ಜಮೀನು ವಿವಾದ ಹಿನ್ನೆಲೆ ಒಂದೇ ಕುಟುಂಬದ ಸದಸ್ಯರ ನಡುವಿನ ಜಗಳ ವಿಕೋಪಕ್ಕೆ ತಿರುಗಿದ್ದು, ಮೃತಪಟ್ಟ ವ್ಯಕ್ತಿಯ ಅಂತ್ಯಸಂಸ್ಕಾರವನ್ನೂ ನಡೆಸಲು ಬಿಡದೆ ಶವವು ಮೂರು ದಿನಗಳಿಂದ ಮನೆಯ ಮುಂದೆ ಇದ್ದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಾರೆಪ್ಪ ಮತ್ತು ನಾರಾಯಣಮ್ಮ ಎಂಬವರ ಕುಟುಂಬಗಳ ನಡುವೆ ಜಮೀನಿನ ವಿಷಯದಲ್ಲಿ ದೀರ್ಘಕಾಲದಿಂದ ವಿವಾದ ನಡೆಯುತ್ತಿದೆ. ಈ ವಿವಾದವು ನ್ಯಾಯ ಪಂಚಾಯಿತಿ, ಪೊಲೀಸ್ ರಾಜಿ ಸಂಧಾನಗಳಿಗೂ ಬಗ್ಗದೆ ಕೋರ್ಟ್ ಮೆಟ್ಟಿಲೇರಿದೆ. ಈ ಮಧ್ಯೆ, ನಾರಾಯಣಮ್ಮನವರ 50 ವರ್ಷದ ಮಗ ಕೋದಂಡಪ್ಪ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಕೋದಂಡಪ್ಪನ ಕುಟುಂಬಸ್ಥರು ವಿವಾದಕ್ಕೆ ಸಂಬಂಧಿಸಿದ ಜಮೀನಿನಲ್ಲೇ ಅಂತ್ಯಸಂಸ್ಕಾರ ನಡೆಸಲು ಮುಂದಾಗಿದ್ದಾರೆ. ಆದರೆ, ನಾರೆಪ್ಪನ ಕುಟುಂಬಸ್ಥರು ಜಮೀನಿನ ಕೇಸ್ ಇತ್ಯರ್ಥವಾಗುವವರೆಗೆ ಈ ಜಮೀನಿನಲ್ಲಿ ಅಂತ್ಯಸಂಸ್ಕಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ತಡೆಯೊಡ್ಡಿದ್ದಾರೆ.
ಕೋದಂಡಪ್ಪನ ಕುಟುಂಬಸ್ಥರು, ನಾವು ಈ ಜಮೀನಿನಲ್ಲೇ ಅಂತ್ಯಸಂಸ್ಕಾರ ಮಾಡಿಯೇ ತೀರುತ್ತೇವೆ, ಎಂದು ಪಟ್ಟು ಹಿಡಿದರೆ, ನಾರೆಪ್ಪನ ಕುಟುಂಬಸ್ಥರು, ನೀವು ಹೇಗೆ ಮಾಡುತ್ತೀರೋ ಮಾಡಿ ನೋಡಿ, ಎಂದು ತಿರುಗಿ ಬೀಗಿದ್ದಾರೆ.
ಈ ಜಗಳದ ನಡುವೆ, ಕೋದಂಡಪ್ಪನ ಮೃತದೇಹವು ಮೂರು ದಿನಗಳಿಂದ ಮನೆಯ ಮುಂದೆ ಅಂತ್ಯಸಂಸ್ಕಾರವಿಲ್ಲದೆ ಕೊಳೆಯುವ ಪರಿಸ್ಥಿತಿ ಎದುರಾಗಿತ್ತು.
ಗ್ರಾಮಸ್ಥರು ಈ ವಿವಾದವನ್ನು ಶಾಂತಿಯುತವಾಗಿ ಬಗೆಹರಿಸಿ, ಮೃತ ಕೋದಂಡಪ್ಪನ ಶವಕ್ಕೆ ಗೌರವಯುತವಾಗಿ ಅಂತ್ಯಸಂಸ್ಕಾರ ನಡೆಸಲು ಅನುವು ಮಾಡಿಕೊಡಬೇಕೆಂದು ಒತ್ತಾಯಿಸಿದ್ದಾರೆ.
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…