ಜಮೀನು ವಿವಾದ ಹಿನ್ನೆಲೆ ಒಂದೇ ಕುಟುಂಬದ ಸದಸ್ಯರ ನಡುವಿನ ಜಗಳ ವಿಕೋಪಕ್ಕೆ ತಿರುಗಿದ್ದು, ಮೃತಪಟ್ಟ ವ್ಯಕ್ತಿಯ ಅಂತ್ಯಸಂಸ್ಕಾರವನ್ನೂ ನಡೆಸಲು ಬಿಡದೆ ಶವವು ಮೂರು ದಿನಗಳಿಂದ ಮನೆಯ ಮುಂದೆ ಇದ್ದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಾರೆಪ್ಪ ಮತ್ತು ನಾರಾಯಣಮ್ಮ ಎಂಬವರ ಕುಟುಂಬಗಳ ನಡುವೆ ಜಮೀನಿನ ವಿಷಯದಲ್ಲಿ ದೀರ್ಘಕಾಲದಿಂದ ವಿವಾದ ನಡೆಯುತ್ತಿದೆ. ಈ ವಿವಾದವು ನ್ಯಾಯ ಪಂಚಾಯಿತಿ, ಪೊಲೀಸ್ ರಾಜಿ ಸಂಧಾನಗಳಿಗೂ ಬಗ್ಗದೆ ಕೋರ್ಟ್ ಮೆಟ್ಟಿಲೇರಿದೆ. ಈ ಮಧ್ಯೆ, ನಾರಾಯಣಮ್ಮನವರ 50 ವರ್ಷದ ಮಗ ಕೋದಂಡಪ್ಪ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಕೋದಂಡಪ್ಪನ ಕುಟುಂಬಸ್ಥರು ವಿವಾದಕ್ಕೆ ಸಂಬಂಧಿಸಿದ ಜಮೀನಿನಲ್ಲೇ ಅಂತ್ಯಸಂಸ್ಕಾರ ನಡೆಸಲು ಮುಂದಾಗಿದ್ದಾರೆ. ಆದರೆ, ನಾರೆಪ್ಪನ ಕುಟುಂಬಸ್ಥರು ಜಮೀನಿನ ಕೇಸ್ ಇತ್ಯರ್ಥವಾಗುವವರೆಗೆ ಈ ಜಮೀನಿನಲ್ಲಿ ಅಂತ್ಯಸಂಸ್ಕಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ತಡೆಯೊಡ್ಡಿದ್ದಾರೆ.
ಕೋದಂಡಪ್ಪನ ಕುಟುಂಬಸ್ಥರು, ನಾವು ಈ ಜಮೀನಿನಲ್ಲೇ ಅಂತ್ಯಸಂಸ್ಕಾರ ಮಾಡಿಯೇ ತೀರುತ್ತೇವೆ, ಎಂದು ಪಟ್ಟು ಹಿಡಿದರೆ, ನಾರೆಪ್ಪನ ಕುಟುಂಬಸ್ಥರು, ನೀವು ಹೇಗೆ ಮಾಡುತ್ತೀರೋ ಮಾಡಿ ನೋಡಿ, ಎಂದು ತಿರುಗಿ ಬೀಗಿದ್ದಾರೆ.
ಈ ಜಗಳದ ನಡುವೆ, ಕೋದಂಡಪ್ಪನ ಮೃತದೇಹವು ಮೂರು ದಿನಗಳಿಂದ ಮನೆಯ ಮುಂದೆ ಅಂತ್ಯಸಂಸ್ಕಾರವಿಲ್ಲದೆ ಕೊಳೆಯುವ ಪರಿಸ್ಥಿತಿ ಎದುರಾಗಿತ್ತು.
ಗ್ರಾಮಸ್ಥರು ಈ ವಿವಾದವನ್ನು ಶಾಂತಿಯುತವಾಗಿ ಬಗೆಹರಿಸಿ, ಮೃತ ಕೋದಂಡಪ್ಪನ ಶವಕ್ಕೆ ಗೌರವಯುತವಾಗಿ ಅಂತ್ಯಸಂಸ್ಕಾರ ನಡೆಸಲು ಅನುವು ಮಾಡಿಕೊಡಬೇಕೆಂದು ಒತ್ತಾಯಿಸಿದ್ದಾರೆ.
ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…
ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…
ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…
ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಸ್ವಸ್ತಿಶ್ರೀ ವಿಜಯಾಭ್ಯುದಯ ಶಾಲಿವಾಹನ ಶಕ ವರ್ಷಂಗಳು 1946ಕ್ಕೆ ಸರಿಯಾದ…
ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…
ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…