ಜಮೀನಿನಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾ ಕಳವು

ಜಮೀನಿನಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಕದ್ದೊಯ್ದಿರುವ ಘಟನೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ, ಶೆಟ್ಟರಹಳ್ಳಿ ಗ್ರಾಮದಲ್ಲಿ ನಡೆದಿದೆ….

ಅಪರಿಚಿತರು ಈ ಹಿಂದೆ ಕೂಡ ಹಲವು ಬಾರಿ ಜಮೀನಿಗೆ ಅತಿಕ್ರಮವಾಗಿ ಪ್ರವೇಶ ಮಾಡಿತ್ತಿದ್ದು, ಈ ಹಿನ್ನೆಲೆ ಜಮೀನಿನಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ್ದರು. ಈಗ ಅದನ್ನು ಕೂಡ ಕದ್ದೊಯ್ದಿದ್ದಾರೆ….

ಈ ಕುರಿತು ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಈ ಕುರಿತು ದೂರುದಾರ ಮುರುಳಿ ಟಿ.ಎನ್ ಮಾತನಾಡಿ, ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ, ಶೆಟ್ಟರಹಳ್ಳಿ ಗ್ರಾಮದ ಸರ್ವೆ ನಂಬರ್ 115/2 ರ ಜಮೀನಿಗೆ ಈ ಹಿಂದೆ ಹಲವು ಬಾರಿ ನಮ್ಮ ಜಮೀನಿಗೆ ಯಾರೋ ಅಪರಿಚಿತರು ಉದ್ದೇಶಪೂರ್ವಕವಾಗಿ ಅತಿಕ್ರಮವಾಗಿ ಪ್ರವೇಶ ಮಾಡುತ್ತಿದ್ದು, ನಾನು ಕೆಲವರ ಸಲಹೆಯಂತೆ ಈ ಜಮೀನಿನಲ್ಲಿ ಸಿಸಿ ಕ್ಯಾಮೆರಾವನ್ನು ಅಳವಡಿಸಿದೆ. ಮೇ.8 ರಂದು ಸಂಜೆ 5.30 ಗಂಟೆಯ ಸಮಯದಲ್ಲಿ ಯಾರೋ ಅಪರಿಚಿತ ನಮ್ಮ ಜಮೀನಿಗೆ ಅತಿಕ್ರಮ ಪ್ರವೇಶ ಮಾಡಿ ನಮ್ಮ ಜಮೀನಿನಲ್ಲಿ ನಾನು ಅಳವಡಿಸಿದ್ದ ಸಿಸಿ ಕ್ಯಾಮೆರಾವನ್ನು ತೆಗೆದುಕೊಂಡು ಹೋಗಿದ್ದಾರೆ. ಈ ಕುರಿತು ಮೇ.12 ರಂದು ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ‌ ದೂರು ದಾಖಲಿಸಿದ್ದೇನೆ ಎಂದರು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

8 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

8 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

11 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

12 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

16 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

20 hours ago