ಜಮೀನು ವಿವಾದ ಹಿನ್ನೆಲೆ ಒಂದೇ ಕುಟುಂಬದ ಸದಸ್ಯರ ನಡುವಿನ ಜಗಳ ವಿಕೋಪಕ್ಕೆ ತಿರುಗಿದ್ದು, ಮೃತಪಟ್ಟ ವ್ಯಕ್ತಿಯ ಅಂತ್ಯಸಂಸ್ಕಾರವನ್ನೂ ನಡೆಸಲು ಬಿಡದೆ ಶವವು ಮೂರು ದಿನಗಳಿಂದ ಮನೆಯ ಮುಂದೆ ಇದ್ದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಾರೆಪ್ಪ ಮತ್ತು ನಾರಾಯಣಮ್ಮ ಎಂಬವರ ಕುಟುಂಬಗಳ ನಡುವೆ ಜಮೀನಿನ ವಿಷಯದಲ್ಲಿ ದೀರ್ಘಕಾಲದಿಂದ ವಿವಾದ ನಡೆಯುತ್ತಿದೆ. ಈ ವಿವಾದವು ನ್ಯಾಯ ಪಂಚಾಯಿತಿ, ಪೊಲೀಸ್ ರಾಜಿ ಸಂಧಾನಗಳಿಗೂ ಬಗ್ಗದೆ ಕೋರ್ಟ್ ಮೆಟ್ಟಿಲೇರಿದೆ. ಈ ಮಧ್ಯೆ, ನಾರಾಯಣಮ್ಮನವರ 50 ವರ್ಷದ ಮಗ ಕೋದಂಡಪ್ಪ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಕೋದಂಡಪ್ಪನ ಕುಟುಂಬಸ್ಥರು ವಿವಾದಕ್ಕೆ ಸಂಬಂಧಿಸಿದ ಜಮೀನಿನಲ್ಲೇ ಅಂತ್ಯಸಂಸ್ಕಾರ ನಡೆಸಲು ಮುಂದಾಗಿದ್ದಾರೆ. ಆದರೆ, ನಾರೆಪ್ಪನ ಕುಟುಂಬಸ್ಥರು ಜಮೀನಿನ ಕೇಸ್ ಇತ್ಯರ್ಥವಾಗುವವರೆಗೆ ಈ ಜಮೀನಿನಲ್ಲಿ ಅಂತ್ಯಸಂಸ್ಕಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ತಡೆಯೊಡ್ಡಿದ್ದಾರೆ.
ಕೋದಂಡಪ್ಪನ ಕುಟುಂಬಸ್ಥರು, ನಾವು ಈ ಜಮೀನಿನಲ್ಲೇ ಅಂತ್ಯಸಂಸ್ಕಾರ ಮಾಡಿಯೇ ತೀರುತ್ತೇವೆ, ಎಂದು ಪಟ್ಟು ಹಿಡಿದರೆ, ನಾರೆಪ್ಪನ ಕುಟುಂಬಸ್ಥರು, ನೀವು ಹೇಗೆ ಮಾಡುತ್ತೀರೋ ಮಾಡಿ ನೋಡಿ, ಎಂದು ತಿರುಗಿ ಬೀಗಿದ್ದಾರೆ.
ಈ ಜಗಳದ ನಡುವೆ, ಕೋದಂಡಪ್ಪನ ಮೃತದೇಹವು ಮೂರು ದಿನಗಳಿಂದ ಮನೆಯ ಮುಂದೆ ಅಂತ್ಯಸಂಸ್ಕಾರವಿಲ್ಲದೆ ಕೊಳೆಯುವ ಪರಿಸ್ಥಿತಿ ಎದುರಾಗಿತ್ತು.
ಗ್ರಾಮಸ್ಥರು ಈ ವಿವಾದವನ್ನು ಶಾಂತಿಯುತವಾಗಿ ಬಗೆಹರಿಸಿ, ಮೃತ ಕೋದಂಡಪ್ಪನ ಶವಕ್ಕೆ ಗೌರವಯುತವಾಗಿ ಅಂತ್ಯಸಂಸ್ಕಾರ ನಡೆಸಲು ಅನುವು ಮಾಡಿಕೊಡಬೇಕೆಂದು ಒತ್ತಾಯಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…
ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…
ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…
ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…