ಜಮೀನಿನಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾ ಕಳವು

ಜಮೀನಿನಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಕದ್ದೊಯ್ದಿರುವ ಘಟನೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ, ಶೆಟ್ಟರಹಳ್ಳಿ ಗ್ರಾಮದಲ್ಲಿ ನಡೆದಿದೆ….

ಅಪರಿಚಿತರು ಈ ಹಿಂದೆ ಕೂಡ ಹಲವು ಬಾರಿ ಜಮೀನಿಗೆ ಅತಿಕ್ರಮವಾಗಿ ಪ್ರವೇಶ ಮಾಡಿತ್ತಿದ್ದು, ಈ ಹಿನ್ನೆಲೆ ಜಮೀನಿನಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ್ದರು. ಈಗ ಅದನ್ನು ಕೂಡ ಕದ್ದೊಯ್ದಿದ್ದಾರೆ….

ಈ ಕುರಿತು ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಈ ಕುರಿತು ದೂರುದಾರ ಮುರುಳಿ ಟಿ.ಎನ್ ಮಾತನಾಡಿ, ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ, ಶೆಟ್ಟರಹಳ್ಳಿ ಗ್ರಾಮದ ಸರ್ವೆ ನಂಬರ್ 115/2 ರ ಜಮೀನಿಗೆ ಈ ಹಿಂದೆ ಹಲವು ಬಾರಿ ನಮ್ಮ ಜಮೀನಿಗೆ ಯಾರೋ ಅಪರಿಚಿತರು ಉದ್ದೇಶಪೂರ್ವಕವಾಗಿ ಅತಿಕ್ರಮವಾಗಿ ಪ್ರವೇಶ ಮಾಡುತ್ತಿದ್ದು, ನಾನು ಕೆಲವರ ಸಲಹೆಯಂತೆ ಈ ಜಮೀನಿನಲ್ಲಿ ಸಿಸಿ ಕ್ಯಾಮೆರಾವನ್ನು ಅಳವಡಿಸಿದೆ. ಮೇ.8 ರಂದು ಸಂಜೆ 5.30 ಗಂಟೆಯ ಸಮಯದಲ್ಲಿ ಯಾರೋ ಅಪರಿಚಿತ ನಮ್ಮ ಜಮೀನಿಗೆ ಅತಿಕ್ರಮ ಪ್ರವೇಶ ಮಾಡಿ ನಮ್ಮ ಜಮೀನಿನಲ್ಲಿ ನಾನು ಅಳವಡಿಸಿದ್ದ ಸಿಸಿ ಕ್ಯಾಮೆರಾವನ್ನು ತೆಗೆದುಕೊಂಡು ಹೋಗಿದ್ದಾರೆ. ಈ ಕುರಿತು ಮೇ.12 ರಂದು ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ‌ ದೂರು ದಾಖಲಿಸಿದ್ದೇನೆ ಎಂದರು.

Ramesh Babu

Journalist

Recent Posts

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

9 hours ago

ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ…..

ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…

12 hours ago

ಖಾಸಗಿ ಬಸ್ ಲಾರಿಗೆ ಡಿಕ್ಕಿ: ಹೊತ್ತಿ ಉರಿದ ಬಸ್: 9 ಮಂದಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಬಸ್ ಒಳಗಡೆಯೇ ಸಜೀವ ದಹನ

ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…

12 hours ago

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

1 day ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

1 day ago