ಜನ ಸಾಮಾನ್ಯರ ಬದುಕು ಹಸನಾಗಿಸುವ ನಿಟ್ಟಿನಲ್ಲಿ ಚಿಂತಿಸಿ- ಗಾಯಕ ವಾಸುಕಿ ವೈಭವ್

ಜನಸಾಮಾನ್ಯರ ಬದುಕನ್ನು ಹಸನಾಗಿಸುವ ಹೊಸ ವಿಚಾರ ಹಾಗೂ ಅನ್ವೇಷಣೆಗಳನ್ನು ಶ್ರದ್ಧೆಯಿಂದ ಮಾಡುವುದರಿಂದ ನಮಗೆ ಯಶಸ್ಸು, ಶ್ರೇಯಸ್ಸು, ಆತ್ಮಸಂತೋಷಗಳೆಲ್ಲವೂ ಒದಗಿಬರುತ್ತದೆ ಎಂದು ಸಂಗೀತ ಸಂಯೋಜಕ, ನಟ ವಾಸುಕಿ ವೈಭವ್ ಹೇಳಿದರು.

ನಿಟ್ಟೆ ಮೀನಾಕ್ಷಿ ತಾಂತ್ರಿಕ ವಿವಿಯಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರಮಟ್ಟದ ತಂತ್ರಜ್ಞಾನ ಹಾಗೂ ಸಾಂಸ್ಕೃತಿಕ ಉತ್ಸವ- “ಅನಾದ್ಯಂತ-2023′ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಕನಸುಗಳನ್ನು ವಿದ್ಯಾಸಂಸ್ಥೆಗಳಲ್ಲಿಯೇ ಸದಾ ತಪ್ಪುಗಳನ್ನು ಮಾಡುತ್ತಲೇ ಕಲಿಯುತ್ತೇವೆ. ಆದರೆ ಆ ತಪ್ಪುಗಳನ್ನು ತಿದ್ದುವ ಗುರುಗಳು ಇಲ್ಲಿರುತ್ತಾರೆ. ಅದಕ್ಕಾಗಿಯೇ ನಾವೆಲ್ಲರೂ ನಮ್ಮ ಗುರುಗಳಿಗೆ ಹಾಗೂ ತಂದೆ-ತಾಯಿಗಳಿಗೆ ಸದಾ ಋಣಿಯಾಗಿರಬೇಕೆಂದರು.

ನಿಟ್ಟೆ ಮೀನಾಕ್ಷಿ ತಾಂತ್ರಿಕ ವಿವಿಯ ಪ್ರಾಂಶುಪಾಲ ಡಾ.ಎಚ್‌.ಸಿ.ನಾಗರಾಜ್ ಮಾತನಾಡಿ, ‘ಮಿತಿಮೀರಿ ಬೆಳೆಯುತ್ತಿರುವ ಜನಸಂಖ್ಯೆ, ನೈಸರ್ಗಿಕ ಸಂಪನ್ಮೂಲಗಳ ಅತಿ ಬಳಕೆ, ತಲೆದೋರಬಹುದಾದ ಭೀಕರ ಜಲಕ್ಷಾಮ, ಇತರೆ ಪ್ರಾಣಿಪಕ್ಷಿಗಳ ಜೀವಕ್ಕೆ

ಸಂಚಕಾರ ಇತ್ಯಾದಿಗಳಿಂದ ನಲುಗುತ್ತಿರುವ ನಮ್ಮ ವಿಶ್ವಕ್ಕೆ ಸೂಕ್ತ ಪರಿಹಾರವನ್ನು ನಮ್ಮ ಯುವ ಎಂಜಿನಿಯರ್‌ಗಳು ಕಂಡುಕೊಳ್ಳಬೇಕಿದೆ ಎಂದರು.ಇತ್ತೀಚಿನ ಯುವ ತಂತ್ರಜ್ಞರಿಗೆ ಅಪಾರ ಅರಿವಿದೆ. ಸಮಾಜದ ಬಗ್ಗೆ ಕಾಳಜಿಯಿದೆ ಹಾಗೂ ಹೊಸತನ್ನು ಅನ್ವೇಷಿಸುವ ಉತ್ಸಾಹವಿದೆ. ತಂತ್ರಜ್ಞಾನದ ಸದ್ಬಳಕೆಯಿಂದ ಮಾತ್ರ ಈ ಜಗತ್ತನ್ನು ಅಪಾಯಗಳಿಂದ ಪಾರು ಮಾಡಬಹುದು ಎಂದ ಅವರು, ಸಂಸ್ಕೃತಿ ಸಾಹಿತ್ಯಗಳಿಂದ ಸಮಾಜಮುಖಿ ಮಾನವೀಯ ಗುಣಗಳು ವೃದ್ಧಿಯಾಗುತ್ತವೆ ಎಂಬ ಉದ್ದೇಶದಿಂದ ಈ ಸಾಂಸ್ಕೃತಿಕ ಉತ್ಸವವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ನಿಟ್ಟೆ ಶಿಕ್ಷಣ ಸಂಸ್ಥೆಯ ಡಾ.ಅಶ್ವಿತಾ ಪೂಂಜ, ನಿಟ್ಟೆ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ರೋಹಿತ್‌, ಪೂಂಜ, ಡಾ. ಸಂದೀಪ್ ಶಾಸ್ತ್ರಿ, ಡಾ.ಶ್ರೀಧರ್, ಪ್ರೊ.ಎಸ್.ನಾಗೇಂದ್ರ, ಡಾ. ಕಿರಣ್ ಐತಾಳ್ ಮತ್ತಿತರರಿದ್ದರು. ಉತ್ಸವದಲ್ಲಿ ‘ಐಡಿಯಾಥಾನ್, ‘ಸ್ಟುಡ್‌ ಸ್ಯಾಟ್’, ‘ಸಿಮುಲೇಶನ್ ರೇಸ್’, ‘ರೂಬಿಕ್ ಕ್ಯೂಬ್’ ಇತ್ಯಾದಿ ತಂತ್ರಜ್ಞಾನ ಕ್ಷೇತ್ರದ ಸ್ಪರ್ಧೆಗಳಲ್ಲದೆ ಬೀದಿ ನಾಟಕ, ಕ್ವಿಜ್, ನೃತ್ಯ, ಚರ್ಚಾ ಸ್ಪರ್ಧೆ, ಕ್ರೀಡೆ, ಫ್ಯಾಷನ್ ಶೋ ಇತರೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

Ramesh Babu

Journalist

Recent Posts

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

6 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

7 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

22 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

2 days ago