ಜಮೀನು ವಿವಾದ: ಜಮೀನಿನಲ್ಲಿ ಮೃತಪಟ್ಟ ವ್ಯಕ್ತಿಯ ಅಂತ್ಯಸಂಸ್ಕಾರಕ್ಕೆ ಅಡ್ಡಿ: ಮೂರು ದಿನಗಳಿಂದ ಅಂತ್ಯಸಂಸ್ಕಾರವಿಲ್ಲದೇ ಕೊಳೆಯುತ್ತಿರುವ ಶವ

ಜಮೀನು ವಿವಾದ ಹಿನ್ನೆಲೆ ಒಂದೇ ಕುಟುಂಬದ ಸದಸ್ಯರ ನಡುವಿನ ಜಗಳ ವಿಕೋಪಕ್ಕೆ ತಿರುಗಿದ್ದು, ಮೃತಪಟ್ಟ ವ್ಯಕ್ತಿಯ ಅಂತ್ಯಸಂಸ್ಕಾರವನ್ನೂ ನಡೆಸಲು ಬಿಡದೆ ಶವವು ಮೂರು ದಿನಗಳಿಂದ ಮನೆಯ ಮುಂದೆ ಇದ್ದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅರಸನಹಳ್ಳಿ ಗ್ರಾಮದಲ್ಲಿ  ನಡೆದಿದೆ.

ಗ್ರಾಮದ ನಾರೆಪ್ಪ ಮತ್ತು ನಾರಾಯಣಮ್ಮ ಎಂಬವರ ಕುಟುಂಬಗಳ ನಡುವೆ ಜಮೀನಿನ ವಿಷಯದಲ್ಲಿ ದೀರ್ಘಕಾಲದಿಂದ ವಿವಾದ ನಡೆಯುತ್ತಿದೆ. ಈ ವಿವಾದವು ನ್ಯಾಯ ಪಂಚಾಯಿತಿ, ಪೊಲೀಸ್ ರಾಜಿ ಸಂಧಾನಗಳಿಗೂ ಬಗ್ಗದೆ ಕೋರ್ಟ್ ಮೆಟ್ಟಿಲೇರಿದೆ. ಈ ಮಧ್ಯೆ, ನಾರಾಯಣಮ್ಮನವರ 50 ವರ್ಷದ ಮಗ ಕೋದಂಡಪ್ಪ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಕೋದಂಡಪ್ಪನ ಕುಟುಂಬಸ್ಥರು ವಿವಾದಕ್ಕೆ ಸಂಬಂಧಿಸಿದ ಜಮೀನಿನಲ್ಲೇ ಅಂತ್ಯಸಂಸ್ಕಾರ ನಡೆಸಲು ಮುಂದಾಗಿದ್ದಾರೆ. ಆದರೆ, ನಾರೆಪ್ಪನ ಕುಟುಂಬಸ್ಥರು ಜಮೀನಿನ ಕೇಸ್ ಇತ್ಯರ್ಥವಾಗುವವರೆಗೆ ಈ ಜಮೀನಿನಲ್ಲಿ ಅಂತ್ಯಸಂಸ್ಕಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ತಡೆಯೊಡ್ಡಿದ್ದಾರೆ.

ಕೋದಂಡಪ್ಪನ ಕುಟುಂಬಸ್ಥರು, ನಾವು ಈ ಜಮೀನಿನಲ್ಲೇ ಅಂತ್ಯಸಂಸ್ಕಾರ ಮಾಡಿಯೇ ತೀರುತ್ತೇವೆ, ಎಂದು ಪಟ್ಟು ಹಿಡಿದರೆ, ನಾರೆಪ್ಪನ ಕುಟುಂಬಸ್ಥರು, ನೀವು ಹೇಗೆ ಮಾಡುತ್ತೀರೋ ಮಾಡಿ ನೋಡಿ, ಎಂದು ತಿರುಗಿ ಬೀಗಿದ್ದಾರೆ.

ಈ ಜಗಳದ ನಡುವೆ, ಕೋದಂಡಪ್ಪನ ಮೃತದೇಹವು ಮೂರು ದಿನಗಳಿಂದ ಮನೆಯ ಮುಂದೆ ಅಂತ್ಯಸಂಸ್ಕಾರವಿಲ್ಲದೆ ಕೊಳೆಯುವ ಪರಿಸ್ಥಿತಿ‌ ಎದುರಾಗಿತ್ತು.

ಈ ಘಟನೆಯ ಬಗ್ಗೆ ಮಾಹಿತಿ ತಿಳಿದ ಚಿಕ್ಕಬಳ್ಳಾಪುರ ತಹಸೀಲ್ದಾರ್ ಅನಿಲ್ ಯಾದವ್, ಸ್ಥಳಕ್ಕೆ ಭೇಟಿ ನೀಡಿ, ಕುಟುಂಬಸ್ಥರನ್ನು ಮನವೊಲಿಸಲು ಯತ್ನಿಸಿದ್ದಾರೆ. ಆದರೆ, ತಹಸೀಲ್ದಾರರ ಮಾತಿಗೂ ಕಿವಿಗೊಡದ ಕೋದಂಡಪ್ಪನ ಕುಟುಂಬಸ್ಥರು, ನಾವು ಈ ಜಮೀನಿನಲ್ಲೇ ಅಂತ್ಯಸಂಸ್ಕಾರ ನಡೆಸುತ್ತೇವೆ, ಎಂದು ತಮ್ಮ ಪಟ್ಟನ್ನು ಮುಂದುವರೆಸಿದ್ದಾರೆ.

ಗ್ರಾಮಸ್ಥರು ಈ ವಿವಾದವನ್ನು ಶಾಂತಿಯುತವಾಗಿ ಬಗೆಹರಿಸಿ, ಮೃತ ಕೋದಂಡಪ್ಪನ ಶವಕ್ಕೆ ಗೌರವಯುತವಾಗಿ ಅಂತ್ಯಸಂಸ್ಕಾರ ನಡೆಸಲು ಅನುವು ಮಾಡಿಕೊಡಬೇಕೆಂದು ಒತ್ತಾಯಿಸಿದ್ದಾರೆ.

Ramesh Babu

Journalist

Recent Posts

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…

7 hours ago

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

23 hours ago

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಚಿಂತನೆ: ₹184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ ಅನುಮೋದನೆ – ಸಂಸದ ಡಾ.ಕೆ‌ ಸುಧಾಕರ್

ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…

23 hours ago

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

2 days ago

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ: ಉಚಿತ ಆರೋಗ್ಯ ಶಿಬರ ಮತ್ತು ರಕ್ತದಾನ ಶಿಬಿರ ಆಯೋಜನೆ

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…

2 days ago