ಜಮೀನಿನಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಕದ್ದೊಯ್ದಿರುವ ಘಟನೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ, ಶೆಟ್ಟರಹಳ್ಳಿ ಗ್ರಾಮದಲ್ಲಿ ನಡೆದಿದೆ….
ಅಪರಿಚಿತರು ಈ ಹಿಂದೆ ಕೂಡ ಹಲವು ಬಾರಿ ಜಮೀನಿಗೆ ಅತಿಕ್ರಮವಾಗಿ ಪ್ರವೇಶ ಮಾಡಿತ್ತಿದ್ದು, ಈ ಹಿನ್ನೆಲೆ ಜಮೀನಿನಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ್ದರು. ಈಗ ಅದನ್ನು ಕೂಡ ಕದ್ದೊಯ್ದಿದ್ದಾರೆ….
ಈ ಕುರಿತು ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಈ ಕುರಿತು ದೂರುದಾರ ಮುರುಳಿ ಟಿ.ಎನ್ ಮಾತನಾಡಿ, ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ, ಶೆಟ್ಟರಹಳ್ಳಿ ಗ್ರಾಮದ ಸರ್ವೆ ನಂಬರ್ 115/2 ರ ಜಮೀನಿಗೆ ಈ ಹಿಂದೆ ಹಲವು ಬಾರಿ ನಮ್ಮ ಜಮೀನಿಗೆ ಯಾರೋ ಅಪರಿಚಿತರು ಉದ್ದೇಶಪೂರ್ವಕವಾಗಿ ಅತಿಕ್ರಮವಾಗಿ ಪ್ರವೇಶ ಮಾಡುತ್ತಿದ್ದು, ನಾನು ಕೆಲವರ ಸಲಹೆಯಂತೆ ಈ ಜಮೀನಿನಲ್ಲಿ ಸಿಸಿ ಕ್ಯಾಮೆರಾವನ್ನು ಅಳವಡಿಸಿದೆ. ಮೇ.8 ರಂದು ಸಂಜೆ 5.30 ಗಂಟೆಯ ಸಮಯದಲ್ಲಿ ಯಾರೋ ಅಪರಿಚಿತ ನಮ್ಮ ಜಮೀನಿಗೆ ಅತಿಕ್ರಮ ಪ್ರವೇಶ ಮಾಡಿ ನಮ್ಮ ಜಮೀನಿನಲ್ಲಿ ನಾನು ಅಳವಡಿಸಿದ್ದ ಸಿಸಿ ಕ್ಯಾಮೆರಾವನ್ನು ತೆಗೆದುಕೊಂಡು ಹೋಗಿದ್ದಾರೆ. ಈ ಕುರಿತು ಮೇ.12 ರಂದು ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ ಎಂದರು.
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…