ಚಿಕ್ಕಬಳ್ಳಾಪುರ : ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆಯ ಗಂಡನ ಮೇಲೆ ಮಚ್ಚಿನಿಂದ ದಾಳಿ ನಡೆಸಿ ಬರ್ಬರ ಕೊಲೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲ್ಲೂಕಿನ ಚೋಳಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗುಂಡ್ಲಕೊತ್ತೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಗಂಗರತ್ನಮ್ಮ ಪತಿ 56 ವರ್ಷದ ರಾಮಕೃಷ್ಣಪ್ಪ ಕೊಲೆಯಾದ ವ್ಯಕ್ತಿಯಾಗಿದ್ದು, ಇಂದು ಬೆಳಗ್ಗೆ ತೋಟದ ಮನೆಯಿಂದ ಚೋಳಶೆಟ್ಟಿಹಳ್ಳಿ ಗ್ರಾಮದ ಹಾಲಿನ ಡೇರಿಯಿಂದ ಹಾಲು ತರಲು ಬಂದಿದ್ದ ವೇಳೆ ಆತನ ಅಣ್ಣನ ಮಗ ನಾಗರಾಜ್ ಏಕಾಏಕಿ ಮಚ್ಚಿನಿಂದ ದಾಳಿ ನಡೆಸಿ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದಾನೆ. ತೀವ್ರ ಗಾಯಗೊಂಡ ರಾಮಕೃಷ್ಣಪ್ಪ ರಕ್ತದ ಮಡುವಿನಲ್ಲಿ ಸ್ಥಳದಲ್ಲೇ ಬಿದ್ದು ಪ್ರಾಣ ಬಿಟ್ಟಿದ್ದಾನೆ ಎನ್ನಲಾಗಿದೆ.
ಘಟನೆಯ ನಂತರ ಆರೋಪಿ ನಾಗರಾಜ್ ಪರಾರಿಯಾಗಿದ್ದಾನೆ. ಇನ್ನು ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ಎಸ್ಪಿ ಡಿ.ಎಲ್.ನಾಗೇಶ್, ಗೌರಿಬಿದನೂರು ವೃತ್ತ ನಿರೀಕ್ಷಕ ಸತ್ಯನಾರಾಯಣ ಸೇರಿದಂತೆ ಗೌರಿಬಿದನೂರು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸ್ಥಳದಲ್ಲಿ ಎಫ್ ಎಸ್ ಎಲ್ ತಂಡ ಹಾಗೂ ಡಾಗ್ ಸ್ಕ್ವಾಡ್ ತಂಡ ಪರಿಶೀಲನೆ ನಡೆಸಿ, ತನಿಖೆ ಮುಂದುವರಿಸಿದ್ದಾರೆ.
ರಾಮಕೃಷ್ಣಪ್ಪ ಕೊಲೆಗೆ ಕುಟುಂಬಸ್ಥರು ಕಣ್ಣೀರು ಸುರಿಸಿದ್ದು ಕೊಲೆ ಆರೋಪಿ ನಾಗರಾಜ್ ಕೃತ್ಯಕ್ಕೆ ಹಿಡಿ ಶಾಪ ಹಾಕಿದ್ದಾರೆ.
ದೊಡ್ಡಬಳ್ಳಾಪುರ: ನಗರದ ಕೋಟೆ ರಸ್ತೆಯಲ್ಲಿರುವ ಕಿಲ್ಲಾ ಮಸೀದಿಯಲ್ಲಿ ಮೊಹರಂ ಅಂಗವಾಗಿ ಶಿಯಾ ಮುಸ್ಲಿಂ ಸಮುದಾಯದವರ ಹಸೇನ್–ಹುಸೇನ್ ಆಚರಣೆ ಶುಕ್ರವಾರ ಶ್ರದ್ಧಾಭಕ್ತಿಯಿಂದ…
ಬೆಂಗಳೂರು, ಜುಲೈ 2026: ಅಂತರರಾಷ್ಟ್ರೀಯ ಪ್ಲಾಸ್ಟಿಕ್ ಸರ್ಜರಿ ದಿನಾಚರಣೆ-2026ರ ಅಂಗವಾಗಿ, ಬೆಂಗಳೂರಿನ ಆರ್.ಆರ್. ನಗರದ ಸ್ಪರ್ಶ್ ಆಸ್ಪತ್ರೆ ಸಂಕೀರ್ಣ ಪುನರ್ನಿರ್ಮಾಣ,…
ದೊಡ್ಡಬಳ್ಳಾಪುರ: ತಾಲ್ಲೂಕಿನಲ್ಲಿ ಯಾವುದೇ ಕಾರಣಕ್ಕೂ ಭ್ರಷ್ಟಾಚಾರಕ್ಕೆ ಅವಕಾಶ ನೀಡುವುದಿಲ್ಲ. ಸರ್ಕಾರಿ ಕಚೇರಿಗಳಲ್ಲಿ ಯಾವುದೇ ಅಧಿಕಾರಿ ಸಾರ್ವಜನಿಕರಿಂದ ಹಣ ಅಥವಾ ಲಂಚಕ್ಕೆ…
ಬೆಂಗಳೂರು: ಹೆಸರಘಟ್ಟ ಹೋಬಳಿಯ ತೋಟಗೆರೆ ಗ್ರಾಮದಲ್ಲಿ ಗುರುವಾರ ರಾತ್ರಿ ಸುಮಾರು 10.50ರ ವೇಳೆಗೆ ಮನೆಯೊಳಗೆ ನುಗ್ಗಿದ್ದ ಸುಮಾರು 5 ಅಡಿ…
ದೊಡ್ಡಬಳ್ಳಾಪುರ: ಆಶ್ರಯ ನಿವೇಶನ ಹಾಗೂ ವಸತಿ ಯೋಜನೆಯಡಿ ಮಂಜೂರಾಗಿರುವ ಸರ್ಕಾರಿ ಜಮೀನಿನಲ್ಲಿ ನಿವೇಶನ ರಹಿತರಿಗೆ ಹಕ್ಕುಪತ್ರ ವಿತರಿಸುವಲ್ಲಿ ಕೆಲವು ಗ್ರಾಮ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದ ಆವರಣದಲ್ಲಿ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಯು ಜುಲೈ 5 ಕ್ಕೆ…