ಜಮೀನು ವಿವಾದ ಹಿನ್ನೆಲೆ ಒಂದೇ ಕುಟುಂಬದ ಸದಸ್ಯರ ನಡುವಿನ ಜಗಳ ವಿಕೋಪಕ್ಕೆ ತಿರುಗಿದ್ದು, ಮೃತಪಟ್ಟ ವ್ಯಕ್ತಿಯ ಅಂತ್ಯಸಂಸ್ಕಾರವನ್ನೂ ನಡೆಸಲು ಬಿಡದೆ ಶವವು ಮೂರು ದಿನಗಳಿಂದ ಮನೆಯ ಮುಂದೆ ಇದ್ದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಾರೆಪ್ಪ ಮತ್ತು ನಾರಾಯಣಮ್ಮ ಎಂಬವರ ಕುಟುಂಬಗಳ ನಡುವೆ ಜಮೀನಿನ ವಿಷಯದಲ್ಲಿ ದೀರ್ಘಕಾಲದಿಂದ ವಿವಾದ ನಡೆಯುತ್ತಿದೆ. ಈ ವಿವಾದವು ನ್ಯಾಯ ಪಂಚಾಯಿತಿ, ಪೊಲೀಸ್ ರಾಜಿ ಸಂಧಾನಗಳಿಗೂ ಬಗ್ಗದೆ ಕೋರ್ಟ್ ಮೆಟ್ಟಿಲೇರಿದೆ. ಈ ಮಧ್ಯೆ, ನಾರಾಯಣಮ್ಮನವರ 50 ವರ್ಷದ ಮಗ ಕೋದಂಡಪ್ಪ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಕೋದಂಡಪ್ಪನ ಕುಟುಂಬಸ್ಥರು ವಿವಾದಕ್ಕೆ ಸಂಬಂಧಿಸಿದ ಜಮೀನಿನಲ್ಲೇ ಅಂತ್ಯಸಂಸ್ಕಾರ ನಡೆಸಲು ಮುಂದಾಗಿದ್ದಾರೆ. ಆದರೆ, ನಾರೆಪ್ಪನ ಕುಟುಂಬಸ್ಥರು ಜಮೀನಿನ ಕೇಸ್ ಇತ್ಯರ್ಥವಾಗುವವರೆಗೆ ಈ ಜಮೀನಿನಲ್ಲಿ ಅಂತ್ಯಸಂಸ್ಕಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ತಡೆಯೊಡ್ಡಿದ್ದಾರೆ.
ಕೋದಂಡಪ್ಪನ ಕುಟುಂಬಸ್ಥರು, ನಾವು ಈ ಜಮೀನಿನಲ್ಲೇ ಅಂತ್ಯಸಂಸ್ಕಾರ ಮಾಡಿಯೇ ತೀರುತ್ತೇವೆ, ಎಂದು ಪಟ್ಟು ಹಿಡಿದರೆ, ನಾರೆಪ್ಪನ ಕುಟುಂಬಸ್ಥರು, ನೀವು ಹೇಗೆ ಮಾಡುತ್ತೀರೋ ಮಾಡಿ ನೋಡಿ, ಎಂದು ತಿರುಗಿ ಬೀಗಿದ್ದಾರೆ.
ಈ ಜಗಳದ ನಡುವೆ, ಕೋದಂಡಪ್ಪನ ಮೃತದೇಹವು ಮೂರು ದಿನಗಳಿಂದ ಮನೆಯ ಮುಂದೆ ಅಂತ್ಯಸಂಸ್ಕಾರವಿಲ್ಲದೆ ಕೊಳೆಯುವ ಪರಿಸ್ಥಿತಿ ಎದುರಾಗಿತ್ತು.
ಗ್ರಾಮಸ್ಥರು ಈ ವಿವಾದವನ್ನು ಶಾಂತಿಯುತವಾಗಿ ಬಗೆಹರಿಸಿ, ಮೃತ ಕೋದಂಡಪ್ಪನ ಶವಕ್ಕೆ ಗೌರವಯುತವಾಗಿ ಅಂತ್ಯಸಂಸ್ಕಾರ ನಡೆಸಲು ಅನುವು ಮಾಡಿಕೊಡಬೇಕೆಂದು ಒತ್ತಾಯಿಸಿದ್ದಾರೆ.
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…