ಜಮೀನಿನಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಕದ್ದೊಯ್ದಿರುವ ಘಟನೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ, ಶೆಟ್ಟರಹಳ್ಳಿ ಗ್ರಾಮದಲ್ಲಿ ನಡೆದಿದೆ….
ಅಪರಿಚಿತರು ಈ ಹಿಂದೆ ಕೂಡ ಹಲವು ಬಾರಿ ಜಮೀನಿಗೆ ಅತಿಕ್ರಮವಾಗಿ ಪ್ರವೇಶ ಮಾಡಿತ್ತಿದ್ದು, ಈ ಹಿನ್ನೆಲೆ ಜಮೀನಿನಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ್ದರು. ಈಗ ಅದನ್ನು ಕೂಡ ಕದ್ದೊಯ್ದಿದ್ದಾರೆ….
ಈ ಕುರಿತು ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಈ ಕುರಿತು ದೂರುದಾರ ಮುರುಳಿ ಟಿ.ಎನ್ ಮಾತನಾಡಿ, ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ, ಶೆಟ್ಟರಹಳ್ಳಿ ಗ್ರಾಮದ ಸರ್ವೆ ನಂಬರ್ 115/2 ರ ಜಮೀನಿಗೆ ಈ ಹಿಂದೆ ಹಲವು ಬಾರಿ ನಮ್ಮ ಜಮೀನಿಗೆ ಯಾರೋ ಅಪರಿಚಿತರು ಉದ್ದೇಶಪೂರ್ವಕವಾಗಿ ಅತಿಕ್ರಮವಾಗಿ ಪ್ರವೇಶ ಮಾಡುತ್ತಿದ್ದು, ನಾನು ಕೆಲವರ ಸಲಹೆಯಂತೆ ಈ ಜಮೀನಿನಲ್ಲಿ ಸಿಸಿ ಕ್ಯಾಮೆರಾವನ್ನು ಅಳವಡಿಸಿದೆ. ಮೇ.8 ರಂದು ಸಂಜೆ 5.30 ಗಂಟೆಯ ಸಮಯದಲ್ಲಿ ಯಾರೋ ಅಪರಿಚಿತ ನಮ್ಮ ಜಮೀನಿಗೆ ಅತಿಕ್ರಮ ಪ್ರವೇಶ ಮಾಡಿ ನಮ್ಮ ಜಮೀನಿನಲ್ಲಿ ನಾನು ಅಳವಡಿಸಿದ್ದ ಸಿಸಿ ಕ್ಯಾಮೆರಾವನ್ನು ತೆಗೆದುಕೊಂಡು ಹೋಗಿದ್ದಾರೆ. ಈ ಕುರಿತು ಮೇ.12 ರಂದು ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ ಎಂದರು.
ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…
ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…