ಜಮೀನು ವಿವಾದ: ಜಮೀನಿನಲ್ಲಿ ಮೃತಪಟ್ಟ ವ್ಯಕ್ತಿಯ ಅಂತ್ಯಸಂಸ್ಕಾರಕ್ಕೆ ಅಡ್ಡಿ: ಮೂರು ದಿನಗಳಿಂದ ಅಂತ್ಯಸಂಸ್ಕಾರವಿಲ್ಲದೇ ಕೊಳೆಯುತ್ತಿರುವ ಶವ

ಜಮೀನು ವಿವಾದ ಹಿನ್ನೆಲೆ ಒಂದೇ ಕುಟುಂಬದ ಸದಸ್ಯರ ನಡುವಿನ ಜಗಳ ವಿಕೋಪಕ್ಕೆ ತಿರುಗಿದ್ದು, ಮೃತಪಟ್ಟ ವ್ಯಕ್ತಿಯ ಅಂತ್ಯಸಂಸ್ಕಾರವನ್ನೂ ನಡೆಸಲು ಬಿಡದೆ ಶವವು ಮೂರು ದಿನಗಳಿಂದ ಮನೆಯ ಮುಂದೆ ಇದ್ದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅರಸನಹಳ್ಳಿ ಗ್ರಾಮದಲ್ಲಿ  ನಡೆದಿದೆ.

ಗ್ರಾಮದ ನಾರೆಪ್ಪ ಮತ್ತು ನಾರಾಯಣಮ್ಮ ಎಂಬವರ ಕುಟುಂಬಗಳ ನಡುವೆ ಜಮೀನಿನ ವಿಷಯದಲ್ಲಿ ದೀರ್ಘಕಾಲದಿಂದ ವಿವಾದ ನಡೆಯುತ್ತಿದೆ. ಈ ವಿವಾದವು ನ್ಯಾಯ ಪಂಚಾಯಿತಿ, ಪೊಲೀಸ್ ರಾಜಿ ಸಂಧಾನಗಳಿಗೂ ಬಗ್ಗದೆ ಕೋರ್ಟ್ ಮೆಟ್ಟಿಲೇರಿದೆ. ಈ ಮಧ್ಯೆ, ನಾರಾಯಣಮ್ಮನವರ 50 ವರ್ಷದ ಮಗ ಕೋದಂಡಪ್ಪ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಕೋದಂಡಪ್ಪನ ಕುಟುಂಬಸ್ಥರು ವಿವಾದಕ್ಕೆ ಸಂಬಂಧಿಸಿದ ಜಮೀನಿನಲ್ಲೇ ಅಂತ್ಯಸಂಸ್ಕಾರ ನಡೆಸಲು ಮುಂದಾಗಿದ್ದಾರೆ. ಆದರೆ, ನಾರೆಪ್ಪನ ಕುಟುಂಬಸ್ಥರು ಜಮೀನಿನ ಕೇಸ್ ಇತ್ಯರ್ಥವಾಗುವವರೆಗೆ ಈ ಜಮೀನಿನಲ್ಲಿ ಅಂತ್ಯಸಂಸ್ಕಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ತಡೆಯೊಡ್ಡಿದ್ದಾರೆ.

ಕೋದಂಡಪ್ಪನ ಕುಟುಂಬಸ್ಥರು, ನಾವು ಈ ಜಮೀನಿನಲ್ಲೇ ಅಂತ್ಯಸಂಸ್ಕಾರ ಮಾಡಿಯೇ ತೀರುತ್ತೇವೆ, ಎಂದು ಪಟ್ಟು ಹಿಡಿದರೆ, ನಾರೆಪ್ಪನ ಕುಟುಂಬಸ್ಥರು, ನೀವು ಹೇಗೆ ಮಾಡುತ್ತೀರೋ ಮಾಡಿ ನೋಡಿ, ಎಂದು ತಿರುಗಿ ಬೀಗಿದ್ದಾರೆ.

ಈ ಜಗಳದ ನಡುವೆ, ಕೋದಂಡಪ್ಪನ ಮೃತದೇಹವು ಮೂರು ದಿನಗಳಿಂದ ಮನೆಯ ಮುಂದೆ ಅಂತ್ಯಸಂಸ್ಕಾರವಿಲ್ಲದೆ ಕೊಳೆಯುವ ಪರಿಸ್ಥಿತಿ‌ ಎದುರಾಗಿತ್ತು.

ಈ ಘಟನೆಯ ಬಗ್ಗೆ ಮಾಹಿತಿ ತಿಳಿದ ಚಿಕ್ಕಬಳ್ಳಾಪುರ ತಹಸೀಲ್ದಾರ್ ಅನಿಲ್ ಯಾದವ್, ಸ್ಥಳಕ್ಕೆ ಭೇಟಿ ನೀಡಿ, ಕುಟುಂಬಸ್ಥರನ್ನು ಮನವೊಲಿಸಲು ಯತ್ನಿಸಿದ್ದಾರೆ. ಆದರೆ, ತಹಸೀಲ್ದಾರರ ಮಾತಿಗೂ ಕಿವಿಗೊಡದ ಕೋದಂಡಪ್ಪನ ಕುಟುಂಬಸ್ಥರು, ನಾವು ಈ ಜಮೀನಿನಲ್ಲೇ ಅಂತ್ಯಸಂಸ್ಕಾರ ನಡೆಸುತ್ತೇವೆ, ಎಂದು ತಮ್ಮ ಪಟ್ಟನ್ನು ಮುಂದುವರೆಸಿದ್ದಾರೆ.

ಗ್ರಾಮಸ್ಥರು ಈ ವಿವಾದವನ್ನು ಶಾಂತಿಯುತವಾಗಿ ಬಗೆಹರಿಸಿ, ಮೃತ ಕೋದಂಡಪ್ಪನ ಶವಕ್ಕೆ ಗೌರವಯುತವಾಗಿ ಅಂತ್ಯಸಂಸ್ಕಾರ ನಡೆಸಲು ಅನುವು ಮಾಡಿಕೊಡಬೇಕೆಂದು ಒತ್ತಾಯಿಸಿದ್ದಾರೆ.

Ramesh Babu

Journalist

Recent Posts

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

4 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

4 days ago