ಚಿಕ್ಕಬಳ್ಳಾಪುರ : ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆಯ ಗಂಡನ ಮೇಲೆ ಮಚ್ಚಿನಿಂದ ದಾಳಿ ನಡೆಸಿ ಬರ್ಬರ ಕೊಲೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲ್ಲೂಕಿನ ಚೋಳಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗುಂಡ್ಲಕೊತ್ತೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಗಂಗರತ್ನಮ್ಮ ಪತಿ 56 ವರ್ಷದ ರಾಮಕೃಷ್ಣಪ್ಪ ಕೊಲೆಯಾದ ವ್ಯಕ್ತಿಯಾಗಿದ್ದು, ಇಂದು ಬೆಳಗ್ಗೆ ತೋಟದ ಮನೆಯಿಂದ ಚೋಳಶೆಟ್ಟಿಹಳ್ಳಿ ಗ್ರಾಮದ ಹಾಲಿನ ಡೇರಿಯಿಂದ ಹಾಲು ತರಲು ಬಂದಿದ್ದ ವೇಳೆ ಆತನ ಅಣ್ಣನ ಮಗ ನಾಗರಾಜ್ ಏಕಾಏಕಿ ಮಚ್ಚಿನಿಂದ ದಾಳಿ ನಡೆಸಿ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದಾನೆ. ತೀವ್ರ ಗಾಯಗೊಂಡ ರಾಮಕೃಷ್ಣಪ್ಪ ರಕ್ತದ ಮಡುವಿನಲ್ಲಿ ಸ್ಥಳದಲ್ಲೇ ಬಿದ್ದು ಪ್ರಾಣ ಬಿಟ್ಟಿದ್ದಾನೆ ಎನ್ನಲಾಗಿದೆ.
ಘಟನೆಯ ನಂತರ ಆರೋಪಿ ನಾಗರಾಜ್ ಪರಾರಿಯಾಗಿದ್ದಾನೆ. ಇನ್ನು ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ಎಸ್ಪಿ ಡಿ.ಎಲ್.ನಾಗೇಶ್, ಗೌರಿಬಿದನೂರು ವೃತ್ತ ನಿರೀಕ್ಷಕ ಸತ್ಯನಾರಾಯಣ ಸೇರಿದಂತೆ ಗೌರಿಬಿದನೂರು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸ್ಥಳದಲ್ಲಿ ಎಫ್ ಎಸ್ ಎಲ್ ತಂಡ ಹಾಗೂ ಡಾಗ್ ಸ್ಕ್ವಾಡ್ ತಂಡ ಪರಿಶೀಲನೆ ನಡೆಸಿ, ತನಿಖೆ ಮುಂದುವರಿಸಿದ್ದಾರೆ.
ರಾಮಕೃಷ್ಣಪ್ಪ ಕೊಲೆಗೆ ಕುಟುಂಬಸ್ಥರು ಕಣ್ಣೀರು ಸುರಿಸಿದ್ದು ಕೊಲೆ ಆರೋಪಿ ನಾಗರಾಜ್ ಕೃತ್ಯಕ್ಕೆ ಹಿಡಿ ಶಾಪ ಹಾಕಿದ್ದಾರೆ.
ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…