ಜಮೀನು ವಿವಾದ: ಜಮೀನಿನಲ್ಲಿ ಮೃತಪಟ್ಟ ವ್ಯಕ್ತಿಯ ಅಂತ್ಯಸಂಸ್ಕಾರಕ್ಕೆ ಅಡ್ಡಿ: ಮೂರು ದಿನಗಳಿಂದ ಅಂತ್ಯಸಂಸ್ಕಾರವಿಲ್ಲದೇ ಕೊಳೆಯುತ್ತಿರುವ ಶವ

ಜಮೀನು ವಿವಾದ ಹಿನ್ನೆಲೆ ಒಂದೇ ಕುಟುಂಬದ ಸದಸ್ಯರ ನಡುವಿನ ಜಗಳ ವಿಕೋಪಕ್ಕೆ ತಿರುಗಿದ್ದು, ಮೃತಪಟ್ಟ ವ್ಯಕ್ತಿಯ ಅಂತ್ಯಸಂಸ್ಕಾರವನ್ನೂ ನಡೆಸಲು ಬಿಡದೆ ಶವವು ಮೂರು ದಿನಗಳಿಂದ ಮನೆಯ ಮುಂದೆ ಇದ್ದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅರಸನಹಳ್ಳಿ ಗ್ರಾಮದಲ್ಲಿ  ನಡೆದಿದೆ.

ಗ್ರಾಮದ ನಾರೆಪ್ಪ ಮತ್ತು ನಾರಾಯಣಮ್ಮ ಎಂಬವರ ಕುಟುಂಬಗಳ ನಡುವೆ ಜಮೀನಿನ ವಿಷಯದಲ್ಲಿ ದೀರ್ಘಕಾಲದಿಂದ ವಿವಾದ ನಡೆಯುತ್ತಿದೆ. ಈ ವಿವಾದವು ನ್ಯಾಯ ಪಂಚಾಯಿತಿ, ಪೊಲೀಸ್ ರಾಜಿ ಸಂಧಾನಗಳಿಗೂ ಬಗ್ಗದೆ ಕೋರ್ಟ್ ಮೆಟ್ಟಿಲೇರಿದೆ. ಈ ಮಧ್ಯೆ, ನಾರಾಯಣಮ್ಮನವರ 50 ವರ್ಷದ ಮಗ ಕೋದಂಡಪ್ಪ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಕೋದಂಡಪ್ಪನ ಕುಟುಂಬಸ್ಥರು ವಿವಾದಕ್ಕೆ ಸಂಬಂಧಿಸಿದ ಜಮೀನಿನಲ್ಲೇ ಅಂತ್ಯಸಂಸ್ಕಾರ ನಡೆಸಲು ಮುಂದಾಗಿದ್ದಾರೆ. ಆದರೆ, ನಾರೆಪ್ಪನ ಕುಟುಂಬಸ್ಥರು ಜಮೀನಿನ ಕೇಸ್ ಇತ್ಯರ್ಥವಾಗುವವರೆಗೆ ಈ ಜಮೀನಿನಲ್ಲಿ ಅಂತ್ಯಸಂಸ್ಕಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ತಡೆಯೊಡ್ಡಿದ್ದಾರೆ.

ಕೋದಂಡಪ್ಪನ ಕುಟುಂಬಸ್ಥರು, ನಾವು ಈ ಜಮೀನಿನಲ್ಲೇ ಅಂತ್ಯಸಂಸ್ಕಾರ ಮಾಡಿಯೇ ತೀರುತ್ತೇವೆ, ಎಂದು ಪಟ್ಟು ಹಿಡಿದರೆ, ನಾರೆಪ್ಪನ ಕುಟುಂಬಸ್ಥರು, ನೀವು ಹೇಗೆ ಮಾಡುತ್ತೀರೋ ಮಾಡಿ ನೋಡಿ, ಎಂದು ತಿರುಗಿ ಬೀಗಿದ್ದಾರೆ.

ಈ ಜಗಳದ ನಡುವೆ, ಕೋದಂಡಪ್ಪನ ಮೃತದೇಹವು ಮೂರು ದಿನಗಳಿಂದ ಮನೆಯ ಮುಂದೆ ಅಂತ್ಯಸಂಸ್ಕಾರವಿಲ್ಲದೆ ಕೊಳೆಯುವ ಪರಿಸ್ಥಿತಿ‌ ಎದುರಾಗಿತ್ತು.

ಈ ಘಟನೆಯ ಬಗ್ಗೆ ಮಾಹಿತಿ ತಿಳಿದ ಚಿಕ್ಕಬಳ್ಳಾಪುರ ತಹಸೀಲ್ದಾರ್ ಅನಿಲ್ ಯಾದವ್, ಸ್ಥಳಕ್ಕೆ ಭೇಟಿ ನೀಡಿ, ಕುಟುಂಬಸ್ಥರನ್ನು ಮನವೊಲಿಸಲು ಯತ್ನಿಸಿದ್ದಾರೆ. ಆದರೆ, ತಹಸೀಲ್ದಾರರ ಮಾತಿಗೂ ಕಿವಿಗೊಡದ ಕೋದಂಡಪ್ಪನ ಕುಟುಂಬಸ್ಥರು, ನಾವು ಈ ಜಮೀನಿನಲ್ಲೇ ಅಂತ್ಯಸಂಸ್ಕಾರ ನಡೆಸುತ್ತೇವೆ, ಎಂದು ತಮ್ಮ ಪಟ್ಟನ್ನು ಮುಂದುವರೆಸಿದ್ದಾರೆ.

ಗ್ರಾಮಸ್ಥರು ಈ ವಿವಾದವನ್ನು ಶಾಂತಿಯುತವಾಗಿ ಬಗೆಹರಿಸಿ, ಮೃತ ಕೋದಂಡಪ್ಪನ ಶವಕ್ಕೆ ಗೌರವಯುತವಾಗಿ ಅಂತ್ಯಸಂಸ್ಕಾರ ನಡೆಸಲು ಅನುವು ಮಾಡಿಕೊಡಬೇಕೆಂದು ಒತ್ತಾಯಿಸಿದ್ದಾರೆ.

Ramesh Babu

Journalist

Recent Posts

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

12 hours ago

ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ…..

ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…

14 hours ago

ಖಾಸಗಿ ಬಸ್ ಲಾರಿಗೆ ಡಿಕ್ಕಿ: ಹೊತ್ತಿ ಉರಿದ ಬಸ್: 9 ಮಂದಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಬಸ್ ಒಳಗಡೆಯೇ ಸಜೀವ ದಹನ

ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…

15 hours ago

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

1 day ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

1 day ago