ಜಮೀನು ವಿವಾದ: ಜಮೀನಿನಲ್ಲಿ ಮೃತಪಟ್ಟ ವ್ಯಕ್ತಿಯ ಅಂತ್ಯಸಂಸ್ಕಾರಕ್ಕೆ ಅಡ್ಡಿ: ಮೂರು ದಿನಗಳಿಂದ ಅಂತ್ಯಸಂಸ್ಕಾರವಿಲ್ಲದೇ ಕೊಳೆಯುತ್ತಿರುವ ಶವ

ಜಮೀನು ವಿವಾದ ಹಿನ್ನೆಲೆ ಒಂದೇ ಕುಟುಂಬದ ಸದಸ್ಯರ ನಡುವಿನ ಜಗಳ ವಿಕೋಪಕ್ಕೆ ತಿರುಗಿದ್ದು, ಮೃತಪಟ್ಟ ವ್ಯಕ್ತಿಯ ಅಂತ್ಯಸಂಸ್ಕಾರವನ್ನೂ ನಡೆಸಲು ಬಿಡದೆ ಶವವು ಮೂರು ದಿನಗಳಿಂದ ಮನೆಯ ಮುಂದೆ ಇದ್ದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅರಸನಹಳ್ಳಿ ಗ್ರಾಮದಲ್ಲಿ  ನಡೆದಿದೆ.

ಗ್ರಾಮದ ನಾರೆಪ್ಪ ಮತ್ತು ನಾರಾಯಣಮ್ಮ ಎಂಬವರ ಕುಟುಂಬಗಳ ನಡುವೆ ಜಮೀನಿನ ವಿಷಯದಲ್ಲಿ ದೀರ್ಘಕಾಲದಿಂದ ವಿವಾದ ನಡೆಯುತ್ತಿದೆ. ಈ ವಿವಾದವು ನ್ಯಾಯ ಪಂಚಾಯಿತಿ, ಪೊಲೀಸ್ ರಾಜಿ ಸಂಧಾನಗಳಿಗೂ ಬಗ್ಗದೆ ಕೋರ್ಟ್ ಮೆಟ್ಟಿಲೇರಿದೆ. ಈ ಮಧ್ಯೆ, ನಾರಾಯಣಮ್ಮನವರ 50 ವರ್ಷದ ಮಗ ಕೋದಂಡಪ್ಪ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಕೋದಂಡಪ್ಪನ ಕುಟುಂಬಸ್ಥರು ವಿವಾದಕ್ಕೆ ಸಂಬಂಧಿಸಿದ ಜಮೀನಿನಲ್ಲೇ ಅಂತ್ಯಸಂಸ್ಕಾರ ನಡೆಸಲು ಮುಂದಾಗಿದ್ದಾರೆ. ಆದರೆ, ನಾರೆಪ್ಪನ ಕುಟುಂಬಸ್ಥರು ಜಮೀನಿನ ಕೇಸ್ ಇತ್ಯರ್ಥವಾಗುವವರೆಗೆ ಈ ಜಮೀನಿನಲ್ಲಿ ಅಂತ್ಯಸಂಸ್ಕಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ತಡೆಯೊಡ್ಡಿದ್ದಾರೆ.

ಕೋದಂಡಪ್ಪನ ಕುಟುಂಬಸ್ಥರು, ನಾವು ಈ ಜಮೀನಿನಲ್ಲೇ ಅಂತ್ಯಸಂಸ್ಕಾರ ಮಾಡಿಯೇ ತೀರುತ್ತೇವೆ, ಎಂದು ಪಟ್ಟು ಹಿಡಿದರೆ, ನಾರೆಪ್ಪನ ಕುಟುಂಬಸ್ಥರು, ನೀವು ಹೇಗೆ ಮಾಡುತ್ತೀರೋ ಮಾಡಿ ನೋಡಿ, ಎಂದು ತಿರುಗಿ ಬೀಗಿದ್ದಾರೆ.

ಈ ಜಗಳದ ನಡುವೆ, ಕೋದಂಡಪ್ಪನ ಮೃತದೇಹವು ಮೂರು ದಿನಗಳಿಂದ ಮನೆಯ ಮುಂದೆ ಅಂತ್ಯಸಂಸ್ಕಾರವಿಲ್ಲದೆ ಕೊಳೆಯುವ ಪರಿಸ್ಥಿತಿ‌ ಎದುರಾಗಿತ್ತು.

ಈ ಘಟನೆಯ ಬಗ್ಗೆ ಮಾಹಿತಿ ತಿಳಿದ ಚಿಕ್ಕಬಳ್ಳಾಪುರ ತಹಸೀಲ್ದಾರ್ ಅನಿಲ್ ಯಾದವ್, ಸ್ಥಳಕ್ಕೆ ಭೇಟಿ ನೀಡಿ, ಕುಟುಂಬಸ್ಥರನ್ನು ಮನವೊಲಿಸಲು ಯತ್ನಿಸಿದ್ದಾರೆ. ಆದರೆ, ತಹಸೀಲ್ದಾರರ ಮಾತಿಗೂ ಕಿವಿಗೊಡದ ಕೋದಂಡಪ್ಪನ ಕುಟುಂಬಸ್ಥರು, ನಾವು ಈ ಜಮೀನಿನಲ್ಲೇ ಅಂತ್ಯಸಂಸ್ಕಾರ ನಡೆಸುತ್ತೇವೆ, ಎಂದು ತಮ್ಮ ಪಟ್ಟನ್ನು ಮುಂದುವರೆಸಿದ್ದಾರೆ.

ಗ್ರಾಮಸ್ಥರು ಈ ವಿವಾದವನ್ನು ಶಾಂತಿಯುತವಾಗಿ ಬಗೆಹರಿಸಿ, ಮೃತ ಕೋದಂಡಪ್ಪನ ಶವಕ್ಕೆ ಗೌರವಯುತವಾಗಿ ಅಂತ್ಯಸಂಸ್ಕಾರ ನಡೆಸಲು ಅನುವು ಮಾಡಿಕೊಡಬೇಕೆಂದು ಒತ್ತಾಯಿಸಿದ್ದಾರೆ.

Ramesh Babu

Journalist

Recent Posts

ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ: ಪಿಡಿಒ ಗೌರಮ್ಮ

ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…

11 hours ago

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ : ಪಿಡಿಒ ರಂಜಿತ

ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

11 hours ago

ಹೊರಗುತ್ತಿಗೆ ನೇಮಕಾತಿಯಲ್ಲೂ ಎಸ್‌ಸಿ, ಎಸ್‌ಟಿಗೆ ಮೀಸಲಾತಿ ಕಡ್ಡಾಯ- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಟ್ಟಿರುವ SCSP-TSP ಅನುದಾನವನ್ನು ಸಮರ್ಪಕವಾಗಿ ಬಳಸದ ಇಲಾಖೆಗಳ ಮುಂದಿನ ಹಣಕಾಸು…

11 hours ago

ಆತ್ರೇಯ ಆಯುರ್ವೇದ ಕಾಲೇಜಿಗೆ ಬೀಗ; 400 ವಿದ್ಯಾರ್ಥಿಗಳ ಭವಿಷ್ಯ ಅತಂತ್ರ: ಪರ್ಯಾಯ ವ್ಯವಸ್ಥೆಗೆ ಆಗ್ರಹಿಸಿ ವಿದ್ಯಾರ್ಥಿಗಳು, ಪೋಷಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ

  ದೊಡ್ಡಬಳ್ಳಾಪುರ: ತಾಲೂಕಿನ ಕೋಡಿಗೆಹಳ್ಳಿಯಲ್ಲಿರುವ ಆತ್ರೇಯ ಆಯುರ್ವೇದ ಕಾಲೇಜು ಆಡಳಿತ ಮಂಡಳಿಯು ಬ್ಯಾಂಕ್ ಸಾಲ ಮರುಪಾವತಿಸದ ಹಿನ್ನೆಲೆಯಲ್ಲಿ ಕಾಲೇಜಿಗೆ ಬೀಗ…

11 hours ago

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಆದೇಶ ಅಸಂಬದ್ಧ: ಸುಪ್ರೀಂಕೋರ್ಟ್‌ ಮೆಟ್ಟಿಲೇರಲು ಸರ್ಕಾರದ ಚಿಂತನೆ – ಸಚಿವ ಚಲುವರಾಯಸ್ವಾಮಿ

ತಮಿಳುನಾಡಿಗೆ ನಿತ್ಯ 6 ಸಾವಿರ ಕ್ಯೂಸೆಕ್ಸ್ ಕಾವೇರಿ ನೀರು ಹರಿಸುವಂತೆ CWRC ನೀಡಿರುವ ಆದೇಶ ಅಸಂಬದ್ಧವಾಗಿದ್ದು, ಅತ್ಯಂತ ನೋವು ಹಾಗೂ…

16 hours ago

ಮೋರಿ ಬಳಿ ತ್ಯಾಜ್ಯ ರಾಶಿ; ದುರ್ವಾಸನೆ, ಸೊಳ್ಳೆ ಕಾಟಕ್ಕೆ ವಿನಾಯಕನಗರ ನಿವಾಸಿಗಳ ಪರದಾಟ

ದೊಡ್ಡಬಳ್ಳಾಪುರ: ನಗರದ ವಿನಾಯಕನಗರದ ಸರ್ಕಾರಿ ಪ್ರಾಥಮಿಕ ಶಾಲೆ ಸಮೀಪದಲ್ಲಿರುವ ರಾಜಕಾಲುವೆಗೆ ಅಡ್ಡಲಾಗಿ ನಿರ್ಮಿಸಿರುವ ಮೋರಿ ಬಳಿ ತ್ಯಾಜ್ಯ ರಾಶಿ ಬಿದ್ದಿದ್ದು,…

19 hours ago