತಲೇ ಕಲಿಯುತ್ತೇವೆ. ಆದರೆ ಆ ತಪ್ಪುಗಳನ್ನು ತಿದ್ದುವ ಗುರುಗಳು ಇಲ್ಲಿರುತ್ತಾರೆ. ಅದಕ್ಕಾಗಿಯೇ ನಾವೆಲ್ಲರೂ ನಮ್ಮ ಗುರುಗಳಿಗೆ ಹಾಗೂ ತಂದೆ-ತಾಯಿಗಳಿಗೆ ಸದಾ ಋಣಿಯಾಗಿರಬೇಕೆಂದರು.
ನಿಟ್ಟೆ ಮೀನಾಕ್ಷಿ ತಾಂತ್ರಿಕ ವಿವಿಯ ಪ್ರಾಂಶುಪಾಲ ಡಾ.ಎಚ್.ಸಿ.ನಾಗರಾಜ್ ಮಾತನಾಡಿ, ‘ಮಿತಿಮೀರಿ ಬೆಳೆಯುತ್ತಿರುವ ಜನಸಂಖ್ಯೆ, ನೈಸರ್ಗಿಕ ಸಂಪನ್ಮೂಲಗಳ ಅತಿ ಬಳಕೆ, ತಲೆದೋರಬಹುದಾದ ಭೀಕರ ಜಲಕ್ಷಾಮ, ಇತರೆ ಪ್ರಾಣಿಪಕ್ಷಿಗಳ ಜೀವಕ್ಕೆ
ಸಂಚಕಾರ ಇತ್ಯಾದಿಗಳಿಂದ ನಲುಗುತ್ತಿರುವ ನಮ್ಮ ವಿಶ್ವಕ್ಕೆ ಸೂಕ್ತ ಪರಿಹಾರವನ್ನು ನಮ್ಮ ಯುವ ಎಂಜಿನಿಯರ್ಗಳು ಕಂಡುಕೊಳ್ಳಬೇಕಿದೆ ಎಂದರು.ಇತ್ತೀಚಿನ ಯುವ ತಂತ್ರಜ್ಞರಿಗೆ ಅಪಾರ ಅರಿವಿದೆ. ಸಮಾಜದ ಬಗ್ಗೆ ಕಾಳಜಿಯಿದೆ ಹಾಗೂ ಹೊಸತನ್ನು ಅನ್ವೇಷಿಸುವ ಉತ್ಸಾಹವಿದೆ. ತಂತ್ರಜ್ಞಾನದ ಸದ್ಬಳಕೆಯಿಂದ ಮಾತ್ರ ಈ ಜಗತ್ತನ್ನು ಅಪಾಯಗಳಿಂದ ಪಾರು ಮಾಡಬಹುದು ಎಂದ ಅವರು, ಸಂಸ್ಕೃತಿ ಸಾಹಿತ್ಯಗಳಿಂದ ಸಮಾಜಮುಖಿ ಮಾನವೀಯ ಗುಣಗಳು ವೃದ್ಧಿಯಾಗುತ್ತವೆ ಎಂಬ ಉದ್ದೇಶದಿಂದ ಈ ಸಾಂಸ್ಕೃತಿಕ ಉತ್ಸವವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ನಿಟ್ಟೆ ಶಿಕ್ಷಣ ಸಂಸ್ಥೆಯ ಡಾ.ಅಶ್ವಿತಾ ಪೂಂಜ, ನಿಟ್ಟೆ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ರೋಹಿತ್, ಪೂಂಜ, ಡಾ. ಸಂದೀಪ್ ಶಾಸ್ತ್ರಿ, ಡಾ.ಶ್ರೀಧರ್, ಪ್ರೊ.ಎಸ್.ನಾಗೇಂದ್ರ, ಡಾ. ಕಿರಣ್ ಐತಾಳ್ ಮತ್ತಿತರರಿದ್ದರು. ಉತ್ಸವದಲ್ಲಿ ‘ಐಡಿಯಾಥಾನ್, ‘ಸ್ಟುಡ್ ಸ್ಯಾಟ್’, ‘ಸಿಮುಲೇಶನ್ ರೇಸ್’, ‘ರೂಬಿಕ್ ಕ್ಯೂಬ್’ ಇತ್ಯಾದಿ ತಂತ್ರಜ್ಞಾನ ಕ್ಷೇತ್ರದ ಸ್ಪರ್ಧೆಗಳಲ್ಲದೆ ಬೀದಿ ನಾಟಕ, ಕ್ವಿಜ್, ನೃತ್ಯ, ಚರ್ಚಾ ಸ್ಪರ್ಧೆ, ಕ್ರೀಡೆ, ಫ್ಯಾಷನ್ ಶೋ ಇತರೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಸಬ್ ಇನ್ಸ್ಪೆಕ್ಟರ್ ಡ್ರೆಸ್ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…
ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್ನಲ್ಲಿದ್ದಾರೆ ಎನ್ನುವುದು…
ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಚುನಾವಣಾ ಆಯೋಗ…
ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…