ಜಮೀನು ವಿವಾದ ಹಿನ್ನೆಲೆ ಒಂದೇ ಕುಟುಂಬದ ಸದಸ್ಯರ ನಡುವಿನ ಜಗಳ ವಿಕೋಪಕ್ಕೆ ತಿರುಗಿದ್ದು, ಮೃತಪಟ್ಟ ವ್ಯಕ್ತಿಯ ಅಂತ್ಯಸಂಸ್ಕಾರವನ್ನೂ ನಡೆಸಲು ಬಿಡದೆ ಶವವು ಮೂರು ದಿನಗಳಿಂದ ಮನೆಯ ಮುಂದೆ ಇದ್ದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಾರೆಪ್ಪ ಮತ್ತು ನಾರಾಯಣಮ್ಮ ಎಂಬವರ ಕುಟುಂಬಗಳ ನಡುವೆ ಜಮೀನಿನ ವಿಷಯದಲ್ಲಿ ದೀರ್ಘಕಾಲದಿಂದ ವಿವಾದ ನಡೆಯುತ್ತಿದೆ. ಈ ವಿವಾದವು ನ್ಯಾಯ ಪಂಚಾಯಿತಿ, ಪೊಲೀಸ್ ರಾಜಿ ಸಂಧಾನಗಳಿಗೂ ಬಗ್ಗದೆ ಕೋರ್ಟ್ ಮೆಟ್ಟಿಲೇರಿದೆ. ಈ ಮಧ್ಯೆ, ನಾರಾಯಣಮ್ಮನವರ 50 ವರ್ಷದ ಮಗ ಕೋದಂಡಪ್ಪ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಕೋದಂಡಪ್ಪನ ಕುಟುಂಬಸ್ಥರು ವಿವಾದಕ್ಕೆ ಸಂಬಂಧಿಸಿದ ಜಮೀನಿನಲ್ಲೇ ಅಂತ್ಯಸಂಸ್ಕಾರ ನಡೆಸಲು ಮುಂದಾಗಿದ್ದಾರೆ. ಆದರೆ, ನಾರೆಪ್ಪನ ಕುಟುಂಬಸ್ಥರು ಜಮೀನಿನ ಕೇಸ್ ಇತ್ಯರ್ಥವಾಗುವವರೆಗೆ ಈ ಜಮೀನಿನಲ್ಲಿ ಅಂತ್ಯಸಂಸ್ಕಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ತಡೆಯೊಡ್ಡಿದ್ದಾರೆ.
ಕೋದಂಡಪ್ಪನ ಕುಟುಂಬಸ್ಥರು, ನಾವು ಈ ಜಮೀನಿನಲ್ಲೇ ಅಂತ್ಯಸಂಸ್ಕಾರ ಮಾಡಿಯೇ ತೀರುತ್ತೇವೆ, ಎಂದು ಪಟ್ಟು ಹಿಡಿದರೆ, ನಾರೆಪ್ಪನ ಕುಟುಂಬಸ್ಥರು, ನೀವು ಹೇಗೆ ಮಾಡುತ್ತೀರೋ ಮಾಡಿ ನೋಡಿ, ಎಂದು ತಿರುಗಿ ಬೀಗಿದ್ದಾರೆ.
ಈ ಜಗಳದ ನಡುವೆ, ಕೋದಂಡಪ್ಪನ ಮೃತದೇಹವು ಮೂರು ದಿನಗಳಿಂದ ಮನೆಯ ಮುಂದೆ ಅಂತ್ಯಸಂಸ್ಕಾರವಿಲ್ಲದೆ ಕೊಳೆಯುವ ಪರಿಸ್ಥಿತಿ ಎದುರಾಗಿತ್ತು.
ಗ್ರಾಮಸ್ಥರು ಈ ವಿವಾದವನ್ನು ಶಾಂತಿಯುತವಾಗಿ ಬಗೆಹರಿಸಿ, ಮೃತ ಕೋದಂಡಪ್ಪನ ಶವಕ್ಕೆ ಗೌರವಯುತವಾಗಿ ಅಂತ್ಯಸಂಸ್ಕಾರ ನಡೆಸಲು ಅನುವು ಮಾಡಿಕೊಡಬೇಕೆಂದು ಒತ್ತಾಯಿಸಿದ್ದಾರೆ.
ನಾಗರಿಕರಿಗೆ ಇನ್ನಷ್ಟು ಹತ್ತಿರದಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಇ-ಆಡಳಿತ ಇಲಾಖೆಯ…
Das Schreiben einer Facharbeit stellt für viele Schüler und Studenten eine große Herausforderung dar. Der…
ಏಪ್ರಿಲ್ ಧಮಾಕಾ....... ಕನ್ನಡ ಸಿನಿಮಾದ ಡಾಕ್ಟರ್ ರಾಜಕುಮಾರ್ ಏಪ್ರಿಲ್ 24, ಇಂಗ್ಲೀಷ್ ಸಾಹಿತ್ಯದ ವಿಲಿಯಂ ಶೇಕ್ಸ್ಪಿಯರ್ ಏಪ್ರಿಲ್ 23, ವಿಶ್ವ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…
ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…
ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…