ಜಮೀನು ವಿವಾದ ಹಿನ್ನೆಲೆ ಒಂದೇ ಕುಟುಂಬದ ಸದಸ್ಯರ ನಡುವಿನ ಜಗಳ ವಿಕೋಪಕ್ಕೆ ತಿರುಗಿದ್ದು, ಮೃತಪಟ್ಟ ವ್ಯಕ್ತಿಯ ಅಂತ್ಯಸಂಸ್ಕಾರವನ್ನೂ ನಡೆಸಲು ಬಿಡದೆ ಶವವು ಮೂರು ದಿನಗಳಿಂದ ಮನೆಯ ಮುಂದೆ ಇದ್ದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಾರೆಪ್ಪ ಮತ್ತು ನಾರಾಯಣಮ್ಮ ಎಂಬವರ ಕುಟುಂಬಗಳ ನಡುವೆ ಜಮೀನಿನ ವಿಷಯದಲ್ಲಿ ದೀರ್ಘಕಾಲದಿಂದ ವಿವಾದ ನಡೆಯುತ್ತಿದೆ. ಈ ವಿವಾದವು ನ್ಯಾಯ ಪಂಚಾಯಿತಿ, ಪೊಲೀಸ್ ರಾಜಿ ಸಂಧಾನಗಳಿಗೂ ಬಗ್ಗದೆ ಕೋರ್ಟ್ ಮೆಟ್ಟಿಲೇರಿದೆ. ಈ ಮಧ್ಯೆ, ನಾರಾಯಣಮ್ಮನವರ 50 ವರ್ಷದ ಮಗ ಕೋದಂಡಪ್ಪ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಕೋದಂಡಪ್ಪನ ಕುಟುಂಬಸ್ಥರು ವಿವಾದಕ್ಕೆ ಸಂಬಂಧಿಸಿದ ಜಮೀನಿನಲ್ಲೇ ಅಂತ್ಯಸಂಸ್ಕಾರ ನಡೆಸಲು ಮುಂದಾಗಿದ್ದಾರೆ. ಆದರೆ, ನಾರೆಪ್ಪನ ಕುಟುಂಬಸ್ಥರು ಜಮೀನಿನ ಕೇಸ್ ಇತ್ಯರ್ಥವಾಗುವವರೆಗೆ ಈ ಜಮೀನಿನಲ್ಲಿ ಅಂತ್ಯಸಂಸ್ಕಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ತಡೆಯೊಡ್ಡಿದ್ದಾರೆ.
ಕೋದಂಡಪ್ಪನ ಕುಟುಂಬಸ್ಥರು, ನಾವು ಈ ಜಮೀನಿನಲ್ಲೇ ಅಂತ್ಯಸಂಸ್ಕಾರ ಮಾಡಿಯೇ ತೀರುತ್ತೇವೆ, ಎಂದು ಪಟ್ಟು ಹಿಡಿದರೆ, ನಾರೆಪ್ಪನ ಕುಟುಂಬಸ್ಥರು, ನೀವು ಹೇಗೆ ಮಾಡುತ್ತೀರೋ ಮಾಡಿ ನೋಡಿ, ಎಂದು ತಿರುಗಿ ಬೀಗಿದ್ದಾರೆ.
ಈ ಜಗಳದ ನಡುವೆ, ಕೋದಂಡಪ್ಪನ ಮೃತದೇಹವು ಮೂರು ದಿನಗಳಿಂದ ಮನೆಯ ಮುಂದೆ ಅಂತ್ಯಸಂಸ್ಕಾರವಿಲ್ಲದೆ ಕೊಳೆಯುವ ಪರಿಸ್ಥಿತಿ ಎದುರಾಗಿತ್ತು.
ಗ್ರಾಮಸ್ಥರು ಈ ವಿವಾದವನ್ನು ಶಾಂತಿಯುತವಾಗಿ ಬಗೆಹರಿಸಿ, ಮೃತ ಕೋದಂಡಪ್ಪನ ಶವಕ್ಕೆ ಗೌರವಯುತವಾಗಿ ಅಂತ್ಯಸಂಸ್ಕಾರ ನಡೆಸಲು ಅನುವು ಮಾಡಿಕೊಡಬೇಕೆಂದು ಒತ್ತಾಯಿಸಿದ್ದಾರೆ.
‘ಪ್ರಜಾಪ್ರಭುತ್ವದಲ್ಲಿ ಜನರೇ ಪ್ರಭುಗಳು. ಅವರು ಕೇಳಿದ ಕೆಲಸ ಮಾಡಿಕೊಡಬೇಕು, ವಿಳಂಬ ಮಾಡಬೇಡಿ’ ಎಂದು ಇಂಧನ ಸಚಿವ ಹಾಗೂ ಸರ್ವಜ್ಞ ನಗರ…
ಅಕ್ರಮವಾಗಿ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದ ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 18 ಲಕ್ಷ ಮೌಲ್ಯದ 1296…
ಹೊಂಗೆ ಮರದಲ್ಲಿ ನೇತಾಡುತ್ತಿರುವ ಸ್ಥಿತಿಯಲ್ಲಿ ತಲೆ ಬುರುಡೆ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಬ್ಯಾಂಕ್ ಸರ್ಕಲ್…
ಸಿದ್ದಾಪುರ: ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯ ಜೋಗಿನ್ ಮಠ ಕ್ರಾಸ್ ಬಳಿ ಜಲ್ಲಿ ತುಂಬಿದ ಲಾರಿಯೊಂದು ರಸ್ತೆಗೆ ಉರುಳಿದ ಪರಿಣಾಮ,…
ದೇವರಹಿಪ್ಪರಗಿ: ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ…
ಬೈಕ್ ನಲ್ಲಿ ಪತ್ನಿಯೊಂದಿಗೆ ಸಂಬಂಧಿಕರ ಮನೆಯ ಸಾವಿಗೆ ತೆರಳುತ್ತಿದ್ದ ಬೈಕ್ ಸವಾರನೊಬ್ಬ ಹೆದ್ದಾರಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ಪೋಲೀಸರನ್ನು ಕಂಡು…